ಕಾಫಿನಾಡಿನ ಮೆರಗು ಹೆಚ್ಚಿಸಿದ ಈ ಅದ್ಭುತ ತಾಣದ ಅಳಿವು, ಉಳಿವು ಈಗ ಸರ್ಕಾರದ ಕೈಯಲ್ಲಿ
ಚಿಕ್ಕಮಗಳೂರು, ಅಕ್ಟೋಬರ್, 18: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳದ ಕನ್ನಡಿಗರೇ ಇಲ್ಲ ಅನ್ಸತ್ತೆ. ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಈ ಸೌಂದರ್ಯಕ್ಕೆ ಆಯಸ್ಸು ಹೆಚ್ಚಿಲ್ಲ ಎಂಬ ಅನುಮಾನ ಈಗ ಮೂಡಿದೆ. ಏಕಂದರೆ 2019ರಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಸರ್ಕಾರಕ್ಕೆ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಮುಳ್ಳಯ್ಯನಗಿರಿ ತಪ್ಪಲಿನ ಸುಮಾರು ಸುಮಾರು 14 ಸಾವಿರ ಎಕರೆಯನ್ನ ಮುಳ್ಳಯ್ಯನಗಿರಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಬಳಿಕ ಅದು 18,284 ಎಕರೆಯಾಗಿತ್ತು.
ತದನಂತರ ಸಾರ್ವಜನಿಕ ಉದ್ದೇಶಗಳಿಗೆ 1,448 ಎಕರೆಯನ್ನ ಕೈಬಿಟ್ಟು 16,836 ಎಕರೆ ಪ್ರದೇಶವನ್ನ ಸಂರಕ್ಷಿತ ಪ್ರದೇಶ ಮಾಡಲು ವರದಿ ಸಲ್ಲಿಸಿತ್ತು. ಆದರೆ, ಈಗ ಪುನಃ ಆ ವರದಿ ಪರಿಷ್ಕರಣೆಗೊಂಡು ಮೊದಲ ಹಂತವಾಗಿ ಕೇವಲ 4,636 ಎಕರೆ ಪ್ರದೇಶವನ್ನಷ್ಟೇ ಸಂರಕ್ಷಿತ ಪ್ರದೇಶವನ್ನಾಗಿಸಲು ಸರ್ಕಾರ ಮುಂದಾಗಿದೆ. ಇದು ಕೆಲ ಪರಿಸರಪ್ರಿಯರು ಹಾಗೂ ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮೊದಲ ಹಂತದ ಬಳಿಕ ಎರಡನೇ ಹಂತ ನಿಜಕ್ಕೂ ಆಗುತ್ತಾ ಅನ್ನೋದು ಪರಿಸರವಾದಿಗಳ ಆತಂಕ. 18,284 ಸಾವಿರ ಎರಕೆಯಿಂದ 16,836 ಎರಕೆಗೆ ಬಂದು ಬಳಿಕ 4 ಸಾವಿರ ಎಕರೆಗೆ ಬರಲು ಕಾರಣ ಒತ್ತುವರಿದಾರರೇ ಕಾರಣ ಎಂಬ ಮಾತು ಕೇಳಿ ಬಂದಿದೆ. ಈಗಾಗಲೇ ಮುಳ್ಳಯ್ಯನಗಿರಿಯಲ್ಲಿ ಬಹುತೇಕ ಭೂಮಿ ಒತ್ತುವರಿಯಾಗಿ, ಕಾಫಿತೋಟವಾಗಿದೆ. ಫಾರಂ 53, 54, 57ರ ಅಡಿ ಸಾವಿರಾರು ಜನ ಭೂಮಿಗಾಗಿ ಅರ್ಜಿ ಹಾಕಿದ್ದಾರೆ. ರಾಜಕಾರಣದ ಒತ್ತಡದಿಂದಲೇ ಸರ್ಕಾರ ಇಂದು 18 ಸಾವಿರದಿಂದ 4 ಸಾವಿರಕ್ಕೆ ಬಂದಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.
ಮುಳ್ಳಯ್ಯನಗಿರಿ ದಟ್ಟ ಅರಣ್ಯದಲ್ಲಿ ಸಾವಿರಾರು ಪ್ರಾಣಿಗಳಿವೆ. ಹಲವು ನದಿಗಳ ಉಗಮ ಸ್ಥಾನವಾಗಿದೆ. ಹತ್ತಾರು ಕೆರೆಗಳಿಗೆ ನೀರಿನ ಮೂಲವಾಗಿದೆ. ಮುಳ್ಳಯ್ಯನಗಿರಿಯಲ್ಲಿ ಈಗಾಗಲೇ ಅರಣ್ಯವೇ ಒತ್ತುವರಿಯಾಗಿದೆ. ಈಗಲೇ ಮುಳ್ಳಯ್ಯನಗಿರಿಯನ್ನ ಉಳಿಸದಿದ್ದರೆ ಮುಂದಿನ ದಿನಗಳಲ್ಲಿ ಒತ್ತುವರಿದಾರರಿಂದ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಉಳಿಗಾಲ ಇರುವುದಿಲ್ಲ ಎನ್ನುವ ಆತಂಕ ಸ್ಥಳಿಯರು ಹಾಗೂ ಪರಿಸರವಾದಿಗಳದ್ದಾಗಿದೆ.
ಹಾಗಾಗಿ, ಈಗಲೇ ಮುಳ್ಳಯ್ಯಗಿರಿಗೊಂದು ಭದ್ರತೆ ಮಾಡದಿದ್ದರೆ ಮುಂದಿನ ಎಂಟತ್ತು ವರ್ಷಗಳಲ್ಲಿ ಮುಳ್ಳಯ್ಯನಗಿರಿ ತಪ್ಪಲಿನ ಪ್ರದೇಶ ಒತ್ತುವರಿ ಹಾಗೂ ತೋಟಗಳಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಆತಂಕ ಪರಿಸರವಾದಿಗಳದ್ದಾಗಿದೆ.
ಒಟ್ಟಾರೆ, ಸರ್ಕಾರ ಮುಳ್ಳಯ್ಯನಗಿರಿ ತಪ್ಪಲಿನಲ್ಲಿನಲ್ಲಿ ಹಲವು ಗ್ರಾಮಗಳಿವೆ. ಆದರೆ ಅಲ್ಲಿನ ಜನರಿಗೆ ಯಾವುದೇ ತೊಂದರೆಯಾಗಂತೆ ಪರಿಸರ ಉಳಿಸಲು ಮುಂದಾಗಿದೆ. ಆದರೆ ಸರ್ಕಾರ ಮಾತ್ರ ಯಾವುದೋ ಮುಲಾಜು-ಒತ್ತಡಕ್ಕೆ ಸಿಲುಕಿ ಈ ರೀತಿ 18 ಸಾವಿರದಿಂದ 4 ಸಾವಿರಕ್ಕೆ ಬಂದಿದೆ ಎಂಬ ಅನುಮಾನ ಮೂಡಿದೆ.
ಇರೋ ಮುಳ್ಳಯ್ಯನಗಿರಿಯನ್ನು ಉಳಿಸಿಕೊಂಡರೇ ಮುಂದಿನ ಪೀಳಿಗೆಗೂ ಉಳಿಯಲಿದೆ. ಸರ್ಕಾರ ಮುಲಾಜಿಗೋ ಅಥವಾ ಒತ್ತಡಕ್ಕೋ ಒಳಗಾಗಿ ಮುಳ್ಳಯ್ಯನಗಿರಿಯನ್ನು ಕಳೆದುಕೊಂಡರೆ ಎಷ್ಟು ಸಾವಿರ ಕೋಟಿ ಹಾಕಿದರೂ ನೈಸರ್ಗಿಕ ಈ ತಾಣವನ್ನು ಮತ್ತೆ ಮರಳಿ ಪಡೆಯಲು ಸಾಧ್ಯವಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications