Tirupati; ತಿಮ್ಮಪ್ಪನ ಭಕ್ತರಿಗೆ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ
ಬೆಂಗಳೂರು, ಡಿಸೆಂಬರ್ 06; ಕೈಲಾಸ ಮಾಸನ ಸರೋವರ ಯಾತ್ರೆ, ಕಾಶಿಯಾತ್ರಿಕರಿಗೆ ನೆರವು ನೀಡಿದ ಬಳಿಕ ಕರ್ನಾಟಕ ಸರ್ಕಾರ ತಿರುಪತಿ ತಿಮ್ಮಪ್ಪನ ಭಕ್ತರತ್ತ ಗಮನಹರಿಸಿದೆ. ಸರ್ಕಾರ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೆ ಸಿಹಿಸುದ್ದಿಯನ್ನು ನೀಡಿದೆ.
ನಮ್ಮ ರಾಜ್ಯದ ಪಕ್ಕದ ಆಂಧ್ರ ಪ್ರದೇಶದಲ್ಲಿರುವ ತಿರುಪತಿಗೆ ತೆರಳಿ ಶ್ರೀ ವೆಂಕಟೇಶ್ವರನ ದರ್ಶನ ಪಡೆಯಬೇಕು ಎನ್ನುವವರು ಇನ್ನು ಕಷ್ಟಪಡಬೇಕಿಲ್ಲ. ಬೆರಳ ತುದಿಯಲ್ಲಿಯೇ ಆನ್ಲೈನ್ ಮೂಲಕ ದರ್ಶನಕ್ಕೆ ಟಿಕೆಟ್ ಬುಕ್ ಮಾಡಬಹುದು. ಅದು ಸಹ ವಿಐಪಿ ಮಾದರಿ ಸೌಲಭ್ಯವಾಗಿದೆ.
ಕರ್ನಾಟಕ ಸರ್ಕಾರ ಪ್ರವಾಸೋದ್ಯಮ ಇಲಾಖೆ ಮೂಲಕ ಎಲ್ ಒನ್ ಮಾದರಿಯ ವಿಐಪಿ ಸೌಲಭ್ಯದೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ವ್ಯವಸ್ಥೆ ಮಾಡಿದೆ. ಸಾರಿಗೆ, ಊಟ, ವಸತಿ ಸೇರಿದಂತೆ ಎಲ್ಲಾ ವೆಚ್ಚಗಳು ಸೇರಿ ಸುಮಾರು 2,500 ರೂ.ಗಳಲ್ಲಿ ತಿರುಪತಿಗೆ ಹೋಗಿ ಬರಬಹುದಾಗಿದೆ.
ಈ ಹಿಂದೆಯೇ ಪ್ರವಾಸೋದ್ಯಮ ಇಲಾಖೆ ತಿರುಪತಿ ದರ್ಶನ ಸೌಲಭ್ಯವನ್ನು ಆರಂಭಿಸಿತ್ತು. ಆದರೆ ದಿನಕ್ಕೆ 200 ಮಂದಿಗೆ ಮಾತ್ರ ಇದು ಸೀಮಿತವಾಗಿತ್ತು. ಈಗ ಅದನ್ನು ದಿನಕ್ಕೆ 500 ಮಂದಿಗೆ ಏರಿಕೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಿಂದ ತಿರುಪತಿಗೆ ತೆರಳುವ ಭಕ್ತರಿಗೆ ಸಹಕಾರಿಯಾಗಿದೆ.

ಹೇಗಿರುತ್ತದೆ ತಿರುಪತಿ ಪ್ರವಾಸ?
ಸದ್ಯ ತಿರುಪತಿ ಪ್ರವಾಸದ ಬಸ್ ಬೆಂಗಳೂರಿನಿಂದ ಹೊರಡುತ್ತದೆ. ಆದ್ದರಿಂದ ರಾಜ್ಯದ ಯಾವುದೇ ಜಿಲ್ಲೆಯಿಂದ ನೀವು ಪ್ರವಾಸ ಬುಕ್ ಮಾಡಿದರೂ ಬೆಂಗಳೂರಿಗೆ ಬರಬೇಕು. ದರ್ಶನದ ಹಿಂದಿನ ರಾತ್ರಿ ಬೆಂಗಳೂರಿನಿಂದ ಬಸ್ ಹೊರಡಲಿದೆ. ಮಾರ್ಗದ ನಡುವೆ ಉತ್ತಮ ಗುಣಮಟ್ಟದ ಊಟವಿದೆ. ಮಧ್ಯರಾತ್ರಿ ವೇಳೆಗೆ ಬಸ್ ತಿರುಪತಿ ತಲುಪಲಿದೆ.
ತಿರುಪತಿಯಲ್ಲಿ ವಾಸ್ತವ್ಯಕ್ಕೆ ಹೋಟೆಲ್ ಇರುತ್ತದೆ. ಮರುದಿನ ಬೆಳಗ್ಗೆ ಸುಮಾರು ಒಂದು ಗಂಟೆ ದರ್ಶನಕ್ಕೆ ಕಾಯಬೇಕು. ಬಳಿಕ ವಿಐಪಿ ದರ್ಶನ ಸೌಲಭ್ಯವಿದೆ. ಬಳಿಕ ಉಪಹಾರ ಮತ್ತು ಮಧ್ಯಾಹ್ನದ ಊಟ ಮುಗಿಸಿ ರಾತ್ರಿ ಬೆಂಗಳೂರಿಗೆ ವಾಪಸ್.

ಸರ್ಕಾರದಿಂದ ವಿಶೇಷ ಪ್ಯಾಕೇಜ್
ತಮಿಳುನಾಡು, ಕೇರಳ ಮತ್ತು ಇತರ ರಾಜ್ಯಗಳ ಭಕ್ತರಿಗೆ ಟಿಟಿಡಿ ವತಿಯಿಂದಲೇ ನಿತ್ಯ ದರ್ಶನಕ್ಕೆ ವ್ಯವಸ್ಥೆ ಇದೆ. ಆದರೆ ಕರ್ನಾಟಕದ 200 ಭಕ್ತರಿಗೆ ಮಾತ್ರ ಅವಕಾಶವಿತ್ತು. ಟಿಟಿಡಿ ಅಧ್ಯಕ್ಷ ವೈ. ವಿ. ಸುಬ್ಬಾರೆಡ್ಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದಾಗ ರಾಜ್ಯದ ಹೆಚ್ಚಿನ ಭಕ್ತರಿಗೆ ಅವಕಾಶ ನೀಡುವ ಕುರಿತು ಚರ್ಚಿಸಿದ್ದರು. ಹೆಚ್ಚಿನ ಭಕ್ತರಿಗೆ ಅವಕಾಶ ನೀಡುವ ಕುರಿತು ಸುಬ್ಬಾರೆಡ್ಡಿ ಭರವಸೆ ನೀಡಿದ್ದರು.
ಆದ್ದರಿಂದ ಈಗ ಕರ್ನಾಟಕ ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮೂಲಕ ಈ ವಿಶೇಷ ಪ್ಯಾಕೇಜ್ ಜಾರಿಗೆ ತರುತ್ತಿದೆ. ಸದ್ಯ 500 ಭಕ್ತರಿಗೆ ಇರುವ ದರ್ಶನದ ವ್ಯವಸ್ಥೆಯನ್ನು 1000ಕ್ಕೆ ಏರಿಕೆ ಮಾಡುವ ಪ್ರಸ್ತಾವನೆ ಸಹ ಇಲಾಖೆಯ ಮುಂದಿದೆ.

ತಿರುಪತಿ ಪ್ಯಾಕೇಜ್ ಶುಲ್ಕದ ವಿವರ
ಹೆಚ್ಚು ಕಾಯದೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಪ್ಯಾಕೇಜ್ ಸಹ ಕಡಿಮೆ ದರದಲ್ಲಿಯೇ ಇದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಇದಕ್ಕಾಗಿ ಮಲ್ಟಿ ಆಕ್ಸೆಲ್, ವೋಲ್ವೋ, ಡಿಲಕ್ಸ್ ಬಸ್ಗಳನ್ನು ಬಳಕೆ ಮಾಡಿಕೊಳ್ಳಲಿದೆ. ಬಸ್ಗಳಿಗೆ ಅನುಗುಣವಾಗಿ ಟಿಕೆಟ್ ಶುಲ್ಕ ಬದಲಾಗಲಿದೆ. ಒಂದು ಟಿಕೆಟ್ಗೆ ಸುಮಾರು 300 ರೂ. ಗಿಂತ ಹೆಚ್ಚಿರಲಿದೆ.
ಇನ್ನು ಭಕ್ತರ ವಾಸ್ತವ್ಯ ಮತ್ತು ಊಟ ಸೇರಿ ಇತರೆ ವೆಚ್ಚವಾಗಿ ಸುಮಾರು 2400 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಶೀಘ್ರದಲ್ಲಿಯೇ ಪ್ಯಾಕೇಜ್ ದರಗಳನ್ನು ಪ್ರಕಟಿಸಲಿದೆ.

ಶೀಘ್ರವೇ ವಿಶೇಷ ಡೆಸ್ಕ್ ಸ್ಥಾಪನೆ
ತಿರುಪತಿ ಪ್ರವಾಸವನ್ನು ಮತ್ತಷ್ಟು ಸರಳಗೊಳಿಸಿ ಹೆಚ್ಚಿನ ಭಕ್ತರು ಭೇಟಿ ನೀಡಲು ಅವಕಾಶ ನೀಡುವುದು ಯೋಜನೆಯ ಉದ್ದೇಶವಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಶೀಘ್ರದಲ್ಲೇ ತನ್ನ ಕಚೇರಿಯಲ್ಲಿ ಈ ಪ್ರವಾಸಿ ಪ್ಯಾಕೇಜ್ ಮಾಹಿತಿ ನೀಡಲು ವಿಶೇಷ ಡೆಸ್ಕ್ ಸ್ಥಾಪನೆ ಮಾಡಲಿದೆ.
ಸರ್ಕಾರದಿಂದ ಅಧಿಕೃತ ಒಪ್ಪಿಗೆ ಸಿಕ್ಕಿದ ಬಳಿಕ ಬಸ್, ಪ್ಯಾಕೇಜ್ ದರ ಸೇರಿದಂತೆ ಇತರ ವಿವರಗಳನ್ನು ಅಂತಿಮಗೊಳಿಸಲಾಗುತ್ತದೆ. ತಿರುಪತಿ ಪ್ರವಾಸವನ್ನು ಕೈಗೊಳ್ಳುವ ಜನರು ಈ ಪ್ಯಾಕೇಜ್ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications