ರಣ ಬಿಸಿಲಿಗೆ ಹಂಪಿ ಭಣಭಣ... ಶಾಖದ ಹೊಡೆತಕ್ಕೆ ಪ್ರವಾಸಿಗರು ಬರಲು ಹಿಂದೇಟು
ಬಿಸಿಲು ರಾಜ್ಯದ ಜನರನ್ನು ಹೈರಾಣ ಮಾಡಿದೆ. ಇನ್ನು ಹೈದರಾಬಾದ್ ಕರ್ನಾಟಕದ ಭಾಗದಲ್ಲಂತೂ ಬಿಸಿಲು ತಾಂಡವವಾಡುತ್ತಿದೆ. ಇದೇ ಭಾಗಕ್ಕೆ ಸೇರುವ ಸೇರಿಕೊಳ್ಳುವ ವಿಜಯನಗರ್ ಜಿಲ್ಲೆಗೂ ಬಿಸಿಯ ಧಗೆ ಬಿದ್ದಿದೆ.
ಏಪ್ರಿಲ್, ಮೇ ಸಾಮಾನ್ಯವಾಗಿ ಇದು ರಜಾ ದಿನ. ಪಕ್ಕದ ಪ್ರವಾಸಿ ತಾಣಗಳನ್ನು ಜನ ಹೋಗುತ್ತಾರೆ. ಆದರೆ ಬಿಸಿಲು ಮನೆಯಿಂದ ಹೊರಗಡೆ ಬಿಡದಂತೆ ಮಾಡುತ್ತಿದೆ. ಇದರಿಂದ ಪ್ರವಾಸೋದ್ಯಮದ ಮೇಲೂ ಪೆಟ್ಟು ಬಿದ್ದಿದೆ. ಜನರಿಂದ ತುಂಬಿರುತ್ತಿದ್ದ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಇಂದು ಪ್ರವಾಸಿಗರಿಲ್ಲದೆ ಭಣಗುಡುತ್ತಿದೆ.

UNESCO ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿರುವ ಹಂಪಿಯಲ್ಲಿ, ಕಳೆದ 10 ವರ್ಷಗಳಲ್ಲಿ ಕಡಿಮೆ ಪ್ರವಾಸಿಗರ ಸಂಖ್ಯೆಯನ್ನು ದಾಖಲಾಗಿದೆ. ಅಧಿಕಾರಿಗಳ ಪ್ರಕಾರ ಕಳೆದ 15 ದಿನಗಳಲ್ಲಿ ಹಂಪಿಗೆ ದಿನ ನಿತ್ಯ ಸುಮಾರು 400 ರಿಂದ 500 ಜನ ಮಾತ್ರ ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬೇಸಿಗೆಯ ಬೇಗೆ ನೀಗಿಸಲು ಜಿಲ್ಲಾಡಳಿತ ಕ್ರಮಗಳನ್ನು ಮಾಡಿಕೊಂಡಿದೆ. ಪ್ರವಾಸಿಗರು ಹಂಪಿಯತ್ತ ಮುಖಮಾಡದೇ ಇರುವುದರಿಂದ ವ್ಯಾಪಾರ ವಹಿವಾಟು ಸಹ ಕುಂಟಿತವಾಗಿದೆ. ಮಾರ್ಚ್ನಲ್ಲಿ ಹಂಪಿಗೆ ಬೇರೆ ರಾಜ್ಯಗಳು ಹಾಗೂ ರಾಜ್ಯದ ಬೇರೆ ಜಿಲ್ಲೆಗಳ ವಿದ್ಯರ್ಥಿಗಳು ಭೇಟಿ ನೀಡುತ್ತಿದ್ದರು. ಆದರೆ ಈ ವರ್ಷ ಈ ಸಂಖ್ಯೆ ಸಹ ಕುಂಠಿತವಾಗಿದೆ.

ಸುರಕ್ಷತಾ ಕ್ರಮಗಳನ್ನೂ ಕೈಗೊಂಡಿದೆ. ಪಾರಂಪರಿಕ ತಾಣದಲ್ಲಿ ವ್ಯಾಪಾರ ವಹಿವಾಟು ಕೂಡ ಕುಂಠಿತಗೊಂಡಿದೆ. ಮಾರ್ಚ್ನಲ್ಲಿ ಹಂಪಿಗೆ ಭೇಟಿ ನೀಡುವ ವಿವಿಧ ರಾಜ್ಯಗಳು ಮತ್ತು ಜಿಲ್ಲೆಯ ಅನೇಕ ಶಾಲಾ ವಿದ್ಯಾರ್ಥಿಗಳು ಬಿಸಿಲಿನ ತಾಪದಿಂದಾಗಿ ಬಾರದೆ ಹೋಗಿದ್ದಾರೆ.
ಸಾಮಾನ್ಯವಾಗಿ ಬೇಸಿಗೆಯಲ್ಲಿ ಸುಮಾರು 1500 ಜನರ ದಿನಂಪ್ರತಿ ಭೇಟಿ ನೀಡುತ್ತಿದ್ದರು. ಆದರೆ ಈ ಸಂಖ್ಯೆ ದಿಢೀರ ಕುಸಿತಗೊಂಡಿದೆ. ಹಂಪಿಯಲ್ಲಿನ ಗೈಡ್ ಹೇಳುವಂತೆ ಕಳೆದ ಎರಡು ವಾರಗಳಲ್ಲಿ ಹಂಪಿಗೆ 600ಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿಲ್ಲ ಎಂದು ತಿಳಿಸಿದ್ದಾರೆ. ಹಂಪಿಯಲ್ಲಿ ಕಳೆದ 10 ವರ್ಷಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ಪ್ರವಾಸಿಗರ ಭೇಟಿ ಇದಾಗಿದೆ.
ಪ್ರವಾಸಿ ಸಂಘದ ರಾಜ್ಯಾಧ್ಯಕ್ಷ ವಿರೂಪಾಕ್ಷಿ ವಿ ಹಂಪಿ ಅವರು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ನೀಡಿದ ಮಾಹಿತಿಯಂತೆ, ಪ್ರವಾಸಿಗರ ಸಂಖ್ಯೆ ಕಡಿಮೆ ಆಗಿದ್ದು ಇಲ್ಲಿನ ಜನರಿಗೆ ಜೀವನ ನಡೆಸಲು ಕಷ್ಟವಾಗುತ್ತಿದೆ. ಇನ್ನು ಸಾಮಾಜಿಕ ತಾಣದಲ್ಲಿ ಬಿಸಿಗಾಳಿಯಿಂದಾಗಿ ಹಂಪಿಯನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳೆಲ್ಲಾ ಸುಳ್ಳು. ಹಂಪಿಯಲ್ಲಿ ಜಿಲ್ಲಾಡಳಿತ ಕುಡಿಯುವ ನೀರು, ಪ್ರವಾಸಿಗರಿಗೆ ತಂಗುದಾಣ, ವೈದ್ಯಕೀಯ ವ್ಯವಸ್ಥೆಯನ್ನ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ನಿಜ ಹಂಪಿಯ ಸುತ್ತ ಬೆಟ್ಟ ಗುಡ್ಡಗಳೇ ಇವೆ. ಹಂಪಿಯ ಸೌಂದರ್ಯವನ್ನು ಸವಿಯಲು ಬಿಸಿಲ ಶಾಖ ಬಿಡುವುದಿಲ್ಲ. ಹೀಗಾಗಿ ಹಂಪಿಯ ಸೊಬಗನ್ನು ಸಂಜೆ ಅಥವಾ ಬೆಳಗಿನ ಜಾವ ಸವಿಯಬಹುದಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ರಣ ಬಿಸಿಲಿಗೆ ಹಂಪಿ ಭಣ ಭಣ... ಶಾಖದ ಹೊಡೆತಕ್ಕೆ ಪ್ರವಾಸಿಗರು ಬರಲು ಹಿಂದೇಟು
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications