IRCTCಯಿಂದ ಮತ್ತೊಂದು ಟೂರ್ ಪ್ಯಾಕೇಜ್ ಘೋಷಣೆ, ವಿವರ ಇಲ್ಲಿದೆ
ಕರ್ನಾಟಕ, ಡಿಸೆಂಬರ್, 25: ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ - ಕರ್ನಾಟಕ ಪ್ಯಾಕೇಜ್ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.
ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್ ಪ್ಯಾಕೇಜ್ ಇರುತ್ತದೆ. ಈ ಪ್ಯಾಕೇಜ್ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.

ಪ್ರವಾಸದ ಪ್ಯಾಕೇಜ್ನ ವಿವರ ಇಲ್ಲಿದೆ
ಈ ಪ್ಯಾಕೇಜ್ ಅನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್ ಕ್ಲಾಸ್ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್ಸೈಟಿಗೆ ಹೋಗಿ ಪ್ಯಾಕೇಜ್ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.

ವಿಶೇಷ ರೈಲುಗಳನ್ನು ಓಡಿಸಲು ನಿರ್ಧಾರ
ಎರಡು ವರ್ಷಗಳಿಂದ ಮಹಾಮಾರಿ ಕೊರೊನಾ ಕಾರಣದಿಂದ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಆಚರಿಸಲಾಗಿತ್ತು. ರೈಲಿನಲ್ಲಿ ಪ್ರಯಾಣ ಮಾಡುವವರ ಸಂಖ್ಯೆಯೂ ಕೂಡ ಕಡಿಮೆಯಿತ್ತು. ಕ್ರಿಸ್ಮಸ್ ಆಚರಣೆಗೆ ಸಾಮಾನ್ಯವಾಗಿ ಜನರು ಬೇರೆ ಕಡೆಗೆ ಪ್ರವಾಸ ಮಾಡಲು ಯೋಜನೆ ರೂಪಿಸಿರುತ್ತಾರೆ. ಅದರಲ್ಲೂ ಈ ಬಾರಿ ಕೊರೊನಾ ತಗ್ಗಿದ ಕಾರಣ ಕ್ರಿಸ್ಮಸ್ಗೆ ತುಂಬಾ ಜನರು ಬೇರೆ ಕಡೆಗೆ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ಆದ್ದರಿಂದ ಕ್ರಿಸ್ಮಸ್ ಉತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ಮಂಗಳೂರು ಜಂಕ್ಷನ್ ಹಾಗೂ ಗುಜರಾತ್ನ ಉಧ್ನಾ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧಾರ ಮಾಡಿತ್ತು. ಮಂಗಳೂರು ಜಂಕ್ಷನ್ ಹಾಗೂ ಗುಜರಾತ್ನ ಉಧ್ನಾ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧಾರ ಮಾಡಿತ್ತು.












Click it and Unblock the Notifications