ಮಡಿಕೇರಿ - ಸೋಮವಾರಪೇಟೆ - ಬೆಂಗಳೂರು ಮಾರ್ಗದ ಪ್ರಯಾಣಿಕರಿಗೆ ಸಿಹಿ ಸುದ್ದಿ
ಮಡಿಕೇರಿ, ಜೂನ್. 14: ರಾಜ್ಯ ಸರ್ಕಾರ ರಾಜ್ಯದಲ್ಲಿ 100 ನಾನ್ ಎಸಿ ಅಶ್ವಮೇಧ ಕ್ಲಾಸಿಕ್ ಬಸ್ಗಳನ್ನು ರಸ್ತೆಗಿಳಿಸಿದೆ. 800 ಅಶ್ವಮೇಧ ಕ್ಲಾಸಿಕ್ ಬಸ್ಗಳನ್ನು ಬಿಡುವ ಸಾರಿಗೆ ಇಲಾಖೆಯ ಈ ಯೋಜನೆಯಲ್ಲಿ ಈಗಾಗಲೇ ರಾಜ್ಯಾದ್ಯಂತ ಹಲವು ಬಸ್ಗಳು ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿವೆ. ಇದರ ಜೊತೆಗೆ ಮಡಿಕೇರಿಯಿಂದ ಬೆಂಗಳೂರಿಗೆ ಅಶ್ವಮೇಧ ಬಸ್ಗಳನ್ನು ಬಿಡಲಾಗಿದೆ.
ಕರ್ನಾಟಕ ಸರ್ಕಾರದ ಬಸ್ ಸೇವೆಗಳಲ್ಲಿ ಒಂದಾದ ನೂತನ 'ಅಶ್ವಮೇಧ' ಬಸ್ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದ್ದಾರೆ. ಈ ಬಸ್ ಮಡಿಕೇರಿ - ಸೋಮವಾರಪೇಟೆ - ಅರಕಲಗೋಡು - ಚೆನ್ನರಾಯಪಟ್ಟಣದ ಮೂಲಕ ಬೆಂಗಳೂರು ತಲುಪಲಿದೆ.

ಮಡಿಕೇರಿ- ಬೆಂಗಳೂರು ಅಶ್ವಮೇಧ ಬಸ್ ಶೆಡ್ಯೂಲ್
ಮಡಿಕೇರಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಅಶ್ವಮೇಧ ಕ್ಲಾಸಿಕ್ ಬಸ್ ಮಡಿಕೇರಿ - ಸೋಮವಾರಪೇಟೆ - ಅರಕಲಗೋಡು - ಚೆನ್ನರಾಯಪಟ್ಟಣ ಮಾರ್ಗದ ಮೂಲಕ ಪ್ರತಿ ದಿನ ಬೆಳಗ್ಗೆ 10.15 ಗಂಟೆಗೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ. ಈ ಬಗ್ಗೆ ಶಾಸಕ ಡಾ.ಮಂತರ್ ಗೌಡ ಮಾಹಿತಿ ನೀಡಿದ್ದಾರೆ.
ಮಡಿಕೇರಿ - ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರು ಕಷ್ಟ ಪಡುತ್ತಿದ್ದರು. ಹೀಗಾಗಿ ಇಲ್ಲಿ ಬಸ್ ಬಿಡಬೇಕು ಎಂಬುದು ಬಹುದಿನದ ಬೇಡಿಕೆಯಾಗಿತ್ತು,ಈ ಬೇಡಿಕೆಯನ್ನು ಈಡೇರಿಸಲಾಗಿದೆ. ಮಡಿಕೇರಿ ಕೆಎಸ್ಆರ್ಟಿಸಿ ಘಟಕದಿಂದ ಸೋಮವಾರಪೇಟೆ ಮಾರ್ಗದಲ್ಲಿ 3 ಬಸ್ಸುಗಳು, ಕುಶಾಲನಗರದಿಂದ 2 ಬಸ್ಸುಗಳು ಸಂಚರಿಸುತ್ತಿವೆ ಎಂದು ತಿಳಿಸಿದ್ದಾರೆ.
ಮಡಿಕೇರಿ ಕೆಎಸ್ಆರ್ಟಿಸಿ ಘಟಕದಲ್ಲಿ 97 ಬಸ್ಸುಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್ಆರ್ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್ಸುಗಳು ಸಂಚರಿಸಲಿವೆ ಎಂದು ಡಾ. ಮಂತರ್ ಗೌಡ ಅವರು ಮಾಹಿತಿ ನೀಡಿದ್ದಾರೆ. ಈ ವೇಳೆ ಮಡಿಕೇರಿ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕರಾದ ವೀರಭದ್ರಸ್ವಾಮಿ, ಸಂಚಾರಿ ನಿಯಂತ್ರಕರು ಇತರರು ಕಾರ್ಯಕ್ರಮದಲ್ಲಿ ಇದ್ದರು.

100 ಅಶ್ವಮೇಧ ಬಸ್ಗಳ ಲೋಕಾರ್ಪಣೆ
ರಾಜ್ಯಾದ್ಯಂತ ಜನರಿಗೆ ಸುವ್ಯವಸ್ಥಿತ ಸಾರಿಗೆ ಸೇವೆ ನೀಡಲು ಸಾರಿಗೆ ನಿಗಮವು 100 ಅಶ್ವಮೇಧ ಬಸ್ಗಳನ್ನು ಲೋಕಾರ್ಪಣೆ ಮಾಡಿದೆ. ಅದಾದ ಮರುದಿನ ಬೆಂಗಳೂರಿನಿಂದ ಹಾಸನಕ್ಕೆ 10 ಬಸ್ ಕಾರ್ಯಾಚರಣೆಗೆ ನಿಯೋಜಿಸಿತ್ತು. ಬಳಿಕ 15 'ಅಶ್ವಮೇಧ' ಬಸ್ಗಳು ಮೈಸೂರಿನಿಂದ ಬೆಂಗಳೂರು, ಹುಣಸೂರಿನಿಂದ ಬೆಂಗಳೂರಿಗೆ ಹಾಗೂ ಕೆ.ಆರ್. ನಗರದಿಂದ ಬೆಂಗಳೂರಿಗೆ ಪ್ರತಿನಿತ್ಯ ಕಾರ್ಯಾಚರಣೆ ನಡೆಸುತ್ತಿವೆ.
ಇತ್ತೀಚೆಗೆ ಚಿಕ್ಕಬಳ್ಳಾಪುರ ವಿಭಾಗಕ್ಕೂ 35 ಹೊಸ ಅಶ್ವಮೇಧ ಬಸ್ಗಳನ್ನು ಮಂಜೂರು ಮಾಡಲಾಗಿದೆ. ಈ ಹೊಸ ಬಸ್ಗಳನ್ನು ಬೆಂಗಳೂರು ನಗರ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಚಿಂತಾಮಣಿ, ಶಿಡ್ಲಘಟ್ಟ ಮಾರ್ಗಗಳಿಗೆ ಬಿಡಲಾಗುತ್ತಿದೆ. ಈಗ ಮಡಿಕೇರಿಯಿಂದ ಬೆಂಗಳೂರಿಗೆ ಅಶ್ವಮೇಧ ಬಸ್ಗಳನ್ನು ಬಿಡಲಾಗಿದೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications