ಚಿಕ್ಕಮಗಳೂರು: ಕಲ್ಲತ್ತಿಗರಿ ಜಲಪಾತಕ್ಕೆ ಬಂತು ಜೀವಕಳೆ
ಚಿಕ್ಕಮಗಳೂರು, ಮೇ 25: ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಅರ್ಭಟಿಸಿದೆ. ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಕಲ್ಲತ್ತಿಗರಿ ಜಲಪಾತಕ್ಕೆ ಜೀವಕಳೆ ಬಂದಿದ್ದು, ಪ್ರವಾಸಿಗರನ್ನಯ ಕೈ ಬೀಸಿ ಕರೆಯುತ್ತಿದೆ.
ಬೇಸಿಗೆಯ ಕಾರಣಕ್ಕೆ ಕಲ್ಲತ್ತಿಗರಿ ಜಲಪಾತದಲ್ಲಿ ನೀರಿನ ಹರಿವು ಕಡಿಮೆ ಇತ್ತು. ಆದರೆ ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲ್ಲಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಆರ್ಭಟಕ್ಕೆ ಕಲ್ಲತ್ತಿಗರಿ ಜಲಪಾತ ಧುಮ್ಮಿಕ್ಕುತ್ತಿದೆ. ಜಲಪಾತ ನೋಡಲು ಪ್ರವಾಸಿಗರ ದಂಡು ಆಗಮಿಸುತ್ತಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಕಲ್ಲತ್ತಿಗರಿ ಜಲಪಾತ ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದು. ಈಗ ಜಲಪಾತ ಜೀವಕಳೆ ಪಡೆದಿದ್ದು, ಇದರ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಶುಕ್ರವಾರ ಸಂಜೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ತರೀಕೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಅಪಾರ ನೀರು ಹರಿದುಬಂದು, ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದೆ.
ಹಳ್ಳದಲ್ಲಿ ಮುಳುಗಿದ ಹಿಟಾಚಿ: ತರೀಕೆರೆಯಲ್ಲಿ ಸುರಿಯುತ್ತಿರುವ ಮಳೆಗೆ ಇದ್ದಕ್ಕಿದ್ದಂತೆ ಹಳ್ಳದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದಾಗಿ ಅಲ್ಲಿ ಕೆಲಸ ಮಾಡುತ್ತಿದ್ದ ಹಿಟಾಕಿ ಸಂಪೂರ್ಣ ಮುಳುಗಿ ಹೋಗಿದೆ.
ತಾಲೂಕಿನ ತ್ಯಾಗದಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಸೇತುವೆ ಇಕ್ಕೆಲಗಳನ್ನು ಹಿಟಾಕಿ ಮೂಲಕ ಸ್ವಚ್ಛಗೊಳಿಸಲಾಗುತ್ತಿತ್ತು. ಕೆಮ್ಮಣ್ಣುಗುಂಡಿ-ಕಲ್ಲತ್ತಿಗರಿ ಭಾಗದಲ್ಲಿ ಭಾರೀ ಮಳೆಯಾದ ಕಾರಣ ಇದ್ದಕ್ಕಿದ್ದಂತೆ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿ ಹಿಟಾಚಿ ಮುಳುಗಿದೆ.
ಕಾರ್ಮಿಕರು ಅಲ್ಲೇ ಇದ್ದರೂ ಸಹ ಹಿಟಾಚಿ ಮೇಲೆ ತರಲು ಸಾಧ್ಯವಾಗಲಿಲ್ಲ. ನೀರಿನ ಹರಿವು ಹೆಚ್ಚಾಗುತ್ತಿದ್ದಂತೆಯೇ ಕಾರ್ಮಿಕರು ಹಿಟಾಚಿಯನ್ನು ಹಳ್ಳದಲ್ಲಿಯೇ ಬಿಟ್ಡು ಮೇಲೆ ಬಂದು ಜೀವ ಉಳಿಸಿಕೊಂಡರು.
ಈಗ ಹುಟಾಚಿ ಮೇಲೆ ತರುವುದು ಅಸಾಧ್ಯದ ಮಾತು. ಮತ್ತೆ ಮಳೆ ಹೆಚ್ಚಾದರೆ ಹಿಟಾಚಿ ಮೇಲೆ ತರಲು ಸಾಧ್ಯವೇ ಇಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಮಳೆ ಕಡಿಮೆ ಆಗುವವರೆಗೂ ಹಳ್ಳದಲ್ಲಿ ಮುಳುಗಿರುವ ಹಿಟಾಚಿಯನ್ನು ಕಾರ್ಮಿಕರು ಕಾಯಬೇಕಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಅವಾಂತರ ಉಂಟು ಮಾಡಿದೆ. ಬಿರುಗಾಳಿ, ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಮನೆಯಲ್ಲಿದ್ದ 5 ಜನರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೃಹತ್ ಗಾತ್ರದ ಕೊಂಬೆ ಅಡಿ ಸಿಲುಕಿ ಮನೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಮನೆಯಲ್ಲಿ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಮುಂಜಾನೆ 4 ಗಂಟೆಗೆ ನಡೆದಿರುವ ಅವಘಡವಿದು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications