Chardham: ಇಂದಿನಿಂದ ಕೇದಾರನಾಥ ಯಾತ್ರೆ ಆರಂಭ: ಹೆಲಿಕಾಪ್ಟರ್ ಸೇವೆ ಶುರು
ಉತ್ತರಖಂಡದ ಚಾರ್ಧಾಮ್ ಯಾತ್ರೆ ಆರಂಭವಾಗಿದೆ. ಅಕ್ಷಯ ತೃತೀಯದಿಂದ ನಾಲ್ಕು ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಾಲಯವನ್ನು ತೆರೆಯಲಾಗಿದ್ದು ಇಂದಿನಿಂದ (ಮೇ 2)ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದ ಭಕ್ತರ ದರ್ಶನಕ್ಕಾಗಿ ದೇವಾಲಯ ತೆರೆಯಲಾಗಿದೆ.
ಪ್ರತೀ ವರ್ಷ ಚಾರ್ ಧಾಮ್ ಯಾತ್ರೆ ಕೇವಲ ಆರು ತಿಂಗಳು ಮಾತ್ರ ಇರುತ್ತದೆ. ಇನ್ನೂ ಆರು ತಿಂಗಳು ಇಲ್ಲಿ ಹೆಚ್ಚು ಹಿಮಪಾತವಾಗುವುದರಿಂದ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ. ದೀಪಾವಳಿಯ ಎರಡು ದಿನಗಳ ನಂತರ ಅಂದರೆ ಭಾಯಿ ದೂಜ್ ದಿನದಂದು ಕೇದಾರನಾಥ ದೇವಾಲಯವನ್ನು ಮುಚ್ಚಲಾಗುತ್ತದೆ. ಚಳಿಗಾಲದ ತಿಂಗಳುಗಳಲ್ಲಿ ದೇವಾಲಯ ಹಿಮದಿಂದ ಆವೃತವಾಗಿರುತ್ತದೆ. ಜೊತೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಇಂದು ದೇವಸ್ಥಾನದ ಬಾಗಿಲು ತೆರೆಯುವುದರಿಂದ ದೇವಸ್ಥಾನವನ್ನು 108 ಕ್ವಿಂಟಾಲ್ ಹೂವುಗಳಿಂದ ಅಲಂಕರಿಸಲಾಗಿದೆ.

ಇನ್ನೂ ಕೇದಾರನಾಥ ದೇವಾಲಯದ ಬಾಗಿಲು ತೆರೆದಿರುವುದರಿಂದ ಕೇದಾರನಾಥ ಧಾಮ ಯಾತ್ರೆಗೆ ಹೆಲಿಕಾಪ್ಟರ್ ಸೇವೆಗಳು ಮೇ 1 ರಿಂದ ಉತ್ತರಾಖಂಡದ ಸೋನ್ಪ್ರಯಾಗದಿಂದ ಪ್ರಾರಂಭವಾಗಿವೆ. ಹೆಲಿಕಾಪ್ಟರ್ ಮೂಲಕ ಭಕ್ತರು ಸುಲಭವಾಗಿ ದೇವಾಲಯವನ್ನು ತಲುಪಬಹುದು.
ಬುಧವಾರ (ಏಪ್ರಿಲ್ 30) ಬೆಳಿಗ್ಗೆ ಗಂಗೋತ್ರಿ ದೇವಾಲಯದ ಬಾಗಿಲನ್ನು ಬೆಳಿಗ್ಗೆ 10:30 ಕ್ಕೆ ವಿಶೇಷ ಪೂಜೆ ಮತ್ತು ಅಭಿಷೇಕದೊಂದಿಗೆ ತೆರೆಯಲಾಯಿತು. ಇನ್ನೂ ಯಮುನೋತ್ರಿ ಧಾಮದ ಬಾಗಿಲನ್ನು ಇದೇ ದಿನ ಬೆಳಿಗ್ಗೆ 11:55 ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಕ್ತರಿಗಾಗಿ ತೆರೆಯಲಾಯಿತು. ಬಾಗಿಲು ತೆರೆಯುವ ಸಂದರ್ಭದಲ್ಲಿ ದೇಶ ಮತ್ತು ವಿದೇಶಗಳಿಂದ ಸಾವಿರಾರು ಭಕ್ತರು ಅಖಂಡ ಜ್ಯೋತಿಯ ದರ್ಶನ ಪಡೆದು ಗಂಗಾ ಮತ್ತು ಯಮುನೆಯಲ್ಲಿ ಸ್ನಾನ ಮಾಡುವ ಮೂಲಕ ಪುಣ್ಯ ಗಳಿಸಿದರು.

ಗಂಗೋತ್ರಿ ಮತ್ತು ಯಮುನೋತ್ರಿ ಧಾಮದ ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾತೃ ಗಂಗಾ ಮತ್ತು ಯಮುನೆ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಬದರೀನಾಥ ಯಾತ್ರೆ ಮೇ 4ರಂದು ಬೆಳಿಗ್ಗೆ 6:00 ಗಂಟೆಗೆ ಪ್ರಾರಂಭವಾಗಲಿದೆ. ಬದರೀನಾಥ ದೇವಾಲಯದ ದ್ವಾರಗಳನ್ನು ಭಾನುವಾರ ಯಾತ್ರಾರ್ಥಿಗಳಿಗಾಗು ತೆರೆಯಲಾಗುತ್ತದೆ.
ಕೇದಾರನಾಥ ಧಾಮದಲ್ಲಿ ಪ್ರಾರಂಭಿಸಲಾದ ಹೆಲಿಕಾಪ್ಟರ್ ಸೇವೆಗಳ ಕುರಿತು, ಆಪರೇಷನ್ ಎಕ್ಸಿಕ್ಯೂಟಿವ್ ಪವನ್ ರಾಣಾ ಮಾತನಾಡಿ, "ಸೇವೆಗಾಗಿ ಆನ್ಲೈನ್ ಟಿಕೆಟ್ಗಳು IRCTC ಯಲ್ಲಿ ಲಭ್ಯವಿದೆ ಮತ್ತು ಆಫ್ಲೈನ್ ಟಿಕೆಟ್ಗಳು DM ಅಥವಾ ಸೆಕ್ಟರ್ ಮ್ಯಾಜಿಸ್ಟ್ರೇಟ್ ಮೂಲಕ ಲಭ್ಯವಿದೆ. ನಾವು ದಿನಕ್ಕೆ ಸುಮಾರು 20-30 ಶಟಲ್ಗಳನ್ನು ನಿರ್ವಹಿಸುತ್ತೇವೆ, 150ಕ್ಕೂ ಹೆಚ್ಚು ಯಾತ್ರಿಕರಿಗೆ ಸೇವೆ ಸಲ್ಲಿಸುತ್ತೇವೆ" ಎಂದಿದ್ದಾರೆ.
'ಹವಾಮಾನ ಅನುಕೂಲಕರವಾಗಿದ್ದರೆ 25-30 ಸುತ್ತುಗಳು ಕಾರ್ಯನಿರ್ವಹಿಸುತ್ತವೆ, ಇಲ್ಲದಿದ್ದರೆ ಟಿಕೆಟ್ಗಳನ್ನು ರದ್ದುಗೊಳಿಸಲಾಗುತ್ತದೆ. ಭಕ್ತರ ಭದ್ರತೆಯನ್ನು ಕಾಪಾಡುವುದು ನಮ್ಮ ಮೊದಲ ಆಧ್ಯತೆ. ಪ್ರಯಾಣದ ಮೊದಲು ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ. ದಿನಕ್ಕೆ 150 ಆನ್ಲೈನ್ ಬುಕಿಂಗ್ಗಳು ಮತ್ತು ಮುಂಗಡ ಬುಕಿಂಗ್ಗಳು ಸಹ ಪ್ರಕ್ರಿಯೆಯಲ್ಲಿವೆ. ಬುಕಿಂಗ್ಗಳು ಒಂದು ತಿಂಗಳವರೆಗೆ ತೆರೆದಿರುತ್ತವೆ" ಎಂದಿದ್ದಾರೆ.
ಹೆಲಿಕಾಪ್ಟರ್ ಸೇವೆ ಇರುವುದರಿಂದ ಜೊತೆಗೆ ತಿಂಗಳು ಮೊದಲೇ ಟಿಕೆಟ್ ಬುಕ್ ಆಗುತ್ತಿರುವುದರಿಂದ ಈ ಬಾರಿ ಚಾರ್ ಧಾಮ್ ಯಾತ್ರೆಗೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications