ಶಬರಿಮಲೆ ಭಕ್ತರಿಗೆ ಸಿಹಿಸುದ್ದಿ ಕೊಟ್ಟ ಕೇಂದ್ರ ಸರ್ಕಾರ
ತಿರುವನಂತಪುರಂ, ಏಪ್ರಿಲ್ 18; ಶಬರಿಮಲೆ ಅಯ್ಯಪ್ಪ ದೇವಾಲಯದ ಭಕ್ತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಕೊಟ್ಟಾಯಂ ಜಿಲ್ಲೆಯ ಹಸಿರು ವಿಮಾನ ನಿಲ್ದಾಣ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ನಾಗರಿಕರ ವಿಮಾನಯಾನ ಸಚಿವಾಲಯ ಶಬರಿಮಲೆ ಅಯ್ಯಪ್ಪ ದೇವಾಲಯದ ಸಮೀಪದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಒಪ್ಪಿಗೆ ನೀಡಿದೆ. ಈ ಮೂಲಕ ಶಬರಿಮಲೆಗೆ ಬೇರೆ ಬೇರೆ ರಾಜ್ಯಗಳಿಂದ ಸಂಪರ್ಕ ಉತ್ತಮವಾಗಲಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರಿಗೂ ಸಹಾಯಕವಾಗಲಿದೆ.
ಸಚಿವಾಲಯ ಮತ್ತು ಯೋಜನಾ ಪ್ರಾಧಿಕಾರ, ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನಡುವಿನ ಹಲವು ಸುತ್ತಿನ ಸಭೆಯ ಬಳಿಕ ಹೊಸ ಹಸಿರು ವಿಮಾನ ನಿಲ್ದಾಣ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಯೋಜನೆಗೆ ಪರಿಸರ ಪ್ರೇಮಿಗಳ ವಿರೋಧ ಎದುರಾಗಿತ್ತು. ಪರಿಸರ ಇಲಾಖೆಯೂ ಸಹ ಯೋಜನೆ ಕುರಿತು ವಿವರವಾದ ಅಧ್ಯಯನ ನಡೆಸಿ ವರದಿ ತಯಾರು ಮಾಡಿತ್ತು.

ಯೋಜನೆಯ ವಿವರಗಳು; ಕೇರಳ ರಾಜ್ಯದ ಕೊಟ್ಟಾಯಂ ಹಸಿರು ವಿಮಾನ ನಿಲ್ದಾಣ 2,250 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ. ಈ ಯೋಜನೆಗೆ ಸುಮಾರು 4000 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ನಿಲ್ದಾಣ ಯೋಜನೆಗೆ ಒಪ್ಪಿಗೆ ನೀಡಿರುವ ಕುರಿತು ಟ್ವೀಟ್ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಈ ಟ್ವೀಟ್ ಅನ್ನು ರಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ Great news for tourism and especially spiritual tourism ಎಂದು ಹೇಳಿದ್ದಾರೆ. ಈ ವಿಮಾನ ನಿಲ್ದಾಣದಿಂದ ಶಬರಿಮಲೆ ದೇವಾಲಯಕ್ಕೆ ಸುಮಾರು 45 ಕಿ. ಮೀ. ದೂರವಿದೆ. ವಿಮಾನ ನಿಲ್ದಾಣ ನಿರ್ಮಾಣದಿಂದ ದೇವಾಲಯಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಸಹಾಯಕವಾಗಲಿದೆ.
ಕಳೆದ ವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಿಟಿಐ ಜೊತೆ ಮಾತನಾಡಿದ್ದರು. ಆಗ, "ಶಬರಿಮಲೆಯಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳಿಗೆ ಅನುಮತಿಗಳನ್ನು ಪಡೆದುಕೊಳ್ಳಲಾಗಿದೆ" ಎಂದು ಹೇಳಿದ್ದರು. ಈ ವಾರ ಕೇಂದ್ರ ನಾಗರಿಕರ ವಿಮಾನಯಾನ ಸಚಿವಾಲಯ ಯೋಜನೆಗೆ ಒಪ್ಪಿಗೆ ನೀಡಿರುವ ಕುರಿತು ಟ್ವೀಟ್ ಮಾಡಿದೆ.

ಯೋಜನೆಯ ವಿವರದಂತೆ ಎಲ್ಲಾ ಮಾದರಿ ವಿಮಾನಗಳು ಇಳಿಯಲು ಸಹಕಾರಿಯಾಗುವಂತೆ 3.5 ಕಿ. ಮೀ. ಉದ್ದದ ರನ್ ವೇಯನ್ನು ನಿರ್ಮಾಣ ಮಾಡಲಾಗುತ್ತದೆ. ಭೂ ಸ್ವಾಧೀನ ಪೂರ್ಣಗೊಂಡ ಬಳಿಕ ಯೋಜನೆಯ ವಿವರವಾದ ಡಿಪಿಆರ್ ಸಿದ್ಧಗೊಳಿಸಲಾಗುತ್ತದೆ ಎಂದು ಕೇರಳ ಸರ್ಕಾರ ಹೇಳಿದೆ. 2017ರಲ್ಲಿಯೇ ರಾಜ್ಯ ಸರ್ಕಾರ ಈ ಯೋಜನೆಯ ಪ್ರಸ್ತಾವನೆ ಸಿದ್ಧಪಡಿಸಿತ್ತು. ಆದರೆ ಅರಣ್ಯ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕಾರಣಕ್ಕೆ ವಿವಾದ ಉಂಟಾಗಿತ್ತು.
ಕೇರಳ ಸರ್ಕಾರ ಕೆಲವು ದಿನಗಳ ಹಿಂದೆ ಹೇಳಿದಂತೆ ಹಸಿರು ವಿಮಾನ ನಿಲ್ದಾಣ ಯೋಜನೆಗೆ ಎರುಮೆಲಿ ದಕ್ಷಿಣ ಮತ್ತು ಮಣಿಮಾಲಾ ಗ್ರಾಮಗಳಲ್ಲಿ 1,039.876 ಹೆಕ್ಟೇರ್ (2,570 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತದೆ. ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಕೇರಳ ಸರ್ಕಾರ ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತಾ ಅಧ್ಯಯನ ವರದಿಯನ್ನು ವಿಮಾನಯಾನ ಸಚಿವಾಲಯಕ್ಕೆ ಸಲ್ಲಿಕೆ ಮಾಡಿತ್ತು. ಇದರ ಆಧಾರದ ಮೇಲೆ ಒಪ್ಪಿಗೆ ಸಿಕ್ಕಿದೆ.
ಈ ವಿಮಾನ ನಿಲ್ದಾಣ ಯೋಜನೆಗಾಗಿಯೇ ವಿ. ತುಳಸಿದಾಸ್ ಅವರನ್ನು ವಿಶೇಷ ಅಧಿಕಾರಿಯಾಗಿ ನೇಮಿಸಲಾಗಿದೆ. ಕೆಲವು ದಿನಗಳ ಹಿಂದೆ ಅವರು ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ್ದರು. ಯೋಜನೆಯು ಮಹತ್ವದ ತಾಂತ್ರಿಕ ಮೈಲಿಗಲ್ಲು ದಾಟಿದೆ. ಯೋಜನೆಯ ಸಾಮಾಜಿಕ ಪರಿಣಾಮದ ಮೌಲ್ಯಮಾಪನ ಅಧ್ಯಯನ ವರದಿ ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications