IRCTC: ಬರೀ ₹15,000ದಲ್ಲಿ ಅತೀ ಕಡಿಮೆ ದರದಲ್ಲಿ ಪ್ರಸಿದ್ಧ ಪ್ರವಾಸಿ ತಾಣಗಳನ್ನು ನೋಡಬೇಕೆ?-ಮಾಹಿತಿ, ವಿವರ ಇಲ್ಲಿದೆ
ಭಾರತೀಯ ರೈಲ್ವೆಯ ಪ್ರವಾಸೋದ್ಯಮ ವಿಭಾಗವಾದ ಐಆರ್ಸಿಟಿಸಿಯು ಕೈಗೆಟಕುಗ ದರದಲ್ಲಿ ಬರೀ ದೇಶ ಅಲ್ಲದೆ, ವಿದೇಶಗಳಿಗೂ ಪ್ರವಾಸಿ ಪ್ಯಾಕೇಜ್ಗಳನ್ನು ಘೋಷಣೆ ಮಾಡುತ್ತಲೇ ಬಂದಿದೆ. ಹಾಗೆಯೇ ಇದೀಗ ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರಾ ಎನ್ನುವ ಪ್ರವಾಸದ ಪ್ಯಾಕೇಜ್ ಅನ್ನು ಘೋಷಣೆ ಮಾಡಿದೆ. ಹಾಗಾದರೆ ಇದು ಆರಂಭವಾಗುವುದು ಎಲ್ಲಿಂದ, ಯಾವಾಗ ಹಾಗೂ ಪ್ರಯಾಣ ದರಗಳ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕರ್ನಾಟಕ ಸರ್ಕಾರವು ಐಆರ್ಸಿಟಿಸಿಯೊಂದಿಗೆ ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರಾ ಥೀಮ್ ಆಧಾರಿತ ತೀರ್ಥಯಾತ್ರೆಯ ಪ್ರವಾಸ ಪ್ಯಾಕೇಜ್ ಅನ್ನು ಆರಂಭಿಸಿದೆ. ಭಾರತ್ ಗೌರವ್ ಟೂರಿಸ್ಟ್ ರೈಲಿನ ಈ 6 ದಿನಗಳ ಪ್ರಯಾಣದಲ್ಲಿ ತಿರುವನಂತಪುಂ, ಕನ್ಯಾಕುಮಾರಿ, ರಾಮೇಶ್ವರಂ ಮತ್ತು ಮಧುರೈನ ಪ್ರಮುಖ ಪವಿತ್ರ ಸ್ಥಳಗಳನ್ನು ವೀಕ್ಷಣೆ ಮಾಡಬಹುದಾಗಿದೆ.

ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರೆಯ ಅಡಿಯಲ್ಲಿ 5 ರಾತ್ರಿ ಹಾಗೂ 6 ಹಗಲುಗಳ ಪ್ರವಾಸ ಇರಲಿದ್ದು, ಇದು ಜುಲೈ 1ರಂದು ಆರಂಭ ಆಗಲಿದೆ. ಕರ್ನಾಟಕ ಸರ್ಕಾರ ಸಹ ಈ ಪ್ರವಾಸ ಮಾಡುವವರಿಗೆ ಬರೋಬ್ಬರಿ 5,000 ರೂಪಾಯಿ ಸಹಾಯಧನ ನೀಡಲಿದೆ ಎನ್ನುವ ಮಾಹಿತಿ ಇದೆ.
ಈ ಪ್ರವಾಸದಲ್ಲಿ ಕನ್ಯಾಕುಮಾರಿಯಲ್ಲಿ ಭಗವತಿ ದೇವಸ್ಥಾನ, ವಿವೇಕಾನಂದ ಶಿಲಾ ಸ್ಮಾರಕ, ತಿರುವನಂತಪುರದಲ್ಲಿ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ರಾಮೇಶ್ವರದಲ್ಲಿ ರಾಮನಾಥಸ್ವಾಮಿ ದೇವಸ್ಥಾನ, ಮಧುರೈನಲ್ಲಿ ಮೀನಾಕ್ಷಿ ದೇವಸ್ಥಾನಗಳನ್ನು ವೀಕ್ಷಣೆ ಮಾಡಬಹುದಾಗಿದೆ.
ಪ್ರಯಾಣ ವಿಭಾಗ ರೈಲು ಆಗಿದ್ದು, ಈ ರೈಲು ಬೆಳಗಾವಿಯಿಂದ ಹೊರಡಲಿದ್ದು, ಕನ್ಯಾಕುಮಾರಿ, ತಿರುವನಂತಪುರಂ, ರಾಮೇಶ್ವರಂ, ಮಧುರೈಗೆ ಪ್ರಯಾಣ ಬೆಳೆಸಲಿದೆ. ಈ ಪ್ರವಾಸ ಕೊನೆಗೆ ಬೆಳಗಾವಿಯಲ್ಲಿ ಮುಕ್ತಾಯವಾಗಲಿದೆ. ಇನ್ನು ಈ ರೈಲಿಗೆ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು, ಬೆಂಗಳೂರಿನಲ್ಲಿ ನಿಲುಡೆ ಇರಲಿದೆ.
ಭಾರತ ಗೌರವ್ ರೈಲು ಯೋಜನೆಯಡಿಯಲ್ಲಿ ರೈಲು ಪ್ರವಾಸೋದ್ಯಮವನ್ನು ಉತ್ತೇಜಿಸಲು ಭಾರತೀಯ ರೈಲ್ವೆಯು ಸುಮಾರಿ ಶೇಕಡ 33ರಷ್ಟು ರಿಯಾಯಿತಿಯನ್ನು ಪ್ರವಾಸಿಗರಿಗೆ ನೀಡಲಿದೆ. ಪ್ರವಾಸದ ಟಿಕೆಟ್ ದರ ಒಬ್ಬ ವ್ಯಕ್ತಿಗೆ 15,000 ರೂಪಾಯಿ ಇರಲಿದೆ.
ಪ್ರವಾಸಿಗರು https://www.irctctourism.com/ ವೆಬ್ಸೈಟ್ನಲ್ಲಿ IRCTC ದಿವ್ಯ ದಕ್ಷಿಣ ಯಾತ್ರಾ ಪ್ಯಾಕೇಜ್ ಅನ್ನು ಬುಕ್ ಮಾಡಬೇಕಾಗುತ್ತದೆ. ಈ ವೆಬ್ಸೈಟ್ ತೆರೆದ ನಂತರ ಭಾರತ್ ಗೌರವ್ ವಿಭಾಗಕ್ಕೆ ಹೋಗಿ, ಇದರಲ್ಲಿ ದಿವ್ಯ ದಕ್ಷಿಣ ಯಾತ್ರೆ ಸೇರಿದಂತೆ ಹಲವು ದರ್ಶನ ಪ್ರವಾಸಗಳು ವಿವಿಧ ದಿನಾಂಕಗಳಲ್ಲಿ ಲಭ್ಯವಿದೆ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications