ಶೀಘ್ರ ಈ ಕೇಂದ್ರಾಡಳಿತ ಪ್ರದೇಶದಿಂದ ಬೆಂಗಳೂರಿಗೆ ವಿಮಾನ
ಬೆಂಗಳೂರು, ಮೇ 06: ಕೇಂದ್ರಾಡಳಿತ ಪ್ರದೇಶ ಮತ್ತು ಪ್ರವಾಸಿ ತಾಣವಾದ ಪುದುಚೇರಿಯಿಂದ ಉದ್ಯಾನ ನಗರಿ ಬೆಂಗಳೂರಿಗೆ ವಿಮಾನ ಸೇವೆ ಆರಂಭವಾಗಲಿದೆ. ಈಗಾಗಲೇ ಇಂಡಿಗೋ ವಿಮಾನ ಸೇವೆ ಆರಂಭಿಸುವ ಕುರಿತು ಪುದುಚೇರಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದೆ.
ಪುದುಚೇರಿ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಆರಂಭಿಸಲು ಇಂಡಿಗೋ ವಿಮಾನಯಾನ ಸಂಸ್ಥೆ ಆಸಕ್ತಿ ತೋರಿದೆ. ಈ ಬಗ್ಗೆ ಇಂಡಿಗೋ ಅಧಿಕಾರಿಗಳು ಕಳೆದ ವಾರ ಪುದುಚೇರಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಿದ್ದಾರೆ.

ಮೊದಲ ಹಂತದಲ್ಲಿ ಇಂಡಿಗೋ ಬೆಂಗಳೂರು-ಪುದುಚೇರಿ, ಪುದುಚೇರಿ-ಹೈದರಾಬಾದ್ ನಡುವೆ ವಿಮಾನ ಸೇವೆ ಆರಂಭಿಸಲು ಚಿಂತನೆ ನಡೆಸಿದೆ. ಎಲ್ಲಾ ಪ್ರಕ್ರಿಯೆಗಳು ಮುಗಿದರೆ ಜುಲೈ 1ರಿಂದಲೇ ವಿಮಾನ ಸೇವೆ ಆರಂಭವಾಗಲಿದೆ.
ಯಾವ ಮಾದರಿ ವಿಮಾನ?; ಇಂಡಿಗೋ ವಿಮಾನಯಾನ ಸಂಸ್ಥೆಯ ಹಿರಿಯ ಮ್ಯಾನೇಜರ್ (ವಿಮಾನ ಸುರಕ್ಷತೆ, ಕಾರ್ಯಾಚರಣೆ) ರಾಮ್ ಬಾಬು ಮಹತೋ ನೇತೃತ್ವದ ಅಧಿಕಾರಿಗಳ ತಂಡ ಪುದುಚೇರಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಕಾರ್ಯ ಮುಗಿಸಿದೆ.
ವಿಮಾನ ನಿಲ್ದಾಣದಿಂದ ಎಟಿಆರ್-72 ಮಾದರಿಯ ವಿಮಾನವನ್ನು ಹಾರಾಟ ನಡೆಸುವ ಸಾಧ್ಯತೆಗಳ ಕುರಿತು ಮಾಹಿತಿ ಸಂಗ್ರಹ ಮಾಡಿದೆ. ಪುದುಚೇರಿಯಿಂದ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಮಾತ್ರ ಸೇವೆಯನ್ನು ಆರಂಭಿಸಿತ್ತು.
ಸ್ಪೈಸ್ ಜೆಟ್ ಪುದುಚೇರಿ-ಬೆಂಗಳೂರು, ಪುದುಚೇರಿ-ಹೈದರಾಬಾದ್ ಮಾರ್ಗದಲ್ಲಿ ಪ್ರತಿದಿನದ ವಿಮಾನ ಸೇವೆ ನೀಡುತ್ತಿತ್ತು. ಆದರೆ ಕೆಲವು ಕಾರಣಗಳಿಂದ ಈ ಸೇವೆಗಳು ಮಾರ್ಚ್ನಿಂದ ರದ್ದಾಗಿದ್ದು, ಈಗ ಇಂಡಿಗೋ ವಿಮಾನ ಸಂಪರ್ಕ ಕಲ್ಪಿಸಲು ಆಸಕ್ತಿ ತೋರಿದೆ.
ಪುದುಚೇರಿ ವಿಮಾನ ನಿಲ್ದಾಣದ ನಿರ್ದೇಶಕ ರಾಜಶೇಖರ ರೆಡ್ಡಿ ಮಾತನಾಡಿ,"ಇಂಡಿಗೋ ಅಧಿಕಾರಿಗಳ ತಂಡ ಟರ್ಮಿನಲ್, ರನ್ವೇ, ಏರ್ ಟ್ರಾಫಿಕ್ ಕಂಟ್ರೋಲ್, ಕಛೇರಿಗಳು ಸೇರಿ ವಿಮಾನ ನಿಲ್ದಾಣದಲ್ಲಿ ಲಭ್ಯವಿರುವ ಸೇವೆಗಳ ಕುರಿತು ಮಾಹಿತಿ ಸಂಗ್ರಹ ಮಾಡಿದೆ" ಎಂದು ಹೇಳಿದ್ದಾರೆ.
"ಈಗ ಇರುವ ಸೇವೆಗಳ ಮೂಲಕ ವಿಮಾನಗಳ ವಾಣಿಜ್ಯ ಸಂಚಾರ ಆರಂಭಿಸಬಹುದು ಎಂದು ತಂಡ ತೃಪ್ತಿ ವ್ಯಕ್ತಪಡಿಸಿದೆ. ಜುಲೈ 1 ರಿಂದ ಇಂಡಿಗೂ ಬೆಂಗಳೂರು, ಹೈದರಾಬಾದ್ ನಡುವೆ ವಿಮಾನ ಸೇವೆ ಆರಂಭಿಸುವ ಚಿಂತನೆಯಲ್ಲಿದೆ" ಎಂದು ತಿಳಿಸಿದ್ದಾರೆ.
ಪುದುಚೇರಿ ಲೆಫ್ಟಿನೆಂಟ್ ಗೌರ್ನರ್, ಮುಖ್ಯಮಂತ್ರಿಗಳು ಮತ್ತು ಪ್ರವಾಸೋದ್ಯಮ ಸಚಿವರು ಎಲ್ಲಾ ವಿಮಾನಯಾನ ಕಂಪನಿಗಳಿಗೆ ಪುದುಚೇರಿ ಮತ್ತು ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲು ವಿಮಾನ ಸೇವೆ ಆರಂಭಿಸಬೇಕು ಎಂದು ಮನವಿ ಮಾಡಿದ್ದರು.
ಏಪ್ರಿಲ್ 16ರಂದು ಇಂಡಿಗೋ ವಿಮಾನಯಾನ ಕಂಪನಿ ತಂಡ ಪುದುಚೇರಿಗೆ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಸಂಗ್ರಹ ಮಾಡಿತ್ತು. ಈಗ ವಿಮಾನ ಹಾರಾಟ, ಕಾರ್ಯಾಚರಣೆ ವಿಭಾಗದ ತಂಡ ವಿಮಾನ ನಿಲ್ದಾಣದ ಕುರಿತು ಪರಿಶೀಲನೆ ನಡೆಸಿ ವಿಮಾನ ಹಾರಾಟ ಆರಂಭಿಸಬಹುದು ಎಂದು ಹೇಳಿದೆ.
1989ರಲ್ಲಿಯೇ ಪುದುಚೇರಿಯ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿತು. ಸಣ್ಣ ದೇಶಿಯ ವಿಮಾನಗಳ ಹಾರಾಟವನ್ನು ಮೊದಲು ಆರಂಭಿಸಲಾಗಿತ್ತು. ಬಳಿಕ ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ವಿಮಾನ ನಿಲ್ದಾಣ ವಿಸ್ತರಣೆ ಮಾಡಲು ಒಪ್ಪಿಗೆ ನೀಡಿತು.
ಹೊಸ ಟರ್ಮಿನಲ್ ಕಟ್ಟಡ, ರನ್ ವೇ ವಿಸ್ತರಣೆ ಸೇರಿದಂತೆ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಿ 2013ರ ಜನವರಿಯಲ್ಲಿ ಅಭಿವೃದ್ಧಿಗೊಂಡ ವಿಮಾನ ನಿಲ್ದಾಣ ಉದ್ಘಾಟನೆಗೊಂಡಿತು. 2017ರ ತನಕ ಬೆಂಗಳೂರು-ಪುದುಚೇರಿ ನಡುವೆ ಮಾತ್ರ ವಿಮಾನ ಸೇವೆ ಇತ್ತು. ಬಳಿಕ ಹೈದರಾಬಾದ್ಗೆ ಸಹ ಸೇವೆ ಆರಂಭಗೊಂಡಿತು. ಆದರೆ ಈಗ ಎರಡೂ ಮಾರ್ಗದ ಸೇವೆಗಳು ಕೆಲ ಕಾರಣದಿಂದ ರದ್ದಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications