ಶೀಘ್ರ ಈ ಕೇಂದ್ರಾಡಳಿತ ಪ್ರದೇಶದಿಂದ ಬೆಂಗಳೂರಿಗೆ ವಿಮಾನ
ಬೆಂಗಳೂರು, ಮೇ 06: ಕೇಂದ್ರಾಡಳಿತ ಪ್ರದೇಶ ಮತ್ತು ಪ್ರವಾಸಿ ತಾಣವಾದ ಪುದುಚೇರಿಯಿಂದ ಉದ್ಯಾನ ನಗರಿ ಬೆಂಗಳೂರಿಗೆ ವಿಮಾನ ಸೇವೆ ಆರಂಭವಾಗಲಿದೆ. ಈಗಾಗಲೇ ಇಂಡಿಗೋ ವಿಮಾನ ಸೇವೆ ಆರಂಭಿಸುವ ಕುರಿತು ಪುದುಚೇರಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದೆ.
ಪುದುಚೇರಿ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಆರಂಭಿಸಲು ಇಂಡಿಗೋ ವಿಮಾನಯಾನ ಸಂಸ್ಥೆ ಆಸಕ್ತಿ ತೋರಿದೆ. ಈ ಬಗ್ಗೆ ಇಂಡಿಗೋ ಅಧಿಕಾರಿಗಳು ಕಳೆದ ವಾರ ಪುದುಚೇರಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಿದ್ದಾರೆ.

ಮೊದಲ ಹಂತದಲ್ಲಿ ಇಂಡಿಗೋ ಬೆಂಗಳೂರು-ಪುದುಚೇರಿ, ಪುದುಚೇರಿ-ಹೈದರಾಬಾದ್ ನಡುವೆ ವಿಮಾನ ಸೇವೆ ಆರಂಭಿಸಲು ಚಿಂತನೆ ನಡೆಸಿದೆ. ಎಲ್ಲಾ ಪ್ರಕ್ರಿಯೆಗಳು ಮುಗಿದರೆ ಜುಲೈ 1ರಿಂದಲೇ ವಿಮಾನ ಸೇವೆ ಆರಂಭವಾಗಲಿದೆ.
ಯಾವ ಮಾದರಿ ವಿಮಾನ?; ಇಂಡಿಗೋ ವಿಮಾನಯಾನ ಸಂಸ್ಥೆಯ ಹಿರಿಯ ಮ್ಯಾನೇಜರ್ (ವಿಮಾನ ಸುರಕ್ಷತೆ, ಕಾರ್ಯಾಚರಣೆ) ರಾಮ್ ಬಾಬು ಮಹತೋ ನೇತೃತ್ವದ ಅಧಿಕಾರಿಗಳ ತಂಡ ಪುದುಚೇರಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಕಾರ್ಯ ಮುಗಿಸಿದೆ.
ವಿಮಾನ ನಿಲ್ದಾಣದಿಂದ ಎಟಿಆರ್-72 ಮಾದರಿಯ ವಿಮಾನವನ್ನು ಹಾರಾಟ ನಡೆಸುವ ಸಾಧ್ಯತೆಗಳ ಕುರಿತು ಮಾಹಿತಿ ಸಂಗ್ರಹ ಮಾಡಿದೆ. ಪುದುಚೇರಿಯಿಂದ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಮಾತ್ರ ಸೇವೆಯನ್ನು ಆರಂಭಿಸಿತ್ತು.
ಸ್ಪೈಸ್ ಜೆಟ್ ಪುದುಚೇರಿ-ಬೆಂಗಳೂರು, ಪುದುಚೇರಿ-ಹೈದರಾಬಾದ್ ಮಾರ್ಗದಲ್ಲಿ ಪ್ರತಿದಿನದ ವಿಮಾನ ಸೇವೆ ನೀಡುತ್ತಿತ್ತು. ಆದರೆ ಕೆಲವು ಕಾರಣಗಳಿಂದ ಈ ಸೇವೆಗಳು ಮಾರ್ಚ್ನಿಂದ ರದ್ದಾಗಿದ್ದು, ಈಗ ಇಂಡಿಗೋ ವಿಮಾನ ಸಂಪರ್ಕ ಕಲ್ಪಿಸಲು ಆಸಕ್ತಿ ತೋರಿದೆ.
