ದಾವಣಗೆರೆ-ಜೋಗ ವಿಶೇಷ ಟೂರ್ ಪ್ಯಾಕೇಜ್; ಸಮಯ, ದರದ ವಿವರಗಳು
ದಾವಣಗೆರೆ, ಜುಲೈ 10; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗ ಪ್ರವಾಸಿಗರ ಅನುಕೂಲಕ್ಕಾಗಿ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಿದೆ. ನೈಋತ್ಯ ಮುಂಗಾರು ಋತುವಿನಲ್ಲಿ ಸಂಚಾರ ನಡೆಸುವ ಜನರಿಗೆ ಅನುಕೂಲವಾಗುವಂತೆ ಈ ಪ್ಯಾಕೇಜ್ ದರ, ಸಮಯವನ್ನು ನಿಗದಿಗೊಳಿಸಲಾಗಿದೆ.
ಈ ವಿಶೇಷ ಪ್ಯಾಕೇಜ್ ಟೂರ್ ಬಸ್ಗಳು ದಾವಣಗೆರೆ ಹಾಗೂ ಹರಿಹರದಿಂದ ಶಿವಮೊಗ್ಗದ ಜೋಗ ಮತ್ತು ಶಿರಸಿಗೆ ಪ್ರತಿ ಭಾನುವಾರ ಸಂಚಾರ ನಡೆಸಲಿವೆ. ಜುಲೈ 16 ರಿಂದ ಈ ವಿಶೇಷ ಪ್ಯಾಕೇಜ್ ಟೂರ್ ಸಾರಿಗೆ ವ್ಯವಸ್ಥೆ ಇರಲಿದೆ ಎಂದು ಮಾಹಿತಿ ನೀಡಲಾಗಿದೆ.

ವಿಶೇಷ ಟೂರ್ ಪ್ಯಾಕೇಜ್ಗೆ ಮುಂಗಡವಾಗಿ ಬುಕ್ಕಿಂಗ್ ಮಾಡಲು ಬಸ್ ನಿಲ್ದಾಣದ ಟಿಕೆಟ್ ಬುಕ್ಕಿಂಗ್ ಕೌಂಟರ್ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಕರಾರಸಾ ನಿಗಮದ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಪ್ಯಾಕೇಜ್ ಸಮಯ ಮತ್ತು ದರ; ಜುಲೈ 16 ರಿಂದ ಪ್ರತಿ ಭಾನುವಾರ ಈ ವಿಶೇಷ ಪ್ಯಾಕೇಜ್ ಟೂರ್ ಆರಂಭವಾಗಲಿದೆ. ಬೆಳಗ್ಗೆ 7 ಗಂಟೆಗೆ ದಾವಣಗೆರೆಯಿಂದ ಬಸ್ ಹೊರಟು 10.30ಕ್ಕೆ ಶಿರಸಿ, ಮಧ್ಯಾಹ್ನ 12 ಗಂಟೆಗೆ ಶಿರಸಿಯಿಂದ ಹೊರಟು 1.30ಕ್ಕೆ ಜೋಗ, ಸಂಜೆ 4.30ಕ್ಕೆ ಜೋಗದಿಂದ ಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಗೆ ವಾಪಸ್ ಆಗಲಿದೆ. ಎರಡೂ ಕಡೆಯ ಪ್ರಯಾಣದರ ರೂ. 600 ಮತ್ತು ಮಕ್ಕಳಿಗೆ ರೂ. 450.
ಹರಿಹರದಿಂದ ಬೆಳಗ್ಗೆ 7.30 ಗಂಟೆಗೆ ಬಸ್ ಹೊರಟು 10.30ಕ್ಕೆ ಶಿರಸಿ, ಮಧ್ಯಾಹ್ನ 12 ಗಂಟೆಗೆ ಶಿರಸಿಯಿಂದ ಹೊರಟು 1.30ಕ್ಕೆ ಜೋಗ, ಸಂಜೆ 4.30ಕ್ಕೆ ಜೋಗದಿಂದ ಹೊರಟು ರಾತ್ರಿ 7.30 ಗಂಟೆಗೆ ದಾವಣಗೆರೆ ತಲುಪುವುದು. ಎರಡೂ ಕಡೆ ಸೇರಿ ಪ್ರಯಾಣದರ ರೂ. 575 ಮತ್ತು ಮಕ್ಕಳಿಗೆ ರೂ. 430 ನಿಗದಿ ಮಾಡಲಾಗಿದೆ.
ಹುಬ್ಬಳ್ಳಿಯಿಂದಲೂ ಟೂರ್ ಪ್ಯಾಕೇಜ್; ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿ ಸಹ ಪ್ರವಾಸಿಗರ ಅನುಕೂಲಕ್ಕಾಗಿ ಹುಬ್ಬಳ್ಳಿ-ಜೋಗ ನಡುವೆ ವಿಶೇಷ ಬಸ್ ಓಡಿಸುತ್ತಿದೆ. ಜುಲೈ 9ರ ಭಾನುವಾರದಿಂದ ಈ ಸೇವೆ ಆರಂಭಿಸಲಾಗಿದೆ. ಪ್ರವಾಸಿಗರು ಈ ಸೇವೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಹುಬ್ಬಳ್ಳಿ ಮತ್ತು ಜೋಗ ಜಲಪಾತದ ನಡುವೆ ವಿಶೇಷ ಐಷಾರಾಮಿ ಬಸ್ ಈ ಪ್ಯಾಕೇಜ್ ಅಡಿ ಸಂಚಾರ ನಡೆಸಲಿದೆ. ಪ್ರತಿ ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಹುಬ್ಬಳ್ಳಿ-ಜೋಗ ನಡುವೆ ರಾಜಹಂಸ ಹಾಗೂ ಐರಾವತ ಮಲ್ಟಿ ಆಕ್ಸೆಲ್ ವೋಲ್ವೋ ಬಸ್ ಓಡಲಿದೆ.
ಐರಾವತ ವೋಲ್ವೋ ಮಲ್ಟಿ ಆಕ್ಸೆಲ್ ಬಸ್ನ ಟೂರ್ ಪ್ರತಿ ಭಾನುವಾರ ಹುಬ್ಬಳ್ಳಿಯಿಂದ ಜೋಗಕ್ಕೆ ಸಂಚಾರ ನಡೆಸುತ್ತದೆ. ಪ್ರಯಾಣ ದರ 600 ರೂ.ಗಳು. ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಡುವ ಬಸ್ 12 ಗಂಟೆಗೆ ಜೋಗ ಜಲಪಾತ ತಲುಪುತ್ತದೆ. ಜೋಗದಿಂದ 5 ಗಂಟೆಗೆ ಹೊರಡುವ ಬಸ್ 9 ಗಂಟೆಗೆ ಹುಬ್ಬಳ್ಳಿಗೆ ತಲುಪಲಿದೆ.
ರಾಜಹಂಸ ಬಸ್ ಟೂರ್ ಪ್ಯಾಕೇಜ್ ಬಸ್ ಪ್ರಯಾಣ ದರ 450 ರೂ.ಗಳು ಎಂದು ನಿಗದಿ ಮಾಡಲಾಗಿದೆ. ಬಸ್ ಹುಬ್ಬಳ್ಳಿಯಿಂದ ಬೆಳಗ್ಗೆ 7.45ಕ್ಕೆ ಹೊರಡುತ್ತದೆ. ಜೋಗ ಫಾಲ್ಸ್ ಅನ್ನು 12 ಗಂಟೆಗೆ ತಲುಪುತ್ತದೆ. 17:00 ಗಂಟೆಗೆ ಜೋಗದಿಂದ ಹೊರಟು 21:30ಕ್ಕೆ ಹುಬ್ಬಳ್ಳಿಯನ್ನು ತಲುಪಲಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications