ಚಿಕ್ಕಮಗಳೂರು ಮಳೆ, ಪ್ರವಾಸಿಗರ ದಂಡು: ಟ್ರಾಫಿಕ್ ಜಾಮ್
ಚಿಕ್ಕಮಗಳೂರು, ಜೂನ್ 09: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನೈಋತ್ಯ ಮುಂಗಾರು ಮಳೆ ಆರಂಭವಾಗಿದೆ. ಪ್ರಕೃತಿ ಸೌಂದರ್ಯ ಸವಿಯಲು ವಾರಾಂತ್ಯದಲ್ಲಿ ಸಾವಿರಾರು ಪ್ರವಾಸಿಗರ ದಂಡು ಹರಿದು ಬಂದಿದೆ. ಇದರಿಂದಾಗಿ ಚಿಕ್ಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯಗಿರಿಯಲ್ಲಿ ಮಂಜುಕವಿದ ವಾತಾವರಣ, ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ತಾಲೂಕಿನ ಮುಳ್ಳಯ್ಯನಗಿರಿ - ಕೈಮರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು.

ಭಾನುವಾರ ಮಧ್ಯಾಹ್ನ 2 ಗಂಟೆಗೆ ಮುಳ್ಳಯ್ಯನಗಿರಿ ಸುತ್ತಲೂ ಟ್ರಾಫಿಕ್ ಜಾಮ್ ಉಂಟಾಗಿದೆ, ಇದರಿಂದಾಗಿ ಕೆಲವು ಕಾಲ ವಾಹನ ಸವಾರರು ಹೈರಾಣಾದರು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಟ್ರಾಫಿಕ್ ಜಾಮ್ ನಿಯಂತ್ರಿಸಲು ಹರಸಾಹಸ ಪಟ್ಟರು.
ಮೇ ತಿಂಗಳಿನಿಂದ ಮಳೆ: ಚಿಕ್ಕಮಗಳೂರಿನಲ್ಲಿ ಮೇ ತಿಂಗಳಿನಲ್ಲಿಯೂ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. ಕಳೆದ ವರ್ಷ ಮಳೆ ಕೊರತೆಯ ಕಾರಣ ಭೀಕರ ಬರ ನೋಡಿದ್ದ ಜನರು ಈಗ ಸುರಿಯುತ್ತಿರುವ ಮಳೆ ನೋಡಿ ಸಂತಸಗೊಂಡಿದ್ದಾರೆ.
ಮಳೆಗಾಲದ ಹಿನ್ನಲೆಯಲ್ಲಿ ಪ್ರವಾಸಿಗರ ದಂಡು ಪ್ರವಾಸಿ ತಾಣಗಳನ್ನು ನೋಡಲು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸುತ್ತಿದೆ. ಇದರಿಂದಾಗಿ ಭಾನುವಾರ ಮುಳ್ಳಯ್ಯನಗಿರಿ-ಕೈಮರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮುಳ್ಳಯ್ಯನಗಿರಿ, ದತ್ತಪೀಠ ರಸ್ತೆಯಲ್ಲಿ ಸಿಲುಕಿ ವಾಹನ ಸವಾರರು ಪರದಾಟ ನಡೆಸಿದರು.
ಜೂನ್ 8 2ನೇ ಶನಿವಾರ, ಜೂನ್ 9ರ ಭಾನುವಾರವಾದ ಕಾರಣ ಸರಣಿ ರಜೆ ಸಿಕ್ಕಿದ್ದು, ಪ್ರವಾಸಿಗರು ಕಾಫಿನಾಡಿನತ್ತ ಆಗಮಿಸಿದ್ದಾರೆ. ಇದರಿಂದಾಗಿ ಕಿರಿದಾದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ನಿಂದ ಸ್ಥಳೀಯರು ಸಹ ಸಂಚಾರ ನಡೆಸಲು ಸಂಕಷ್ಟ ಎದುರಾಯಿತು.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು, ಬಯಲು ಸೀಮೆ ತಾಲೂಕುಗಳಲ್ಲಿ ಶುಕ್ರವಾರದಿಂದ ಮಳೆಯಾಗುತ್ತಲೇ ಇದೆ. ಚಿಕ್ಕಮಗಳೂರು, ಚಿತ್ರದುರ್ಗ ಗಡಿಭಾಗದಲ್ಲಿ ಶುಕ್ರವಾರ ಮಳೆ ಅಬ್ಬರಕ್ಕೆ ರಸ್ತೆ ಸಂಚಾರ ಬಂದ್ ಆಗಿ, ಹಳ್ಳಗಳು ಭರ್ತಿಯಾಗಿದ್ದವು.
ಅಜ್ಜಂಪುರ ಭಾಗದಲ್ಲಿ ಸುರಿದ ಮಳೆಯಿಂದಾಗಿ ಹರಳಹಳ್ಳಿ ಹೊಳಲ್ಕೆರೆ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.ಕಳೆದ ಎರಡು ಮೂರು ವರ್ಷದಿಂದ ಸರಿಯಾಗಿ ಮಳೆಯಾಗಿರಲಿಲ್ಲ. ಹನಿ ಹನಿ ನೀರಿಗೂ ಪರದಾಟವಿತ್ತು. ಈ ಬಾರಿ ಮಳೆಯಿಂದಾಗಿ ಕೆರೆಗಳು ತುಂಬುತ್ತಿವೆ ಎಂದು ಜನರು ಸಂತಸ ಪಟ್ಟರು.
ಮಳೆಗಾಲದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಮಳೆಗಾಲದಲ್ಲಿ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚು. ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿ ಎಷ್ಟೋ ಜನರು ಬದುಕು ಕಟ್ಟಿಕೊಂಡಿದ್ದಾರೆ. ಜಿಲ್ಲೆಯ ಪ್ರಕೃತಿ ಸೌಂದರರ್ಯ ಸವಿಯಲು, ಕಲ್ಲತ್ತಿಗಿರಿ ಜಲಪಾತ ನೋಡಲು, ಚಾರಣ ಮಾಡಲು ತಂಡ-ತಂಡಗಳಾಗಿ ಜನರು ಆಗಮಿಸುತ್ತಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications