Kashmir-Kanniyakumari Train: ಕಾಶ್ಮೀರ-ಕನ್ಯಾಕುಮಾರಿ ನಡುವೆ ರೈಲು ಸಂಪರ್ಕ ಯಾವಾಗ?-ಪ್ರಧಾನಿ ಮೋದಿಯಿಂದ ಮಹತ್ವದ ಮಾಹಿತಿ
ನವದೆಹಲಿ, ಫೆಬ್ರವರಿ, 21: ದೇಶದ ಪ್ರಮುಖ ನಗರಗಳಿಗೆ ರೈಲು ಸೇವೆಗಳು ಆರಂಭವಾಗುತ್ತಲೇ ಇವೆ. ಹಾಗೆಯೇ ಕಾಶ್ಮೀರ-ಕನ್ಯಾಕುಮಾರಿ ನಡುವೆ ರೈಲು ಸಂಪರ್ಕ ಕಲ್ಪಿಸುವ ದಿನ ದೂರ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಉಧಂಪುರ-ಶ್ರೀನಗರ-ಬಾರಾಮುಲ್ಲಾ (ಯುಎಸ್ಬಿಆರ್ಎಲ್) ನಡುವಿನ 41.8 ಕಿಲೋ ಮೀಟರ್ ಉದ್ದದ ರೈಲು ಸಂಪರ್ಕ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಒಟ್ಟು 272 ಕಿಲೋ ಮೀಟರ್ ಉದ್ದದ ಯುಎಸ್ಬಿಆರ್ಎಲ್ ರೈಲು ಮಾರ್ಗ ಯೋಜನೆಯಯನ್ನು ವಿವಿಧ ಹಂತಗಳಲ್ಲಿ ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು 2009ರ ಅಕ್ಟೋಬರ್ನಲ್ಲಿ 118 ಕಿಲೀ ಮೀಟರ್ ಉದ್ದದ ಖಾಜಿಗುಂಡ್-ಬಾಲಾಮುಲ್ಲಾ ಮಾರ್ಗವನ್ನು, 2013ರ ಜೂನ್ನಲ್ಲಿ 18 ಕಿಲೀ ಮೀಟರ್ ಉದ್ದದ ಬಾರಾಮುಲ್ಲಾ-ಖಾಜಿಗುಂಡ್ ಮಾರ್ಗವನ್ನು ಮತ್ತು 2014ರ ಜುಲೈನಲ್ಲಿ 25 ಕಿಲೋ ಮೀಟರ್ ಉಧಂಪುರ-ಕತ್ರಾ ಮಾರ್ಗವನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.
ದೇಶದಲ್ಲಿ ಏಕಕಾಲದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಹಿಂದೆ ದೇಶದ ಇತರೆ ಭಾಗಗಳು ಅಭಿವೃದ್ಧಿಯತ್ತ ಸಾಗುತ್ತಿದ್ದ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಅಭಿವೃದ್ಧಿ ಕಾಮಾಗಾರಿಗಳ ಲಾಭ ಸಿಗುತ್ತಿರಲಿಲ್ಲ ಅಥವಾ ಈ ಪ್ರದೇಶದಲ್ಲಿ ತುಂಬಾ ವಿಳಂಬವಾಗಿ ಕಾಮಗಾರಿಗಳು ನಡೆಯುತ್ತಿದ್ದವು ಎಂದು ಹೇಳಿದರು.
ಅಲ್ಲದೆ ಇದೀಗ ದೇಶದಾದ್ಯಂತ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಜಮ್ಮು ಮತ್ತು ಕಾಶ್ಮೀರವೂ ಹಿಂದೆ ಉಳಿದಿಲ್ಲ. ಇಂದು ಜಮ್ಮು ಮತ್ತು ಕಾಶ್ಮೀರ ವಿಮಾನ ನಿಲ್ದಾಣದ ವಿಸ್ತರಣೆ ಕಾರ್ಯ ನಡೆಯುತ್ತಿದೆ ಅಂತಲೂ ತಿಳಿಸಿದ್ದಾರೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications