ಮೂಡಿಗೆರೆ: ಈ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ₹400 ಕೋಟಿ ಬಿಡುಗಡೆ-ಮಾಹಿತಿ, ವಿವರ
ಚಿಕ್ಕಮಗಳೂರು, ಫೆಬ್ರವರಿ, 19: ಇತ್ತೀಚೆಗಷ್ಟೇ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆ ಅಭಿವುದ್ಧಿ ಮಾಡಲಾಗುತ್ತದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿತ್ತು. ಇದೀಗ ಮೂಡಿಗೆರೆಯಿಂದ ಮೂಗುತಿಹಳ್ಳಿವರೆಗಿನ ರಾಷ್ಟ್ರೀಯ ಹೆದ್ದಾರಿ-173 ವಿಸ್ತರಣೆಗಾಗಿ 400 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
26 ಕಿಲೋ ಮೀಟರ್ ಹೆದ್ದಾರಿಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತನೆ ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿ-173 ಚಿಕ್ಕಮಗಳೂರು, ಕಡೂರು ಮತ್ತು ಹೊಳಲ್ಕೆರೆ ಸೇರಿದಂತೆ ಪ್ರಮುಖ ನಗರಗಳ ಹೆದ್ದಾರಿಗಳನ್ನು ಸಂಪರ್ಕಿಸುತ್ತದೆ ಎಂದು ಅವರು ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ ಅಂತಾ ಪ್ರಜಾವಾಣಿಯಲ್ಲಿ ವರದಿಯಾಗಿದೆ.

ಚಾರ್ಮಾಡಿ ಘಾಟ್ ರಸ್ತೆ ಅಭಿವುದ್ಧಿ: ಇನ್ನು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆ ಅಭಿವುದ್ಧಿಯನ್ನು 343.74 ಕೋಟಿ ವೆಚ್ಚದಲ್ಲಿ ಮಾಡಲಾಗುತ್ತದೆ ಎನ್ನುವ ಮಾಹಿತಿಯೊಂದು ಇತ್ತೀಚೆಗಷ್ಟೇ ತಿಳಿದುಬಂದಿತ್ತು.
ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 343.74 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದರು.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿಲೋ ಮೀಟರ್ ಉದ್ದದ ಪೇವ್ದ್ ಶೋಲ್ಡರ್ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈ ಬಗ್ಗೆ ಪತ್ರದ ಮೂಲಕ ತಿಳಿಸಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
2023-24ನೇ ಸಾಲಿನ ವಾರ್ಷಿಕ ಯೋಜನೆ ಅಡಿಯಲ್ಲಿ ಸುಮಾರು 343.74 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಈ ರಸ್ತೆಯು ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸಲಿದ್ದು, ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಅಗತ್ಯವಾದ ಬೆಂಬಲವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಗೆ ಮಹತ್ವದ ಹೆದ್ದಾರಿ ಯೋಜನೆಗಳನ್ನು ನೀಡಿರುವ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಹಾಗೂ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications