23,000 ಕೋಟಿ ವೆಚ್ಚದಲ್ಲಿ 'ಬೆಂಗಳೂರು ವರ್ತುಲ ರೈಲ್ವೆ ಜಾಲ' ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧ
ಬೆಂಗಳೂರು ಜೂನ್ 30: 'ಬೆಂಗಳೂರು ವರ್ತುಲ ರೈಲ್ವೆ ಜಾಲ' ನಿರ್ಮಾಣಕ್ಕೆ ರೈಲ್ವೇ ಇಲಾಖೆ 23,000 ಕೋಟಿ ರೂ. ವೆಚ್ಚ ಮಾಡಲಿದ್ದು ಇದಕ್ಕಾಗಿ ನೀಲನಕ್ಷೆ ರೂಪಿಸಿದೆ.
ಈ ಬಗ್ಗೆ ಕಳೆದ ದಿನ ಮಾತನಾಡಿದ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ, 'ಬೆಂಗಳೂರು ಭಾರತದಲ್ಲಿ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಮಹಾನಗರಗಳಲ್ಲಿ ಒಂದಾಗಿದ್ದು, ಸಾರ್ವಜನಿಕ ಸಾರಿಗೆ ಅಗತ್ಯತೆಗಳು ಹೆಚ್ಚಾಗಿದೆ. ಆ ಕಾರಣಕ್ಕೆ 23 ಸಾವಿರ ಕೋಟಿ ರೂ. ವೆಚ್ಚದ ವರ್ತುಲ ರೈಲ್ವೆ ಯೋಜನೆಗೆ ಡಿಪಿಆರ್ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ವರ್ತುಲ ರೈಲು ಯೋಜನೆಯು ಉಪನಗರ ರೈಲು ಯೋಜನೆಗೆ ಪೂರಕವಾಗಿರಲಿದೆ' ಎಂದು ಹೇಳಿದರು.

ನಿಡುವಂದ-ವಡ್ಡರಹಳ್ಳಿ-ದೇವನಹಳ್ಳಿ-ಮಾಲೂರು-ಹೀಲಲಿಗೆ-ಹೆಜ್ಜಾಲ-ಸೋಲೂರು ನಿಲ್ದಾಣಗಳ ಮೂಲಕ ನಗರದ ಪ್ರಮುಖ ರೈಲ್ವೆ ಕೊಂಡಿಗಳಿಗೆ ಉದ್ದೇಶಿತ ವರ್ತುಲ ರೈಲು ಸಂಪರ್ಕ ಕಲ್ಪಿಸುತ್ತದೆ. ಬೆಂಗಳೂರಿನ ಜನಸಂಖ್ಯೆ 1.30 ಕೋಟಿ ತಲುಪಿದ್ದು, ಈ ಸಂಖ್ಯೆ ಹೆಚ್ಚುತ್ತಲೇ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗುತ್ತಿದೆ. ಡಿಪಿಆರ್ ಸಿದ್ಧವಾದ ಕೂಡಲೇ ರಾಜ್ಯ ಸರಕಾರದಿಂದ ಅಗತ್ಯ ಭೂಮಿಯ ಸ್ವಾಧೀನಕ್ಕೆ ಕ್ರಮ ಕೈಗೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಭಾರತದ ಅತಿ ದೊಡ್ಡ ವೃತ್ತಾಕಾರದ ಜಾಲಗಳಲ್ಲಿ ಒಂದೆಂದು ಹೆಸರಿಸಲಾಗಿರುವ ಈ ಜಾಲವನ್ನು ಕರ್ನಾಟಕದ ರಾಜಧಾನಿಯ ಹೊರವಲಯದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆ ಬೆಂಗಳೂರಿನ ಸುತ್ತಮುತ್ತಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಅಸ್ತಿತ್ವದಲ್ಲಿರುವ ಬೆಂಗಳೂರು ಉಪನಗರ ರೈಲು ಯೋಜನೆ (BSRP) ಮತ್ತು ನಮ್ಮ ಮೆಟ್ರೋಗೆ ಪೂರಕವಾಗಿದೆ.
ಇದು ನಗರದ ನಿಡವಂಡ, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಾಲೂರು, ಹೀಲಲಿಗೆ, ಸೋಲೂರು ಮತ್ತು ನಿಡವಂಡವನ್ನು ಸಂಪರ್ಕಿಸುತ್ತದೆ. ಬೆಂಗಳೂರಿನ ರೈಲು ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನೈಋತ್ಯ ರೈಲ್ವೆ (SWR) ಅಧಿಕಾರಿಗಳ ಪ್ರಕಾರ, ಅಂತಿಮ ಸ್ಥಳ ಸಮೀಕ್ಷೆಯು ಬಹುತೇಕ ಮುಗಿದಿದೆ, ನಂತರ SWR ಅನುಮೋದನೆಗಾಗಿ ರೈಲ್ವೆ ಮಂಡಳಿಗೆ DPR ಅನ್ನು ಸಲ್ಲಿಸುತ್ತದೆ.

ಸೋಮಣ್ಣ ಅವರು ಬೆಂಗಳೂರು ವಿಭಾಗದ ಅಡಿಯಲ್ಲಿ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಲು ಸಂಸದರು, ಶಾಸಕರೊಂದಿಗೆ ಶನಿವಾರ ಸಭೆ ನಡೆಸಿದರು. ಈ ವೇಳೆ ಕರ್ನಾಟಕದಲ್ಲಿ ರೋಡ್ ಓವರ್ ಬ್ರಿಡ್ಜ್ (ಆರ್ ಒಬಿ) ಮತ್ತು ರೋಡ್ ಅಂಡರ್ ಬ್ರಿಡ್ಜ್ (ಆರ್ ಯುಬಿ) ನಿರ್ಮಾಣವನ್ನು ವೇಗಗೊಳಿಸಲು ರೈಲ್ವೆ ಸಚಿವಾಲಯ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತದೆ. ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ ಎಂದು ಅವರು ಹೇಳಿದರು.
ರೈಲ್ವೆ ಸಚಿವಾಲಯ ಕರ್ನಾಟಕದಲ್ಲಿ 93 ROB/RUB ಕಾಮಗಾರಿಗಳನ್ನು ಅನುಮೋದಿಸಿದೆ, ಇವುಗಳ ಅಂದಾಜು ವೆಚ್ಚ 1,699 ಕೋಟಿ ರೂ. ಈ ಪೈಕಿ 49 ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೆಚ್ಚ ಹಂಚಿಕೆ ಆಧಾರದ ಮೇಲೆ ಅನುಮೋದನೆ ನೀಡಲಾಗಿದೆ. ಆದರೆ, ಈ ಪೈಕಿ 32 ಕಾಮಗಾರಿಗಳಿಗೆ ವೆಚ್ಚ ಹಂಚಿಕೆ ಸಮ್ಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ರೈಲ್ವೆ ಸಚಿವಾಲಯ ಈಗ ಈ ಪ್ರಮುಖ 14 ROB ಕಾಮಗಾರಿಗಳನ್ನು 208 ಕೋಟಿ ರೂಪಾಯಿಗಳ ಮೊತ್ತದಲ್ಲಿ ಕೈಗೆತ್ತಿಕೊಳ್ಳಲಿದೆ. ಕೇಂದ್ರ ಸರ್ಕಾರದ ಅನುದಾನವನ್ನು ಬಳಸಿಕೊಂಡು 590 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಉಳಿದ 18 ಕಾಮಗಾರಿಗಳನ್ನು ಪೂರ್ಣಗೊಳಿಸಲಿದೆ.
ನಗರದ ರೈಲ್ವೆ ಸಂಪರ್ಕ ಸಾಮರ್ಥ್ಯ ವೃದ್ಧಿಸಲು ಸುಮಾರು 43 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. 2022ರಲ್ಲಿ ಮಂಜೂರಾಗಿರುವ ಸುಮಾರು 6,084 ಕೋಟಿ ರೂ. ವೆಚ್ಚದ ಬೆಟ್ಟ ಹಲಸೂರು-ರಾಜಾನುಕುಂಟೆ (15 ಕಿ.ಮೀ), ವೈಟ್ಫೀಲ್ಡ್-ಬಂಗಾರಪೇಟೆ (47 ಕಿ.ಮೀ), ಬೈಯಪ್ಪನಹಳ್ಳಿ-ಹೊಸೂರು (48.5 ಕಿ.ಮೀ) ಮತ್ತು ಯಲಹಂಕ-ದೇವನಹಳ್ಳಿ (23.7 ಕಿ.ಮೀ) ರೈಲ್ವೆ ಮಾರ್ಗದ ಸರ್ವೇ ಕಾರ್ಯಗಳು ಪ್ರಗತಿಯಲ್ಲಿದ್ದು, ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಜತೆಗೆ 12,930 ಕೋಟಿ ವೆಚ್ಚದಲ್ಲಿ ಬೆಂಗಳೂರು-ತುಮಕೂರು (70 ಕಿ.ಮೀ), ಚಿಕ್ಕ ಬಾಣಾವಾರ-ಹಾಸನ (166 ಕಿ.ಮೀ), ಬೆಂಗಳೂರು-ಮೈಸೂರು (137 ಕಿ.ಮೀ) ಮತ್ತು ದೇವನಹಳ್ಳಿ-ಬಂಗಾರಪೇಟೆ (125 ಕಿ.ಮೀ) ಯೋಜನೆಗಳ ವಿಸ್ತೃತ ವರದಿ ಸಿದ್ಧಪಡಿಸುವ ಕಾರ್ಯವೂ ಪ್ರಗತಿಯಲ್ಲಿದೆ ಎಂದು ವಿವರಿಸಿದರು.
-
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications