Get Updates
Get notified of breaking news, exclusive insights, and must-see stories!

ಕರಾವಳಿ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ

ಮಂಗಳೂರು, ಮಾರ್ಚ್ 28; ಭಾರತೀಯ ರೈಲ್ವೆ ಕರ್ನಾಟಕದ ಕರಾವಳಿ ಭಾಗದ ಜನರ ಬಹುದಿನದ ಬೇಡಿಕೆಯನ್ನು ಈಡೇರಿಸಿದೆ. ರಾಜಧಾನಿ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚಾರ ನಡೆಸುವ ಜನರು ಹಲವು ದಿನಗಳಿಂದ ರೈಲಿನ ವೇಳಾಪಟ್ಟಿ ಬದಲಾವಣೆ ಮಾಡಲು ಬೇಡಿಕೆ ಇಟ್ಟಿದ್ದರು. ಈಗ ಇದಕ್ಕೆ ಇಲಾಖೆ ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲಾ ರೈಲು ಯಾತ್ರಿಕರ ಸಂಘ ಇಲಾಖೆಗೆ ಧನ್ಯವಾದಗಳನ್ನು ಸಲ್ಲಿಕೆ ಮಾಡಿದೆ.

ಕರ್ನಾಟಕದ ಪ್ರಮುಖ ನಗರಗಳಾಗಿರುವ ಬೆಂಗಳೂರು, ಮಂಗಳೂರು ನಡುವೆ ಅವಿನಾಭಾವ ಸಂಬಂಧವಿದೆ. ಆದರೆ, ರಸ್ತೆ ಮಾರ್ಗದಲ್ಲಿ ಉಭಯ ನಗರಗಳ ನಡುವೆ ಸಂಚಾರ ನಡೆಸುವುದು ಎಷ್ಟು ತ್ರಾಸದಾಯಕ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿ ಬಹಳಷ್ಟು ಜನರು ರೈಲು ಸೇವೆಯನ್ನು ಅವಲಂಬಿಸಿದ್ದಾರೆ. ವಾಣಿಜ್ಯ, ಶೈಕ್ಷಣಿಕ, ಉದ್ಯೋಗ ಹೀಗೆ ಹಲವಾರು ವಿಷಯಗಳಿಗೆ ಜನರು ಈ ಎರಡು ನಗರಗಳಿಗೆ ಜನರು ಪ್ರಯಾಣ ಮಾಡುತ್ತಾರೆ.

train

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಸೇರಿದಂತೆ ಹಲವಾರು ಧಾರ್ಮಿಕ ಕೇಂದ್ರಗಳಿವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇವರಿಗೆಲ್ಲ ಅನುಕೂಲವಾಗುವಂತೆ ಹಗಲು ಹೊತ್ತಿನಲ್ಲಿ ರೈಲು ಸಂಖ್ಯೆ 16575/16576 ಮಂಗಳೂರು ಜಂಕ್ಷನ್-ಯಶವಂತಪುರ ಜಂಕ್ಷನ್ ನಡುವೆ ಗೋಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು ಆರಂಭಿಸಲಾಗಿತ್ತು. ಮೊದಲು ಈ ರೈಲು ಮಂಗಳೂರಿನಿಂದ ಬೆಳಗ್ಗೆ 11.30ಕ್ಕೆ ಹೊರಟು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣವನ್ನು ರಾತ್ರಿ 8.45ಕ್ಕೆ ತಲುಪುತ್ತಿತ್ತು. ಈ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಎಂದು ಬೇಡಿಕೆ ಇಡಲಾಗಿತ್ತು.

ರೈಲ್ವೆ ಇಲಾಖೆ ಒಪ್ಪಿಗೆ; ಈಗ ನೈಋತ್ಯ ರೈಲ್ವೆ ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಜುಲೈ 16ರಿಂದ ಅನ್ವಯವಾಗುವಂತೆ ರೈಲು ಹೊಸ ವೇಳಾಪಟ್ಟಿಯಲ್ಲಿ ಸಂಚಾರ ನಡೆಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರೈಲು ಸಂಖ್ಯೆ 16540 ಭಾನುವಾರ ಬೆಳಗ್ಗೆ 7ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಯಶವಂತಪುರಕ್ಕೆ ಸಂಜೆ 4.30ಕ್ಕೆ ತಲುಪಲಿದೆ.

train

ಮಂಗಳೂರು-ಯಶವಂತಪುರ ರೈಲು ಭಾನುವಾರ ಬೆಳಗ್ಗೆ 9.15ಕ್ಕೆ ಹೊರಟು ಯಶವಂತಪುರಕ್ಕೆ ರಾತ್ರಿ 8.20ಕ್ಕೆ ತಲುಪುತ್ತಿದೆ. ಆದರೆ ಈ ಸಾಪ್ತಾಹಿಕ ರೈಲಿನ ಪ್ರಯಾಣವು ಬಹಳ ಸುದೀರ್ಘ ಪ್ರಯಾಣವಾಗಿದೆ. ಜೊತೆಗೆ ವಾರದ ಮೂರು ದಿನ ಸಂಚರಿಸುವ ಗೋಮ್ಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಮಧ್ಯಾಹ್ನ ಹೊರಟು ಬೆಂಗಳೂರಿಗೆ ರಾತ್ರಿ ತಲುಪುವ ಕಾರಣ ಅಲ್ಲಿಂದ ಮುಂದೆ ತಮ್ಮ ತಮ್ಮ ಸ್ಥಳಕ್ಕೆ ಹೋಗುವವರಿಗೆ ಕಷ್ಟವಾಗುತ್ತಿದೆ. ಇದರಿಂದ ಪ್ರಯಾಣಿಕರು ಈ ಎರಡು ರೈಲುಗಳನ್ನು ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಬೆಂಗಳೂರಿಗೆ ಸಂಜೆ ಬೇಗ ತಲುಪುವಂತೆ ಬದಲಾವಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು.

ಪಶ್ಚಿಮ ಕರಾವಳಿ ರೈಲು ಯಾತ್ರಿಕರ ಸಂಘ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಮನವಿ ಮಾಡಿತ್ತು. ಸಂಸದರು ವೇಳಾಪಟ್ಟಿ ಬದಲಿಸುವಂತೆ ನೈರುತ್ಯ ರೈಲ್ವೆ ವಲಯ ಹಾಗು ದಕ್ಷಿಣ ರೈಲ್ವೆ ವಲಯಕ್ಕೆ ಪತ್ರವನ್ನು ಬರೆದಿದ್ದರು. ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯ ಸದಸ್ಯರು ಹುಬ್ಬಳ್ಳಿಯ ನೈರುತ್ಯ ರೈಲ್ವೆ ಕಚೇರಿಗೆ ಫೆಬ್ರುವರಿ ತಿಂಗಳಿನಲ್ಲಿ ಭೇಟಿ ನೀಡಿ ಅಧಿಕಾರಿಗಳಿಗೂ ಈ ಕುರಿತು ಲಿಖಿತ ಮನವಿ ಸಹ ಸಲ್ಲಿಕೆ ಮಾಡಿದ್ದರು.

ಈಗಿರುವ ವೇಳಾಪಟ್ಟಿ ಪ್ರಕಾರ ರೈಲು ಸಂಚಾರ ನಡೆಸಿದರೆ ಮಂಗಳೂರು ಜಂಕ್ಷನ್-ಬೆಂಗಳೂರಿನ ಯಶವಂತಪುರ ನಡವಿನ 357 ಕಿ. ಮೀ. ಕ್ರಮಿಸಲು ರೈಲು 11 ಗಂಟೆ 5 ನಿಮಿಷ ತೆಗೆದುಕೊಳ್ಳುತ್ತಿದೆ. ಸುಬ್ರಹ್ಮಣ್ಯ-ಸಕಲೇಶಪುರ ಘಟ್ಟ ಪ್ರದೇಶದಲ್ಲಿ ಸಕಲೇಶಪುರ ಕಡೆಯಿಂದ ಬರುವ ರೈಲುಗಳ ಜೊತೆಗೆ ಕ್ರಾಸಿಂಗ್ ಮಾಡಲು ಒಂದು ಗಂಟೆ ನಿಲ್ಲಿಸಲಾಗುತ್ತಿದೆ. ಇದರಿಂದ ಪ್ರಯಾಣಿಕರ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ ಎಂದು ಇಲಾಖೆಗೆ ಮಾಡಿದ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+