KSRTC: ಬೆಂಗ್ಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೇವೆ, ದಿನಾಂಕ, ದರ, ಸಮಯಗಳ ವಿವರ ತಿಳಿಯಿರಿ
ಬೆಂಗಳೂರು, ನವೆಂಬರ್, 27: ರಾಜ್ಯದಲ್ಲಿ ಹಬ್ಬಗಳು ಸಮೀಪಿಸುತ್ತಿದ್ದಂತೆಯೇ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ದಟ್ಟಣೆಯನ್ನು ತಡೆಯುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯು ವಿಶೇಷ ಬಸ್ಗಳನ್ನು ಬಿಡುತ್ತಲೇ ಬಂದಿದೆ. ಅದೇ ರೀತಿ ಇದೀಗ ಶಬರಿಮಲೆ ಭಕ್ತರಿಗಾಗಿ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೇವೆಯನ್ನು ಕಲ್ಪಿಸಿದೆ. ಹಾಗಾದರೆ ಪ್ರಯಾಣಿಕರು ಯಾವಾಗಿನಿಂದ ಈ ಸೇವೆಯನ್ನು ಪಡೆಯಬಹುದು ಹಾಗೂ ದರ, ಸಮಯಗಳ ವಿವರವನ್ನು ಇಲ್ಲಿ ತಿಳಿಯಿರಿ.

KSRTCಯು ಶಬರಿಮಲೆ ಭಕ್ತರಿಗಾಗಿ ಬೆಂಗಳೂರಿನಿಂದ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ಗೆ ಡಿಸೆಂಬರ್ 1 ರಿಂದ ವೋಲ್ವೋ ಬಸ್ ಸೇವೆಯನ್ನು ಆರಂಭಿಸಲು ನಿರ್ಧರಿಸಿದೆ. ಇನ್ನು ಟಿಕೆಟ್ ದರ ಪ್ರತಿ ಪ್ರಯಾಣಿಕರಿಗೆ 1,600 ರೂಪಾಯಿ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಈ ವೋಲ್ವೋ ಬಸ್ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಹೊರಟು ಮರುದಿನ ಬೆಳಗ್ಗೆ 6:45ರ ಸುಮಾರಿಗೆ ನಿಲಕ್ಕಲ್ಗೆ ತಲುಪಲಿದೆ. ನಂತರ ಸಂಜೆ 6 ಗಂಟೆಗೆ ನಿಲಕ್ಕಲ್ನಿಂದದ ಹೊರಡಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು
ಹಬ್ಬಹರಿದಿನಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ತಡೆಯಲು ರೈಲ್ವೆ ಇಲಾಖೆ ವಿಶೇಷ ರೈಲುಗಳನ್ನು ಬಿಡುತ್ತಲೇ ಇರುತ್ತದೆ. ಇತ್ತೀಚೆಗಷ್ಟೇ ದಸರಾ, ದೀಪಾವಳಿಗೆ ವಿಶೇಷ ರೈಲುಗಳನ್ನು ಬಿಟ್ಟಿತ್ತು. ಹಾಗೆಯೇ ಇದೀಗ ಶಬರಿಮಲೈಗೆ ಹೋಗಲು ಎರಡು ವಿಶೇಷ ರೈಲು ಆರಂಭಿಸಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಬರಿಮಲೈಗೆ ಹೋಗುವ ಅಯ್ಯಪ್ಪಸ್ವಾಮಿ ಭಕ್ತರಿಗೆ ಅನುಕೂಲ ಆಗಲಿ ಎಂದು ಕಳೆದ ವರ್ಷ ಸಾಲುಮರದ ತಿಮ್ಮಕ್ಕ ನೇತೃತ್ವದಲ್ಲಿ ಭಾರತೀಯ ಅಯ್ಯಪ್ಪ ಸ್ವಾಮಿ ಸೇವಾ ಸಂಘ ರೈಲ್ವೆ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಸಲ್ಲಿಕೆ ಮಾಡಿತ್ತು. ಇದಕ್ಕೆ ಸ್ಪಂದಿಸಿದ್ದ ಇಲಾಖೆ ಎರಡು ವಿಶೇಷ ರೈಲು ಆರಂಭ ಮಾಡಿತ್ತು. ಅದರಂತೆಯೇ ಪ್ರಸ್ತುತ ವರ್ಷವೂ ಈ ಸೌಲಭ್ಯ ಇದೆ ಎಂದರು.
ವಾರದಲ್ಲಿಎರಡು ರೈಲುಗಳಿದ್ದು, ಡಿಸೆಂಬರ್ 2ರಿಂದ 20ರವರೆಗೆ ಸೌಲಭ್ಯ ಆರಂಭ ಆಗಲಿದೆ. ಪ್ರತಿ ಶನಿವಾರ ಹುಬ್ಬಳ್ಳಿಯಿಂದ ಕೊಟ್ಟಾಯಂಗೆ (07305) ರೈಲು ಬೆಳಗ್ಗೆ 10.30ಕ್ಕೆ ಹೊರಡಲಿದೆ.
ಕೊಟ್ಟಾಯಂನಿಂದ ಹುಬ್ಬಳ್ಳಿಗೆ(07306) ಪ್ರತಿ ಭಾನುವಾರ ಬೆಳಗ್ಗೆ 11ಕ್ಕೆ ಹಿಂದಿರುಗಲಿದೆ. ಡಿಸೆಂಬರ್ 5ರಿಂದ 17 ಪ್ರತಿ ಮಂಗಳವಾರ ಬೆಳಗ್ಗೆ 11ಕ್ಕೆ ಹುಬ್ಬಳ್ಳಿಯಿಂದ ಕೊಟ್ಟಾಯಂಗೆ(07307) ಹೊರಟು, ಡಿಸೆಂಬರ್ 6ರಿಂದ ಕೊಟ್ಟಾಯಂನಿಂದ ಹುಬ್ಬಳ್ಳಿಗೆ (07308) ಪ್ರತಿ ಬುಧವಾರ ಬೆಳಗ್ಗೆ 11ಕ್ಕೆ ಬರಲಿದೆ. ಈಗಾಗಲೇ ಮುಂಗಡ ಟಿಕೆಟ್ ಆರಂಭವಾಗಿದೆ ಎಂದು ತಿಳಿಸಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications