ಕರಾವಳಿ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ
ಮಂಗಳೂರು, ಮಾರ್ಚ್ 28; ಭಾರತೀಯ ರೈಲ್ವೆ ಕರ್ನಾಟಕದ ಕರಾವಳಿ ಭಾಗದ ಜನರ ಬಹುದಿನದ ಬೇಡಿಕೆಯನ್ನು ಈಡೇರಿಸಿದೆ. ರಾಜಧಾನಿ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚಾರ ನಡೆಸುವ ಜನರು ಹಲವು ದಿನಗಳಿಂದ ರೈಲಿನ ವೇಳಾಪಟ್ಟಿ ಬದಲಾವಣೆ ಮಾಡಲು ಬೇಡಿಕೆ ಇಟ್ಟಿದ್ದರು. ಈಗ ಇದಕ್ಕೆ ಇಲಾಖೆ ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲಾ ರೈಲು ಯಾತ್ರಿಕರ ಸಂಘ ಇಲಾಖೆಗೆ ಧನ್ಯವಾದಗಳನ್ನು ಸಲ್ಲಿಕೆ ಮಾಡಿದೆ.
ಕರ್ನಾಟಕದ ಪ್ರಮುಖ ನಗರಗಳಾಗಿರುವ ಬೆಂಗಳೂರು, ಮಂಗಳೂರು ನಡುವೆ ಅವಿನಾಭಾವ ಸಂಬಂಧವಿದೆ. ಆದರೆ, ರಸ್ತೆ ಮಾರ್ಗದಲ್ಲಿ ಉಭಯ ನಗರಗಳ ನಡುವೆ ಸಂಚಾರ ನಡೆಸುವುದು ಎಷ್ಟು ತ್ರಾಸದಾಯಕ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿ ಬಹಳಷ್ಟು ಜನರು ರೈಲು ಸೇವೆಯನ್ನು ಅವಲಂಬಿಸಿದ್ದಾರೆ. ವಾಣಿಜ್ಯ, ಶೈಕ್ಷಣಿಕ, ಉದ್ಯೋಗ ಹೀಗೆ ಹಲವಾರು ವಿಷಯಗಳಿಗೆ ಜನರು ಈ ಎರಡು ನಗರಗಳಿಗೆ ಜನರು ಪ್ರಯಾಣ ಮಾಡುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಸೇರಿದಂತೆ ಹಲವಾರು ಧಾರ್ಮಿಕ ಕೇಂದ್ರಗಳಿವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇವರಿಗೆಲ್ಲ ಅನುಕೂಲವಾಗುವಂತೆ ಹಗಲು ಹೊತ್ತಿನಲ್ಲಿ ರೈಲು ಸಂಖ್ಯೆ 16575/16576 ಮಂಗಳೂರು ಜಂಕ್ಷನ್-ಯಶವಂತಪುರ ಜಂಕ್ಷನ್ ನಡುವೆ ಗೋಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು ಆರಂಭಿಸಲಾಗಿತ್ತು. ಮೊದಲು ಈ ರೈಲು ಮಂಗಳೂರಿನಿಂದ ಬೆಳಗ್ಗೆ 11.30ಕ್ಕೆ ಹೊರಟು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣವನ್ನು ರಾತ್ರಿ 8.45ಕ್ಕೆ ತಲುಪುತ್ತಿತ್ತು. ಈ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಎಂದು ಬೇಡಿಕೆ ಇಡಲಾಗಿತ್ತು.
ರೈಲ್ವೆ ಇಲಾಖೆ ಒಪ್ಪಿಗೆ; ಈಗ ನೈಋತ್ಯ ರೈಲ್ವೆ ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಜುಲೈ 16ರಿಂದ ಅನ್ವಯವಾಗುವಂತೆ ರೈಲು ಹೊಸ ವೇಳಾಪಟ್ಟಿಯಲ್ಲಿ ಸಂಚಾರ ನಡೆಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರೈಲು ಸಂಖ್ಯೆ 16540 ಭಾನುವಾರ ಬೆಳಗ್ಗೆ 7ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು ಯಶವಂತಪುರಕ್ಕೆ ಸಂಜೆ 4.30ಕ್ಕೆ ತಲುಪಲಿದೆ.

ಮಂಗಳೂರು-ಯಶವಂತಪುರ ರೈಲು ಭಾನುವಾರ ಬೆಳಗ್ಗೆ 9.15ಕ್ಕೆ ಹೊರಟು ಯಶವಂತಪುರಕ್ಕೆ ರಾತ್ರಿ 8.20ಕ್ಕೆ ತಲುಪುತ್ತಿದೆ. ಆದರೆ ಈ ಸಾಪ್ತಾಹಿಕ ರೈಲಿನ ಪ್ರಯಾಣವು ಬಹಳ ಸುದೀರ್ಘ ಪ್ರಯಾಣವಾಗಿದೆ. ಜೊತೆಗೆ ವಾರದ ಮೂರು ದಿನ ಸಂಚರಿಸುವ ಗೋಮ್ಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರಿನಿಂದ ಮಧ್ಯಾಹ್ನ ಹೊರಟು ಬೆಂಗಳೂರಿಗೆ ರಾತ್ರಿ ತಲುಪುವ ಕಾರಣ ಅಲ್ಲಿಂದ ಮುಂದೆ ತಮ್ಮ ತಮ್ಮ ಸ್ಥಳಕ್ಕೆ ಹೋಗುವವರಿಗೆ ಕಷ್ಟವಾಗುತ್ತಿದೆ. ಇದರಿಂದ ಪ್ರಯಾಣಿಕರು ಈ ಎರಡು ರೈಲುಗಳನ್ನು ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಬೆಂಗಳೂರಿಗೆ ಸಂಜೆ ಬೇಗ ತಲುಪುವಂತೆ ಬದಲಾವಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು.
ಪಶ್ಚಿಮ ಕರಾವಳಿ ರೈಲು ಯಾತ್ರಿಕರ ಸಂಘ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ಗೆ ಮನವಿ ಮಾಡಿತ್ತು. ಸಂಸದರು ವೇಳಾಪಟ್ಟಿ ಬದಲಿಸುವಂತೆ ನೈರುತ್ಯ ರೈಲ್ವೆ ವಲಯ ಹಾಗು ದಕ್ಷಿಣ ರೈಲ್ವೆ ವಲಯಕ್ಕೆ ಪತ್ರವನ್ನು ಬರೆದಿದ್ದರು. ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯ ಸದಸ್ಯರು ಹುಬ್ಬಳ್ಳಿಯ ನೈರುತ್ಯ ರೈಲ್ವೆ ಕಚೇರಿಗೆ ಫೆಬ್ರುವರಿ ತಿಂಗಳಿನಲ್ಲಿ ಭೇಟಿ ನೀಡಿ ಅಧಿಕಾರಿಗಳಿಗೂ ಈ ಕುರಿತು ಲಿಖಿತ ಮನವಿ ಸಹ ಸಲ್ಲಿಕೆ ಮಾಡಿದ್ದರು.
ಈಗಿರುವ ವೇಳಾಪಟ್ಟಿ ಪ್ರಕಾರ ರೈಲು ಸಂಚಾರ ನಡೆಸಿದರೆ ಮಂಗಳೂರು ಜಂಕ್ಷನ್-ಬೆಂಗಳೂರಿನ ಯಶವಂತಪುರ ನಡವಿನ 357 ಕಿ. ಮೀ. ಕ್ರಮಿಸಲು ರೈಲು 11 ಗಂಟೆ 5 ನಿಮಿಷ ತೆಗೆದುಕೊಳ್ಳುತ್ತಿದೆ. ಸುಬ್ರಹ್ಮಣ್ಯ-ಸಕಲೇಶಪುರ ಘಟ್ಟ ಪ್ರದೇಶದಲ್ಲಿ ಸಕಲೇಶಪುರ ಕಡೆಯಿಂದ ಬರುವ ರೈಲುಗಳ ಜೊತೆಗೆ ಕ್ರಾಸಿಂಗ್ ಮಾಡಲು ಒಂದು ಗಂಟೆ ನಿಲ್ಲಿಸಲಾಗುತ್ತಿದೆ. ಇದರಿಂದ ಪ್ರಯಾಣಿಕರ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ ಎಂದು ಇಲಾಖೆಗೆ ಮಾಡಿದ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications