ಕರ್ನಾಟಕದಲ್ಲಿ ಕೇಬಲ್ ಕಾರ್ ಯೋಜನೆ: ಯಾವ ಪ್ರವಾಸಿ ತಾಣಗಳಲ್ಲಿ ಜಾರಿ?
ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ರೋಪ್ ವೇ/ ಕೇಬಲ್ ಕಾರ್ ಯೋಜನೆಯನ್ನು ಪ್ರಮುಖ ಪ್ರವಾಸಿತಾಣಗಳಲ್ಲಿ ಆರಂಭಿಸಲಿದೆ. ಇದಕ್ಕಾಗಿ ಸರ್ಕಾರ 'ಕರ್ನಾಟಕ ಪ್ರವಾಸೋದ್ಯಮ ರೋಪ್ ವೇ ಮಸೂದೆ-2024' ಜಾರಿಗೊಳಿಸಲಿದೆ. ದಕ್ಷಿಣ ಭಾರತದಲ್ಲಿಯೇ ಇಂತಹ ಮಸೂದೆಯನ್ನು ಜಾರಿಗೊಳಿಸಲಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ.
ರಾಜ್ಯದ ಕೆಲವು ಪ್ರಮುಖ ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಯೋಜನೆಯನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಟೆಂಡರ್ ಪಡೆಯುವ ಕಂಪನಿ ಈ ಯೋಜನೆಯನ್ನು ಕಾರ್ಯಗತಗೊಳಿಸಿ, ನಿರ್ವಹಣೆಯನ್ನು ಮಾಡಬೇಕಿದೆ. ಆದ್ದರಿಂದ ಸರ್ಕಾರ ಈ ಕುರಿತು ಕಾನೂನು ಜಾರಿಗೊಳಿಸಲು ಮುಂದಾಗಿದೆ.

ಎಲ್ಲೆಲ್ಲಿ ಜಾರಿಗೆ ಬರಲಿದೆ ಯೋಜನೆ: ಕೇಬಲ್ ಕಾರ್ ಯೋಜನೆಯನ್ನು ಕರ್ನಾಟಕದಲ್ಲಿ ನಂದಿ ಹಿಲ್ಸ್, ಅಂಜನಾದ್ರಿ ಹಿಲ್ಸ್, ಮಧುಗಿರಿ ಕೋಟೆ, ಕೊಡಗು ಮಲ್ಲಳ್ಳಿ ಫಾಲ್ಸ್, ಸವದತ್ತಿ ಯಲ್ಲಮ್ಮ ಗುಡ್ಡ ಬೆಳಗಾವಿ, ಬಳ್ಳಾರಿ ಕೋಟೆ, ಯಾದಗಿರಿ ಕೋಟೆ, ನೃಪತುಂಗ ಗುಡ್ಡ ಹುಬ್ಬಳ್ಳಿ, ಹಾವೇರಿಯ ದೇವದುರ್ಗ ಬೆಟ್ಟ, ಗದಗ ಕಾಲಕೇಶ್ವರ ದೇವಾಲಯ, ಮಹಾಲಿಂಗೇಶ್ವರ ದೇವಾಲಯ ಯಾದಗಿರಿಯಲ್ಲಿ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಈ ಮಾದರಿಯ ಯೋಜನೆ ಜಾರಿಗೊಳಿಸಲು ಈಗಾಗಲೇ ದೇಶದ ಹಲವು ರಾಜ್ಯಗಳು ಕಾನೂನನ್ನು ಒಳಗೊಂಡಿವೆ. ಆದ್ದರಿಂದ ಕರ್ನಾಟಕ ಸರ್ಕಾರ ಈ ರೀತಿಯ ಯೋಜನೆಗಳಿಗೆ ಒಪ್ಪಿಗೆ ನೀಡುವ ಸಂಬಂಧ ಕಾನೂನನ್ನು ಜಾರಿಗೆ ತರಲಿದೆ. ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಲು ಇದು ಅನುಕೂಲವಾಗಲಿದೆ.
ರೋಪ್ ವೇ/ ಕೇಬಲ್ ಕಾರ್ ಯೋಜನೆಗಳು ಪರಿಸರಕ್ಕೆ ಕಡಿಮೆ ಹಾನಿ ಮಾಡುತ್ತವೆ. ಈ ಮಾದರಿ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಈ ಮಾದರಿ ಯೋಜನೆ ಯಶಸ್ವಿಯಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರವೂ ಯೋಜನೆ ಜಾರಿಗೊಳಿಸಲು ಮುಂದಾಗಿದೆ.
ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ರೋಪ್ ವೇ/ ಕೇಬಲ್ ಕಾರ್ ಯೋಜನೆ ಜಾರಿಗಾಗಿ ಆಸಕ್ತಿಯ ಅಭಿವ್ಯಕ್ತಿ (ಇಒಐ) ಟೆಂಡರ್ ಅಧಿಸೂಚನೆ ಜಾರಿಗೊಳಿಸಿದೆ. ರಾಜ್ಯದ ಹಲವು ಸ್ಥಳಗಳಲ್ಲಿ ಯೋಜನೆ ಜಾರಿಗಾಗಿ ಕಂಪನಿಗಳನ್ನು ಆಹ್ವಾನಿಸಲು ಇದನ್ನು ಅಧಿಸೂಚಿಸಲಾಗಿದೆ. ಕಾರ್ಯ ಸಾಧ್ಯತಾ ವರದಿಯ ಬಳಿಕ ಮೂರು ತಿಂಗಳಿನಲ್ಲಿ ಸರ್ಕಾರ ಯಾವ ಯಾವ ಪ್ರದೇಶದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಅಂತಿಮಗೊಳಿಸಲಿದೆ.
ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ ಬಳಿಕ ಮಸೂದೆ ಜಾರಿಗೊಳಿಸುವ ಕುರಿತು ಅಂತಿಮ ಹೆಜ್ಜೆ ಇಡಲಿದೆ. ಮೊದಲು ಸ್ಥಳ ಮತ್ತು ಕಂಪನಿಗಳನ್ನು ತೀರ್ಮಾನ ಮಾಡಿಕೊಂಡು ಮಸೂದೆ ಜಾರಿಗೊಳಿಸುವ ಕುರಿತು ಸರ್ಕಾರ ತೀರ್ಮಾನ ಮಾಡಲಿದೆ.
ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಕರ್ನಾಟಕದ ಮೊದಲ ರೋಪ್ ವೇ ಯೋಜನೆ ಬೆಂಗಳೂರು ಸಮೀಪದ ನಂದಿ ಬೆಟ್ಟದಲ್ಲಿ ಜಾರಿಗೆ ಬರಲಿದೆ. 2024ರ ಜುಲೈನಲ್ಲಿ ಕರ್ನಾಟಕ ಸರ್ಕಾರ ಈ ಯೋಜನೆಗೆ ಒಪ್ಪಿಗೆ ನೀಡಿದೆ. ಇದಕ್ಕಾಗಿ 2.93 ಎಕರೆ ಜಮೀನು 30 ವರ್ಷಗಳ ಅವಧಿಗೆ ಮಂಜೂರು ಮಾಡಿದೆ. ಪಿಪಿಪಿ ಮಾದರಿಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
2023ರ ಮಾರ್ಚ್ನಲ್ಲಿ ಈ ಯೋಜನೆಗೆ ಶಂಕು ಸ್ಥಾಪನೆ ಮಾಡಲಾಗಿತ್ತು. ಆದರೆ ವಿವಿಧ ಇಲಾಖೆಗಳಿಂದ ಅನುಮತಿ ದೊರೆಯುವುದು ವಿಳಂಬವಾದ ಕಾರಣ ಯೋಜನೆಗೆ ತಡವಾಗಿ ಚಾಲನೆ ಸಿಕ್ಕಿದೆ. ಆದರೆ ಕರ್ನಾಟಕದಲ್ಲಿ ಜಾರಿಗೊಳ್ಳಲಿರುವ ಮೊದಲ ಕೇಬಲ್ ಕಾರ್ ಯೋಜನೆ ಇದಾಗಿದೆ.
-
Waterfalls: ಜೋಗದಿಂದ ಚುಂಚಿವರೆಗೆ; ಈ ಬೇಸಿಗೆಯಲ್ಲಿ ನೀವು ಭೇಟಿ ನೀಡಲೇಬೇಕಾದ 10 ಜಲಪಾತಗಳಿವು -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?












Click it and Unblock the Notifications