ಪುದುಚೇರಿ ವಿಮಾನ ನಿಲ್ದಾಣದ ನಿರ್ದೇಶಕ ರಾಜಶೇಖರ ರೆಡ್ಡಿ ಮಾತನಾಡಿ,"ಇಂಡಿಗೋ ಅಧಿಕಾರಿಗಳ ತಂಡ ಟರ್ಮಿನಲ್, ರನ್ವೇ, ಏರ್ ಟ್ರಾಫಿಕ್ ಕಂಟ್ರೋಲ್, ಕಛೇರಿಗಳು ಸೇರಿ ವಿಮಾನ ನಿಲ್ದಾಣದಲ್ಲಿ ಲಭ್ಯವಿರುವ ಸೇವೆಗಳ ಕುರಿತು ಮಾಹಿತಿ ಸಂಗ್ರಹ ಮಾಡಿದೆ" ಎಂದು ಹೇಳಿದ್ದಾರೆ.
"ಈಗ ಇರುವ ಸೇವೆಗಳ ಮೂಲಕ ವಿಮಾನಗಳ ವಾಣಿಜ್ಯ ಸಂಚಾರ ಆರಂಭಿಸಬಹುದು ಎಂದು ತಂಡ ತೃಪ್ತಿ ವ್ಯಕ್ತಪಡಿಸಿದೆ. ಜುಲೈ 1 ರಿಂದ ಇಂಡಿಗೂ ಬೆಂಗಳೂರು, ಹೈದರಾಬಾದ್ ನಡುವೆ ವಿಮಾನ ಸೇವೆ ಆರಂಭಿಸುವ ಚಿಂತನೆಯಲ್ಲಿದೆ" ಎಂದು ತಿಳಿಸಿದ್ದಾರೆ.
ಪುದುಚೇರಿ ಲೆಫ್ಟಿನೆಂಟ್ ಗೌರ್ನರ್, ಮುಖ್ಯಮಂತ್ರಿಗಳು ಮತ್ತು ಪ್ರವಾಸೋದ್ಯಮ ಸಚಿವರು ಎಲ್ಲಾ ವಿಮಾನಯಾನ ಕಂಪನಿಗಳಿಗೆ ಪುದುಚೇರಿ ಮತ್ತು ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲು ವಿಮಾನ ಸೇವೆ ಆರಂಭಿಸಬೇಕು ಎಂದು ಮನವಿ ಮಾಡಿದ್ದರು.
ಏಪ್ರಿಲ್ 16ರಂದು ಇಂಡಿಗೋ ವಿಮಾನಯಾನ ಕಂಪನಿ ತಂಡ ಪುದುಚೇರಿಗೆ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಸಂಗ್ರಹ ಮಾಡಿತ್ತು. ಈಗ ವಿಮಾನ ಹಾರಾಟ, ಕಾರ್ಯಾಚರಣೆ ವಿಭಾಗದ ತಂಡ ವಿಮಾನ ನಿಲ್ದಾಣದ ಕುರಿತು ಪರಿಶೀಲನೆ ನಡೆಸಿ ವಿಮಾನ ಹಾರಾಟ ಆರಂಭಿಸಬಹುದು ಎಂದು ಹೇಳಿದೆ.
1989ರಲ್ಲಿಯೇ ಪುದುಚೇರಿಯ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿತು. ಸಣ್ಣ ದೇಶಿಯ ವಿಮಾನಗಳ ಹಾರಾಟವನ್ನು ಮೊದಲು ಆರಂಭಿಸಲಾಗಿತ್ತು. ಬಳಿಕ ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ವಿಮಾನ ನಿಲ್ದಾಣ ವಿಸ್ತರಣೆ ಮಾಡಲು ಒಪ್ಪಿಗೆ ನೀಡಿತು.
ಹೊಸ ಟರ್ಮಿನಲ್ ಕಟ್ಟಡ, ರನ್ ವೇ ವಿಸ್ತರಣೆ ಸೇರಿದಂತೆ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಿ 2013ರ ಜನವರಿಯಲ್ಲಿ ಅಭಿವೃದ್ಧಿಗೊಂಡ ವಿಮಾನ ನಿಲ್ದಾಣ ಉದ್ಘಾಟನೆಗೊಂಡಿತು. 2017ರ ತನಕ ಬೆಂಗಳೂರು-ಪುದುಚೇರಿ ನಡುವೆ ಮಾತ್ರ ವಿಮಾನ ಸೇವೆ ಇತ್ತು. ಬಳಿಕ ಹೈದರಾಬಾದ್ಗೆ ಸಹ ಸೇವೆ ಆರಂಭಗೊಂಡಿತು. ಆದರೆ ಈಗ ಎರಡೂ ಮಾರ್ಗದ ಸೇವೆಗಳು ಕೆಲ ಕಾರಣದಿಂದ ರದ್ದಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications