ಭಾರತದ ಮೊದಲ ಬುಲೆಟ್ ರೈಲಿನ ಬಿಗ್ ಅಪ್ಡೇಟ್; ಇಲ್ಲಿವೆ ಪ್ರಮುಖಾಂಶಗಳು
Mumbai-Ahmedabad Bullet Train: ಬಹುನಿರೀಕ್ಷಿತ ಭಾರತದ ಮೊಸಲ ಹೈಸ್ಪೀಡ್ ಬುಲೇಟ್ ರೈಲು ಸಂಚಾರದ ಬಗ್ಗೆ ಅಪ್ಡೇಟ್ ಮಾಹಿತಿಯೊಂದು ಲಭ್ಯವಾಗಿದೆ. ಮುಂಬೈ-ಅಹಮದಾಬಾದ್ ನಡುವೆ ಸಂಚಾರ ಆರಂಭ ಮಾಡುವ ಬುಲೆಟ್ ರೈಲು ಕ್ರಾಂತಿಯನ್ನುಂಟು ಮಾಡಲಿದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಇದು ಯಾವ್ಯಾವ ಮಾರ್ಗಗಳಲ್ಲಿ ಓಡಲಿದೆ ಎಂದು ಇಲ್ಲಿ ತಿಳಿಯಿರಿ.
ಬುಲೆಟ್ ರೈಲು ದೇಶಾದ್ಯಂತ ಸಂಪರ್ಕ ಸಾಧಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ ಮೂಲಸೌಕರ್ಯಕ್ಕೆ ಹೆಚ್ಚಿನ ಅನುಕೂಲತೆ ಕಲ್ಪಿಸಲಿದೆ. ಮುಂಬೈ-ಅಹಮದಾಬಾದ್ ನಡುವೆ ಸಂಚರಿಸಲಿರುವ ಬುಲೆಟ್ ರೈಲು ಭಾರತದ ಮೊದಲ ಹೈಸ್ಪೀಡ್ ರೈಲಾಗಲಿದೆ. ಈ ರೈಲು ಮಾರ್ಗದ ಒಟ್ಟು ಉದ್ದ 508 ಕಿಲೋ ಮೀಟರ್ ಆಗಿದೆ.

ಈ ಪ್ರಮುಖ ಯೋಜನೆಯು ಭಾರತದ ಎರಡು ಪ್ರಮುಖ ನಗರಗಳಾದ ಮಹಾರಾಷ್ಟ್ರದ ಮುಂಬೈ ಮತ್ತು ಗುಜರಾತ್ನ ಅಹಮದಾಬಾದ್ ಅನ್ನು ಸಂಪರ್ಕಿಸುವ ಗುರಿಯನ್ನು ಹೊಂದಿದೆ. ಬುಲೆಟ್ ರೈಲು ಪ್ರಯಾಣಿಕರಿಗೆ ಪ್ರಸ್ತುತ ಸಾರಿಗೆಗಳಿಗಿಂತ ಹೆಚ್ಚು ವೇಗದ ಪ್ರಯಾಣದ ಸೇವೆಯನ್ನು ನೀಡಲಿದೆ.
ಪ್ರಮುಖ ವಿವರಗಳು
* ರೈಲು ಮಾರ್ಗದ ಉದ್ದ 508 ಕಿಲೋ ಮೀಟರ್ ಆಗಿದೆ.
* ಬುಲೆಟ್ ರೈಲು ಗಂಟೆಗೆ 320 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತದೆ.
* ಈ ಯೋಜನೆಯು ಮುಂಬೈ-ಅಹಮದಾಬಾದ್ ನಡುವಿನ ಪ್ರಯಾಣದ ಸಮಯವನ್ನು 7 ಗಂಟೆಗಳಿಂದ ಕೇವಲ 2-3 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ.
ನಿಲ್ದಾಣಗಳ ವಿವರ: ಈ ರೈಲು ಮುಂಬೈ, ಥಾಣೆ, ವಿರಾರ್, ಬೋಯ್ಸರ್, ವಾಪಿ, ಬಿಲ್ಲಿಮೊರಾ, ಸೂರತ್, ಭರೂಚ್, ವಡೋದರಾ, ಆನಂದ್, ಅಹಮದಾಬಾದ್ ಮತ್ತು ಸಬರಮತಿ ಸೇರಿ 12 ಪ್ರಮುಖ ನಿಲ್ದಾಣಗಳ ಮೂಲಕ ಹಾದುಹೋಗಲಿದೆ.
ಮುಂಬೈ-ಅಹಮದಾಬಾದ್ ಬುಲೆಟ್ ರೈಲಿನ ನಿರ್ಮಾಣವು ಈಗಾಗಲೇ ನಡೆಯುತ್ತಿದ್ದು, ಬಹುತೇಕ ಕಾಮಗಾರಿಗಳು ಮುಗಿದಿವೆ. 2028ರ ವೇಳೆಗೆ ಅಧಿಕೃತವಾಗಿ ಉದ್ಘಾಟನೆಯಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 21 ಕಿಲೋ ಮೀಟರ್ ನೀರೊಳಗಿನ ಸುರಂಗದೊಳಗಿನ ಕಾಮಗಾರಿ ಪ್ರಾರಂಭ ಸೇರಿದಂತೆ ಹಲವು ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ.
ಹೀಗೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲಿನ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಜೊತೆಗೆ ರೈಲ್ವೇ ಸಚಿವಾಲಯವು 7 ಹೆಚ್ಚುವರಿ ಹೈಸ್ಪೀಡ್ ರೈಲು ಕಾರಿಡಾರ್ಗಳಿಗಾಗಿ ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ಸಿದ್ಧಪಡಿಸಲು ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ಗೆ ವಹಿಸಿದೆ.
1. ನವದೆಹಲಿ - ವಾರಣಾಸಿ
2. ನವದೆಹಲಿ - ಅಹಮದಾಬಾದ್
3. ನವದೆಹಲಿ - ಅಮೃತಸರ
4. ಮುಂಬೈ - ನಾಗ್ಪುರ
5. ಮುಂಬೈ - ಪುಣೆ - ಹೈದರಾಬಾದ್
6. ಚೆನ್ನೈ - ಬೆಂಗಳೂರು - ಮೈಸೂರು
7. ವಾರಣಾಸಿ - ಹೌರಾ
ನವದೆಹಲಿದೆಹಲಿ-ವಾರಣಾಸಿ ಮತ್ತು ವಾರಣಾಸಿ-ಹೌರಾ ಕಾರಿಡಾರ್ಗಳು ಉತ್ತರ ಪ್ರದೇಶದ ಮೂಲಕ ಹಾದು ಹೋಗಲಿವೆ. ಇನ್ನು ಈ ಯೋಜನೆಗಳ ಡಿಪಿಆರ್ಗಳ ಫಲಿತಾಂಶಗಳು, ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತೆ ಮತ್ತು ಹಣಕಾಸಿನ ಮೇಲೆ ನಿಂತಿದೆ. ಈ ಯೋಜನೆಯನ್ನು ಜಪಾನ್ ಸರ್ಕಾರದ ತಾಂತ್ರಿಕ ಮತ್ತು ಆರ್ಥಿಕ ಬೆಂಬಲದೊಂದಿಗೆ ನಿರ್ಮಿಸಲಾಗುತ್ತಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications