23,000 ಕೋಟಿ ವೆಚ್ಚದಲ್ಲಿ 'ಬೆಂಗಳೂರು ವರ್ತುಲ ರೈಲ್ವೆ ಜಾಲ' ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧ
ಬೆಂಗಳೂರು ಜೂನ್ 30: 'ಬೆಂಗಳೂರು ವರ್ತುಲ ರೈಲ್ವೆ ಜಾಲ' ನಿರ್ಮಾಣಕ್ಕೆ ರೈಲ್ವೇ ಇಲಾಖೆ 23,000 ಕೋಟಿ ರೂ. ವೆಚ್ಚ ಮಾಡಲಿದ್ದು ಇದಕ್ಕಾಗಿ ನೀಲನಕ್ಷೆ ರೂಪಿಸಿದೆ.
ಈ ಬಗ್ಗೆ ಕಳೆದ ದಿನ ಮಾತನಾಡಿದ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ, 'ಬೆಂಗಳೂರು ಭಾರತದಲ್ಲಿ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಮಹಾನಗರಗಳಲ್ಲಿ ಒಂದಾಗಿದ್ದು, ಸಾರ್ವಜನಿಕ ಸಾರಿಗೆ ಅಗತ್ಯತೆಗಳು ಹೆಚ್ಚಾಗಿದೆ. ಆ ಕಾರಣಕ್ಕೆ 23 ಸಾವಿರ ಕೋಟಿ ರೂ. ವೆಚ್ಚದ ವರ್ತುಲ ರೈಲ್ವೆ ಯೋಜನೆಗೆ ಡಿಪಿಆರ್ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ವರ್ತುಲ ರೈಲು ಯೋಜನೆಯು ಉಪನಗರ ರೈಲು ಯೋಜನೆಗೆ ಪೂರಕವಾಗಿರಲಿದೆ' ಎಂದು ಹೇಳಿದರು.

ನಿಡುವಂದ-ವಡ್ಡರಹಳ್ಳಿ-ದೇವನಹಳ್ಳಿ-ಮಾಲೂರು-ಹೀಲಲಿಗೆ-ಹೆಜ್ಜಾಲ-ಸೋಲೂರು ನಿಲ್ದಾಣಗಳ ಮೂಲಕ ನಗರದ ಪ್ರಮುಖ ರೈಲ್ವೆ ಕೊಂಡಿಗಳಿಗೆ ಉದ್ದೇಶಿತ ವರ್ತುಲ ರೈಲು ಸಂಪರ್ಕ ಕಲ್ಪಿಸುತ್ತದೆ. ಬೆಂಗಳೂರಿನ ಜನಸಂಖ್ಯೆ 1.30 ಕೋಟಿ ತಲುಪಿದ್ದು, ಈ ಸಂಖ್ಯೆ ಹೆಚ್ಚುತ್ತಲೇ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗುತ್ತಿದೆ. ಡಿಪಿಆರ್ ಸಿದ್ಧವಾದ ಕೂಡಲೇ ರಾಜ್ಯ ಸರಕಾರದಿಂದ ಅಗತ್ಯ ಭೂಮಿಯ ಸ್ವಾಧೀನಕ್ಕೆ ಕ್ರಮ ಕೈಗೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಭಾರತದ ಅತಿ ದೊಡ್ಡ ವೃತ್ತಾಕಾರದ ಜಾಲಗಳಲ್ಲಿ ಒಂದೆಂದು ಹೆಸರಿಸಲಾಗಿರುವ ಈ ಜಾಲವನ್ನು ಕರ್ನಾಟಕದ ರಾಜಧಾನಿಯ ಹೊರವಲಯದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆ ಬೆಂಗಳೂರಿನ ಸುತ್ತಮುತ್ತಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಅಸ್ತಿತ್ವದಲ್ಲಿರುವ ಬೆಂಗಳೂರು ಉಪನಗರ ರೈಲು ಯೋಜನೆ (BSRP) ಮತ್ತು ನಮ್ಮ ಮೆಟ್ರೋಗೆ ಪೂರಕವಾಗಿದೆ.
ಇದು ನಗರದ ನಿಡವಂಡ, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಾಲೂರು, ಹೀಲಲಿಗೆ, ಸೋಲೂರು ಮತ್ತು ನಿಡವಂಡವನ್ನು ಸಂಪರ್ಕಿಸುತ್ತದೆ. ಬೆಂಗಳೂರಿನ ರೈಲು ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನೈಋತ್ಯ ರೈಲ್ವೆ (SWR) ಅಧಿಕಾರಿಗಳ ಪ್ರಕಾರ, ಅಂತಿಮ ಸ್ಥಳ ಸಮೀಕ್ಷೆಯು ಬಹುತೇಕ ಮುಗಿದಿದೆ, ನಂತರ SWR ಅನುಮೋದನೆಗಾಗಿ ರೈಲ್ವೆ ಮಂಡಳಿಗೆ DPR ಅನ್ನು ಸಲ್ಲಿಸುತ್ತದೆ.

ಸೋಮಣ್ಣ ಅವರು ಬೆಂಗಳೂರು ವಿಭಾಗದ ಅಡಿಯಲ್ಲಿ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಲು ಸಂಸದರು, ಶಾಸಕರೊಂದಿಗೆ ಶನಿವಾರ ಸಭೆ ನಡೆಸಿದರು. ಈ ವೇಳೆ ಕರ್ನಾಟಕದಲ್ಲಿ ರೋಡ್ ಓವರ್ ಬ್ರಿಡ್ಜ್ (ಆರ್ ಒಬಿ) ಮತ್ತು ರೋಡ್ ಅಂಡರ್ ಬ್ರಿಡ್ಜ್ (ಆರ್ ಯುಬಿ) ನಿರ್ಮಾಣವನ್ನು ವೇಗಗೊಳಿಸಲು ರೈಲ್ವೆ ಸಚಿವಾಲಯ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತದೆ. ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ ಎಂದು ಅವರು ಹೇಳಿದರು.
ರೈಲ್ವೆ ಸಚಿವಾಲಯ ಕರ್ನಾಟಕದಲ್ಲಿ 93 ROB/RUB ಕಾಮಗಾರಿಗಳನ್ನು ಅನುಮೋದಿಸಿದೆ, ಇವುಗಳ ಅಂದಾಜು ವೆಚ್ಚ 1,699 ಕೋಟಿ ರೂ. ಈ ಪೈಕಿ 49 ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೆಚ್ಚ ಹಂಚಿಕೆ ಆಧಾರದ ಮೇಲೆ ಅನುಮೋದನೆ ನೀಡಲಾಗಿದೆ. ಆದರೆ, ಈ ಪೈಕಿ 32 ಕಾಮಗಾರಿಗಳಿಗೆ ವೆಚ್ಚ ಹಂಚಿಕೆ ಸಮ್ಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ರೈಲ್ವೆ ಸಚಿವಾಲಯ ಈಗ ಈ ಪ್ರಮುಖ 14 ROB ಕಾಮಗಾರಿಗಳನ್ನು 208 ಕೋಟಿ ರೂಪಾಯಿಗಳ ಮೊತ್ತದಲ್ಲಿ ಕೈಗೆತ್ತಿಕೊಳ್ಳಲಿದೆ. ಕೇಂದ್ರ ಸರ್ಕಾರದ ಅನುದಾನವನ್ನು ಬಳಸಿಕೊಂಡು 590 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಉಳಿದ 18 ಕಾಮಗಾರಿಗಳನ್ನು ಪೂರ್ಣಗೊಳಿಸಲಿದೆ.
ನಗರದ ರೈಲ್ವೆ ಸಂಪರ್ಕ ಸಾಮರ್ಥ್ಯ ವೃದ್ಧಿಸಲು ಸುಮಾರು 43 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. 2022ರಲ್ಲಿ ಮಂಜೂರಾಗಿರುವ ಸುಮಾರು 6,084 ಕೋಟಿ ರೂ. ವೆಚ್ಚದ ಬೆಟ್ಟ ಹಲಸೂರು-ರಾಜಾನುಕುಂಟೆ (15 ಕಿ.ಮೀ), ವೈಟ್ಫೀಲ್ಡ್-ಬಂಗಾರಪೇಟೆ (47 ಕಿ.ಮೀ), ಬೈಯಪ್ಪನಹಳ್ಳಿ-ಹೊಸೂರು (48.5 ಕಿ.ಮೀ) ಮತ್ತು ಯಲಹಂಕ-ದೇವನಹಳ್ಳಿ (23.7 ಕಿ.ಮೀ) ರೈಲ್ವೆ ಮಾರ್ಗದ ಸರ್ವೇ ಕಾರ್ಯಗಳು ಪ್ರಗತಿಯಲ್ಲಿದ್ದು, ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಜತೆಗೆ 12,930 ಕೋಟಿ ವೆಚ್ಚದಲ್ಲಿ ಬೆಂಗಳೂರು-ತುಮಕೂರು (70 ಕಿ.ಮೀ), ಚಿಕ್ಕ ಬಾಣಾವಾರ-ಹಾಸನ (166 ಕಿ.ಮೀ), ಬೆಂಗಳೂರು-ಮೈಸೂರು (137 ಕಿ.ಮೀ) ಮತ್ತು ದೇವನಹಳ್ಳಿ-ಬಂಗಾರಪೇಟೆ (125 ಕಿ.ಮೀ) ಯೋಜನೆಗಳ ವಿಸ್ತೃತ ವರದಿ ಸಿದ್ಧಪಡಿಸುವ ಕಾರ್ಯವೂ ಪ್ರಗತಿಯಲ್ಲಿದೆ ಎಂದು ವಿವರಿಸಿದರು.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications