ಮಯೂರ ಕ್ಯಾಂಟೀನ್; ನಂದಿಹಿಲ್ಸ್ ಪ್ರವಾಸಿಗರಿಗೆ ಸಿಹಿಸುದ್ದಿ
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 04; ಪ್ರತಿನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುವ ಪ್ರಸಿದ್ಧ ಪ್ರವಾಸಿ ತಾಣ ಬೆಂಗಳೂರು ನಗರಕ್ಕೆ ಹತ್ತಿರವಿರುವ ನಂದಿಹಿಲ್ಸ್. ಪ್ರವಾಸಿಗರಿಗೆ ಕೆಎಸ್ಟಿಡಿಸಿ ಕೊಡುಗೆಯೊಂದನ್ನು ನೀಡಿದೆ. ಕಡಿಮೆ ದರದಲ್ಲಿ ಊಟ, ಉಪಹಾರ ದೊರೆಯಲಿದೆ.
ಹೌದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕರ್ನಾಟಕ ಸರ್ಕಾರದ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ನಂದಿಹಿಲ್ಸ್ನಲ್ಲಿ 'ಮಯೂರ ಕ್ಯಾಂಟೀನ್' ಆರಂಭಿಸಿದೆ. ಕಡಿಮೆ ಬೆಲೆಗೆ ಉಪಹಾರ, ಊಟ, ಟೀ, ಕಾಫಿ ಇಲ್ಲಿ ದೊರೆಯುತ್ತದೆ.

ನಂದಿಗಿರಿಧಾಮದ ನಿರ್ವಹಣೆ ತೋಟಗಾರಿಕೆ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರವಾಗಿದೆ. ಆದ್ದರಿಂದ ಸಾವಿರಾರು ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ಕೆಎಸ್ಟಿಡಿಸಿ 'ಮಯೂರ ಕ್ಯಾಂಟೀನ್' ಆರಂಭಿಸಿದೆ. ಈ ಮೂಲಕ ಜನರನ್ನು ಸೆಳೆಯಲು ಮುಂದಾಗಿದೆ.
ಊಟ, ಉಪಹಾರದ ದರ ಪಟ್ಟಿ; ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ 'ಮಯೂರ ಕ್ಯಾಂಟೀನ್'ನಲ್ಲಿ 10 ರೂಪಾಯಿಗೆ ಕಾಫೀ/ ಟೀ ದೊರೆಯುತ್ತದೆ. 20 ರೂಪಾಯಿಗೆ ತಿಂಡಿ/ ಊಟ ದೊರೆಯುತ್ತದೆ. ಇದು ಪ್ರವಾಸಿಗರಿಗಾಗಿ ಕೆಎಸ್ಟಿಡಿಸಿಯ ಕೊಡುಗೆಯಾಗಿದೆ. ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
'ಮಯೂರ ಕ್ಯಾಂಟೀನ್'ನಲ್ಲಿ ಟೀ 10 ರೂ., ರೈಸ್ ಬಾತ್ 20 ರೂ., ಉಪ್ಪಿಟ್ಟು 20 ರೂ., ಕೇಸರಿ ಬಾತ್ 20 ರೂ., ಮೊಸರನ್ನ 15 ರೂ., ಅನ್ನ ಸಾಂಬಾರ್ 20 ರೂ. ಎಂದು ಫಲಕ ಹಾಕಲಾಗಿದೆ. ಇದರಿಂದಾಗಿ ಪ್ರವಾಸಿಗರು ಹೆಚ್ಚಿನ ಹಣವನ್ನು ನೀಡಿ ಊಟ, ಉಪಹಾರ ಮಾಡುವುದು ತಪ್ಪಿದಂತೆ ಆಗಿದೆ. ಕೆಎಸ್ಟಿಡಿಸಿಯ ವ್ಯವಸ್ಥಾಪಕ ನಿರ್ದೇಶಕ ಜಿ. ಜಗದೀಶ್ ಈ ಕುರಿತು ಫೇಸ್ಬುಕ್ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಖಾತೆ ಸಚಿವ ಎಚ್. ಕೆ. ಪಾಟೀಲ್ ನಂದಿ ಹಿಲ್ಸ್ಗೆ ಭೇಟಿ ನೀಡಿದ್ದರು. ಆಗ ಅವರು 'ಮಯೂರ ಕ್ಯಾಂಟೀನ್'ನಲ್ಲಿನ ಮೆನುಗಳ ದರಗಳನ್ನು ನೋಡಿ, ಇದು ದುಬಾರಿಯಾಗಿದೆ. ಸೂಕ್ತ ಕ್ರಮವನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಬಳಿಕ ವ್ಯವಸ್ಥಾಪಕ ನಿರ್ದೇಶಕ ಜಿ. ಜಗದೀಶ್ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ 'ಮಯೂರ ಕ್ಯಾಂಟೀನ್'ನಲ್ಲಿನ ಉಟ, ಉಪಹಾರದ ದರಗಳನ್ನು ಬದಲಾವಣೆ ಮಾಡಿದ್ದಾರೆ. ನಿತ್ಯ ಆಗಮಿಸುವ ನೂರಾರು ಪ್ರವಾಸಿಗರು ಇದಕ್ಕೆ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.
ಪ್ರತಿದಿನ ನೂರಾರು, ವಾರಾಂತ್ಯ ಮತ್ತು ರಜೆ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ನಂದಿಗಿರಿಧಾಮಕ್ಕೆ ಆಗಮಿಸುತ್ತಾರೆ. ಪಾರ್ಕಿಂಗ್ನಿಂದ ಹಿಡಿದು ಊಟ, ತಿಂಡಿಯ ತನಕ ಎಲ್ಲಾ ದರಗಳು ಹೆಚ್ಚಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಈಗ ಕಡಿಮೆ ಬೆಲೆಗೆ ಊಟ, ಉಪಹಾರ ದೊರೆಯುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications