ಬೆಳಗಾವಿ-ಗೋಕಾಕ್ ಫಾಲ್ಸ್ಗೆ ವಿಶೇಷ ಬಸ್; ಸಮಯ, ದರ
ಬೆಳಗಾವಿ, ಜುಲೈ 20; ಜುಲೈನಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ವಿವಿಧ ಪ್ರವಾಸಿ ತಾಣಗಳಿಗೆ ಜೀವಕಳೆ ಬಂದಿದೆ. ಬೆಳಗಾವಿಯ ಗೋಕಾಕ್ ಫಾಲ್ಸ್ ಧುಮ್ಮಿಕ್ಕುತ್ತಿದ್ದು, ಜಲಪಾತವನ್ನು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೋಕಾಕ್ ಫಾಲ್ಸ್ ನೋಡಲು ಹೋಗುವ ಪ್ರವಾಸಿಗರ ಅನುಕೂಲಕ್ಕಾಗಿ ಬೆಳಗಾವಿ ನಗರ ಮತ್ತು ಗೋಕಾಕ್ ಫಾಲ್ಸ್ ನಡುವೆ ವಿಶೇಷ ಬಸ್ ಓಡಿಸುತ್ತಿದೆ. ಜುಲೈ 22ರಿಂದ ಪ್ರತಿ 2ನೇ ಮತ್ತು 4 ಶನಿವಾರ ಹಾಗೂ ಪ್ರತಿ ಭಾನುವಾರ ಈ ವಿಶೇಷ ಬಸ್ ಸಂಚಾರ ನಡೆಸಲಿದೆ.

ಬಸ್ ವೇಳಾಪಟ್ಟಿ, ದರ; ಬೆಳಗಾವಿ ನಗರ ಮತ್ತು ಗೋಕಾಕ್ ಫಾಲ್ಸ್ ನಡುವಿನ ಪ್ರಯಾಣ ದರ 190 ರೂ. ಎಂದು NWKRTC ಹೇಳಿದೆ. ಈ ಬಸ್ ವಿಶೇಷ ಸಾರಿಗೆ ಆಗಿರುವುದರಿಂದ ಈ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ 'ಶಕ್ತಿ' ಯೋಜನೆ ಅಡಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಬಸ್ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ 9 ಗಂಟೆಗೆ ಹೊರಡಲಿದೆ. ಹಿಡಕಲ್ ಡ್ಯಾಂ ಅನ್ನು 10 ಗಂಟೆಗೆ ತಲುಪಲಿದೆ. ಹಿಡಕಲ್ ಡ್ಯಾಂ ಸೈಟ್ನಿಂದ 11 ಗಂಟೆಗೆ ಹೊರಟು, ಗೋಡಚಿನ ಮುಲ್ಕಿಗೆ 11.30ಕ್ಕೆ ತಲುಪಲಿದೆ. ಗೋಡಚಿನ ಮಲ್ಕಿಯಿಂದ 13 ಗಂಟೆಗೆ ಹೊರಟು ಗೋಕಾಕ್ ಫಾಲ್ಸ್ಗೆ 13.30ಕ್ಕೆ ತಲುಪಲಿದೆ. ಗೋಕಾಕ್ ಫಾಲ್ಸ್ನಿಂದ 16 ಗಂಟೆಗೆ ಹೊರಟು ಬೆಳಗಾವಿಗೆ 18 ಗಂಟೆಗೆ ತಲುಪಲಿದೆ ಎಂದು ವೇಳಾಪಟ್ಟಿ ಹೇಳಿದೆ.
ಗೋಕಾಕ್ ಫಾಲ್ಸ್ಗೆ ಭೇಟಿ ನೀಡುವ ಪ್ರವಾಸಿಗರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಮನವಿ ಮಾಡಲಾಗಿದೆ. ಆಸಕ್ತರು ಆನ್ಲೈನ್ ಟಿಕೆಟ್ ಬುಕಿಂಗ್ಗಾಗಿ www.ksrtc.in ವೆಬ್ಸೈಟ್ಗೆ ಭೇಟಿ ನೀಡಬಹುದು. ಹೆಚ್ಚಿನ ವಿವರಗಳಿಗಾಗಿ 7760991612, 7760991613 ಮತ್ತು 7760991625 ಸಂಖ್ಯೆಗೆ ಕರೆ ಮಾಡಬಹುದು.
ಗೋಕಾಕ್ ಜಲಪಾತದ ಕುರಿತು; ಬೆಳಗಾವಿ ಜಿಲ್ಲೆಯಲ್ಲಿರುವ ಗೋಕಾಕ್ ಜಲಪಾತ ಉತ್ತರ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣ. ಗೋಕಾಕ್ ಜಲಪಾತವು ಹೆದ್ದಾರಿಗೆ ಹತ್ತಿರದಲ್ಲಿದೆ. ಘಟಪ್ರಭಾ ನದಿ ಕುದುರೆಯ ಲಾಳದ ಆಕಾರದ ಬಂಡೆಯ ಮೇಲ್ಭಾಗದಿಂದ ಸುಮಾರು 52 ಮೀಟರ್ ಎತ್ತರದಿಂದ ಧುಮುಕಿದಾಗ ಗೋಕಾಕ್ ಜಲಪಾತವು ರೂಪುಗೊಳ್ಳುತ್ತದೆ.
ಇತರ ಜಲಪಾತಗಳಿಗೆ ಹೋಲಿಸಿದರೆ ಗೋಕಾಕ್ ಜಲಪಾತ ಸಾಕಷ್ಟು ಅಗಲವಿದ್ದು (ಒಟ್ಟು 177 ಮೀಟರ್) ದೂರದಿಂದ ನೋಡಿದರೂ ತುಂಬಾ ರಮಣೀಯವಾಗಿ ಕಾಣಿಸುತ್ತದೆ ಮತ್ತು ಜಲಪಾತದ ಭೋರ್ಗೆರೆತ ದೂರದಿಂದಲೇ ಕೇಳಿಸುತ್ತದೆ.
ಜಲಪಾತ ಬೆಂಗಳೂರಿನಿಂದ 622 ಕಿ. ಮೀ. ಮತ್ತು ಬೆಳಗಾವಿಯಿಂದ 62 ಕಿ. ಮೀ. ದೂರದಲ್ಲಿದೆ. ಇಲ್ಲಿಗೆ ತಲುಪಲು ಬೆಳಗಾವಿ ಹತ್ತಿರದ ವಿಮಾನ ನಿಲ್ದಾಣ ಮತ್ತು ಪ್ರಮುಖ ರೈಲು ನಿಲ್ದಾಣವಾಗಿದೆ. ಬೆಳಗಾವಿ ನಗರದಿಂದ ಟ್ಯಾಕ್ಸಿ ಪಡೆದು ಗೋಕಾಕ್ ಜಲಪಾತ ತಲುಪಬಹುದಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications