ಕರಾವಳಿ-ತಿರುಪತಿಗೆ ಸಂಚಾರ ಈಗ ಸುಲಭ, ರೈಲು ಸೇವೆ ವಿಸ್ತರಣೆ ಮಾಹಿತಿ
ಉಡುಪಿ, ಅಕ್ಟೋಬರ್ 09: ಕರ್ನಾಟಕದ ಕರಾವಳಿಯಿಂದ ತಿರುಪತಿಗೆ ಭೇಟಿ ನೀಡುವ ಭಕ್ತರಿಗೆ ಸಿಹಿಸುದ್ದಿ. ಭಾರತೀಯ ರೈಲ್ವೆ ಕಾಚಿಗುಡ-ಮಂಗಳೂರು ಎಕ್ಸ್ಪ್ರೆಸ್ ರೈಲನ್ನು ವಿಸ್ತರಣೆ ಮಾಡಲು ಒಪ್ಪಿಗೆ ನೀಡಿದೆ. ಲೋಕಸಭೆ ಚುನಾವಣೆ 2024ರ ಬಳಿಕ ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಕರಾವಳಿ ಭಾಗದ ಜನರ ಈ ಬಹುದಿನದ ಬೇಡಿಕೆಗೆ ಈಗ ಒಪ್ಪಿಗೆ ಸಿಕ್ಕಿದೆ.
ಈ ಕುರಿತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಮುರುಡೇಶ್ವರ, ಕುಂದಾಪುರ, ಉಡುಪಿ, ಮೂಲ್ಕಿ ಭಾಗದಿಂದಲೂ ತಿರುಪತಿಗೆ ತೆರಳಲು ಭಕ್ತರು ಈ ರೈಲು ಬಳಸಬಹುದು ಎಂದು ಹೇಳಿದ್ದಾರೆ.

ಸಂಸದರು ಫೇಸ್ಬುಕ್ ಪೋಸ್ಟ್ ಹಾಕಿದ್ದು, 'ಈ ವಿಷಯವನ್ನು ನಿಮ್ಮ ಜೊತೆಗೆ ಹಂಚಿಕೊಳ್ಳಲು ಸಂತಸಪಡುತ್ತೇನೆ. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕರಾವಳಿ ಭಾಗದಿಂದ ತಿರುಪತಿಗೆ ಸಂಪರ್ಕಿಸುವ ರೈಲು ಯೋಜನೆಯ ಬಗ್ಗೆ ಬೇಡಿಕೆ ಕೇಳಿ ಬಂದಿತ್ತು.ಸಂಸದನಾದ ನೂರು ದಿನದೊಳಗೆ ಈ ಕೆಲಸ ಮಾಡಿಕೊಡುವೆ ಎಂದು ಭರವಸೆ ನೀಡಿದ್ದೆ. ಈ ಬಗ್ಗೆ ಕೇಂದ್ರ ರೈಲ್ವೆ ಇಲಾಖೆಯ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾದ ಶ್ರೀ ವಿ.ಸೋಮಣ್ಣರವರ ಬಳಿ ವಿಸ್ತೃತವಾದ ವಿವರಣೆಯೊಂದಿಗೆ ಮನವಿ ಸಲ್ಲಿಸಿದ್ದೆ' ಎಂದು ತಿಳಿಸಿದ್ದಾರೆ.
'ಇದೀಗ ನಮ್ಮ ಬೇಡಿಕೆ ಈಡೇರಿದೆ. ಇನ್ನುಮುಂದೆ ಮುರುಡೇಶ್ವರ, ಕುಂದಾಪುರ, ಉಡುಪಿ, ಮೂಲ್ಕಿ ಭಾಗದಿಂದಲೂ ತಿರುಪತಿಗೆ ತೆರಳಲು ರೈಲು ಬಳಸಬಹುದು. ನಮ್ಮ ಬೇಡಿಕೆಯನ್ನು ಗೌರವಿಸಿ ಆದೇಶ ಹೊರಡಿಸಿದ ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಶ್ರೀ ವಿ.ಸೋಮಣ್ಣ ಹಾಗೂ ರೈಲ್ವೆ ಇಲಾಖಾ ಅಧಿಕಾರಿಗಳಿಗೆ ಧನ್ಯವಾದಗಳು' ಎಂದು ಹೇಳಿದ್ದಾರೆ.
ಸಚಿವರ ಪತ್ರ: ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಕಾಚಿಗುಡ-ಮಂಗಳೂರು ಎಕ್ಸ್ಪ್ರೆಸ್ ರೈಲನ್ನು ಮುರುಡೇಶ್ವರ ತನಕ ವಿಸ್ತರಣೆ ಮಾಡಲು ಒಪ್ಪಿಗೆ ನೀಡಿರುವ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಪತ್ರವನ್ನು ಬರೆದಿದ್ದಾರೆ.
ಪತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರೇ ನಿಮ್ಮ ಪತ್ರ ದಿನಾಂಕ 29/8/2024ರಂದು ರೈಲು ನಂಬರ್ 12789/ 12790 ಕಾಚಿಗುಡ-ಮಂಗಳೂರು ಎಕ್ಸ್ಪ್ರೆಸ್ ರೈಲು ವಿಸ್ತರಣೆಗೆ ಮನವಿ ಸಲ್ಲಿಸಿದ್ದೀರಿ.
ರೈಲು ನಂಬರ್ 12789/ 12790 ಕಾಚಿಗುಡ-ಮಂಗಳೂರು ಎಕ್ಸ್ಪ್ರೆಸ್ ರೈಲುನ್ನು ಮುರುಡೇಶ್ವರ ತನಕ ವಿಸ್ತರಣೆ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ಸಚಿವರು ಹೇಳಿದ್ದಾರೆ.
ಕರಾವಳಿ ತಿರುಪತಿ ನಂಟು: ಸಂಸದ ಕೋಟ ಶ್ರೀನಿವಾಸ ಪೂಜಾರಿ ಫೇಸ್ಬುಕ್ ಪೋಸ್ಟ್ ಹಾಕಿದ್ದು, 'ಮಂಗಳೂರಿನ ಧರ್ಮಸ್ಥಳ, ಕಟೀಲು, ಪೊಳಲಿ, ಕದ್ರಿ ದೇಗುಲಗಳು, ಉಡುಪಿಯ ಶ್ರೀ ಕೃಷ್ಣ ಮಠ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ, ಕುಂದಾಪುರ ಭಾಗದ ಮಹಾಗಣಪತಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹೀಗೆ ಹತ್ತು ಹಲವು ತೀರ್ಥ ಕ್ಷೇತ್ರಗಳನ್ನೊಳಗೊಂಡ ಕರಾವಳಿ ಭಾಗದಿಂದ ಪುಣ್ಯಕ್ಷೇತ್ರ ತಿರುಪತಿಗೆ ರೈಲು ಸಂಪರ್ಕ ಸಾಧ್ಯವಾದರೆ ಅನೇಕ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ' ಎಂದು ಹೇಳಿದ್ದಾರೆ.
'ಸಾಧಾರಣ ದಕ್ಷಿಣ ಭಾರತದ ತೀರ್ಥ ಕ್ಷೇತ್ರದ ದರ್ಶನ ಆದ ಹಾಗೆ ಆಗುತ್ತದೆ. ಅದರಲ್ಲೂ ಕರಾವಳಿ ಭಾಗದ ಪ್ರತೀ ಹಿಂದೂವಿನ ಮನೆಗೂ ತಿರುಪತಿ ತಿಮ್ಮಪ್ಪನ ಭಾವನಾತ್ಮಕ ಸಂಬಂಧವಿದೆ. ಪ್ರತೀ ಮನೆಯಿಂದ ತಿರುಪತಿಗೆ ಕಾಣಿಕೆ ಸಲ್ಲುತ್ತದೆ. ಹೀಗಾಗಿ ಕರಾವಳಿ ಭಾಗದಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಸಕಾರಾತ್ಮಕ ಅಧ್ಯಯನ ನಡೆಸಿದ ಸಚಿವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಆದಷ್ಟು ಶೀಘ್ರ ಈ ಬೇಡಿಕೆ ಈಡೇರುವ ವಿಶ್ವಾಸವಿದೆ' ಎಂದು ಹೇಳಿದ್ದರು. ಈಗ ಈ ಬೇಡಿಕೆಗೆ ಒಪ್ಪಿಗೆ ಸಿಕ್ಕಿದೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications