Konkan Railway: ಆಗಸ್ಟ್ 8ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ರದ್ದು- ಇಲ್ಲಿದೆ ಮಾಹಿತಿ, ವಿವರ
Konkan Railway Zone: ಸಾಮಾನ್ಯವಾಗಿ ಹಳಿ ಅಳವಡಿಕೆ ಹಾಗೂ ರೈಲ್ವೆಗೆ ಸಂಬಂಧ ಕಾಮಗಾರಿ ನಡೆಯುವ ಮಾರ್ಗಗಳಲ್ಲಿ ರೈಲು ಸಂಚಾರವನ್ನು ರದ್ದು ಮಾಡಲಾಗುತ್ತದೆ. ಹಾಗೆಯೇ ಇದೀಗ ಈ ಮಾರ್ಗದಲ್ಲಿ ಆಗಸ್ಟ್ 8ರ ವರೆಗೆ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ. ಹಾಗಾದರೆ ಯಾವ್ಯಾವ ಮಾರ್ಗಗಳಲ್ಲಿ ಸೇವೆ ಇರುವುದಿಲ್ಲ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಅಷ್ಟೇ ಅಲ್ಲದೆ, ಕೆಲವು ಭಾಗಗಳಲ್ಲಿ ಗುಡ್ಡ ಕುಸಿದ ಪರಿಣಾಮ ಬಸ್ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಇನ್ನು ಪಶ್ಚಿಮಘಟ್ಟ ಭಾಗದ ಎಡಕುಮೇರಿ- ಕಡಗರವಳ್ಳಿ ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದರಿಂದ ರೈಲು ಹಳಿಗಳ ಮೇಲೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ.

ಇದೀಹ ಈ ಭಾಗದಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನಲೆ ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ-ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸೇವೆಯನ್ನು ಆಗಸ್ಟ್ 8ರ ವರೆಗೆ ರದ್ದು ಮಾಡಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವೆಲ್ಲಾ ಮಾರ್ಗಗಳಲ್ಲಿ ಯಾವ್ಯಾವತ್ತು ರದ್ದು.?
* ಆಗಸ್ಟ್ 7ರ ವರೆಗೆ ಸಂಪೂರ್ಣ ರದ್ದು: ರೈಲು ನಂ.16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ ರೈಲು
* ಆಗಸ್ಟ್ 8ರವರೆಗೆ ಸಂಪೂರ್ಣ ರದ್ದು: ರೈಲು ನಂ.16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು
* ಆಗಸ್ಟ್ 8ರವರೆಗೆ ಸಂಪೂರ್ಣ ರದ್ದು: ರೈಲು ನಂ.01595 ಕಾರವಾರ-ಮಡಗಾಂವ್ ಹಾಗೂ ರೈಲು ನಂ. 01596 ಮಡಗಾಂವ್-ಕಾರವಾರ ವಿಶೇಷ ರೈಲು
* ಆಗಸ್ಟ್ 7ರ ವರೆಗೆ ಸಂಪೂರ್ಣ ರದ್ದು: ರೈಲು ನಂ.16585 ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು-ಮುರುಡೇಶ್ವರ ಎಕ್ಸ್ಪ್ರೆಸ್
* ಆಗಸ್ಟ್ 8ರವರೆಗೆ ಸಂಪೂರ್ಣ ರದ್ದು: ರೈಲು ನಂ.16586 ಮುರ್ಡೇಶ್ವರ- ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು ಎಕ್ಸ್ಪ್ರೆಸ್ ರೈಲು
* ಆಗಸ್ಟ್ 7ರ ವರೆಗೆ ಸಂಪೂರ್ಣ ರದ್ದು: ರೈಲು ನಂ.16515 ಕೆಎಸ್ಆರ್ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು
* ಆಗಸ್ಟ್ 8ರವರೆಗೆ ಸಂಪೂರ್ಣ ರದ್ದು: ರೈಲು ನಂ.16516 ಕಾರವಾರ-ಕೆಎಸ್ಆರ್ ಯಶವಂತಪುರ ಎಕ್ಸ್ಪ್ರೆಸ್ ರೈಲು
ಇನ್ನು ಈ ಬಗ್ಗೆ ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳ ಹಾಗೂ ಆಸುಪಾಸಿನಲ್ಲಿ ಗೂಡ್ಸ್ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಅವಕಾಶ ಕಲ್ಪಿಸಿಲ್ಲ. ಆದರೆ, ಸದ್ಯದಲ್ಲೇ ದುರಸ್ಥಿ ಕಾರ್ಯ ಸಂಪೂರ್ಣ ಆಗಲಿದ್ದು, ಬಳಿಕ ರೈಲು ಸಂಚಾರ ಮುಂದುವರಿಯಲಿದೆ. ಅಲ್ಲಿ ತನಕ ರೈಲು ಪ್ರಯಾಣಿಕರು ಸಹಕರಿಸುವಂತೆ ವಿನಂತಿ ಮಾಡಿಕೊಂಡಿದೆ.
-
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications