ಕಾಫಿನಾಡಿನ ಮೆರಗು ಹೆಚ್ಚಿಸಿದ ಈ ಅದ್ಭುತ ತಾಣದ ಅಳಿವು, ಉಳಿವು ಈಗ ಸರ್ಕಾರದ ಕೈಯಲ್ಲಿ
ಚಿಕ್ಕಮಗಳೂರು, ಅಕ್ಟೋಬರ್, 18: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳದ ಕನ್ನಡಿಗರೇ ಇಲ್ಲ ಅನ್ಸತ್ತೆ. ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಈ ಸೌಂದರ್ಯಕ್ಕೆ ಆಯಸ್ಸು ಹೆಚ್ಚಿಲ್ಲ ಎಂಬ ಅನುಮಾನ ಈಗ ಮೂಡಿದೆ. ಏಕಂದರೆ 2019ರಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಸರ್ಕಾರಕ್ಕೆ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಮುಳ್ಳಯ್ಯನಗಿರಿ ತಪ್ಪಲಿನ ಸುಮಾರು ಸುಮಾರು 14 ಸಾವಿರ ಎಕರೆಯನ್ನ ಮುಳ್ಳಯ್ಯನಗಿರಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಬಳಿಕ ಅದು 18,284 ಎಕರೆಯಾಗಿತ್ತು.
ತದನಂತರ ಸಾರ್ವಜನಿಕ ಉದ್ದೇಶಗಳಿಗೆ 1,448 ಎಕರೆಯನ್ನ ಕೈಬಿಟ್ಟು 16,836 ಎಕರೆ ಪ್ರದೇಶವನ್ನ ಸಂರಕ್ಷಿತ ಪ್ರದೇಶ ಮಾಡಲು ವರದಿ ಸಲ್ಲಿಸಿತ್ತು. ಆದರೆ, ಈಗ ಪುನಃ ಆ ವರದಿ ಪರಿಷ್ಕರಣೆಗೊಂಡು ಮೊದಲ ಹಂತವಾಗಿ ಕೇವಲ 4,636 ಎಕರೆ ಪ್ರದೇಶವನ್ನಷ್ಟೇ ಸಂರಕ್ಷಿತ ಪ್ರದೇಶವನ್ನಾಗಿಸಲು ಸರ್ಕಾರ ಮುಂದಾಗಿದೆ. ಇದು ಕೆಲ ಪರಿಸರಪ್ರಿಯರು ಹಾಗೂ ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮೊದಲ ಹಂತದ ಬಳಿಕ ಎರಡನೇ ಹಂತ ನಿಜಕ್ಕೂ ಆಗುತ್ತಾ ಅನ್ನೋದು ಪರಿಸರವಾದಿಗಳ ಆತಂಕ. 18,284 ಸಾವಿರ ಎರಕೆಯಿಂದ 16,836 ಎರಕೆಗೆ ಬಂದು ಬಳಿಕ 4 ಸಾವಿರ ಎಕರೆಗೆ ಬರಲು ಕಾರಣ ಒತ್ತುವರಿದಾರರೇ ಕಾರಣ ಎಂಬ ಮಾತು ಕೇಳಿ ಬಂದಿದೆ. ಈಗಾಗಲೇ ಮುಳ್ಳಯ್ಯನಗಿರಿಯಲ್ಲಿ ಬಹುತೇಕ ಭೂಮಿ ಒತ್ತುವರಿಯಾಗಿ, ಕಾಫಿತೋಟವಾಗಿದೆ. ಫಾರಂ 53, 54, 57ರ ಅಡಿ ಸಾವಿರಾರು ಜನ ಭೂಮಿಗಾಗಿ ಅರ್ಜಿ ಹಾಕಿದ್ದಾರೆ. ರಾಜಕಾರಣದ ಒತ್ತಡದಿಂದಲೇ ಸರ್ಕಾರ ಇಂದು 18 ಸಾವಿರದಿಂದ 4 ಸಾವಿರಕ್ಕೆ ಬಂದಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.
ಮುಳ್ಳಯ್ಯನಗಿರಿ ದಟ್ಟ ಅರಣ್ಯದಲ್ಲಿ ಸಾವಿರಾರು ಪ್ರಾಣಿಗಳಿವೆ. ಹಲವು ನದಿಗಳ ಉಗಮ ಸ್ಥಾನವಾಗಿದೆ. ಹತ್ತಾರು ಕೆರೆಗಳಿಗೆ ನೀರಿನ ಮೂಲವಾಗಿದೆ. ಮುಳ್ಳಯ್ಯನಗಿರಿಯಲ್ಲಿ ಈಗಾಗಲೇ ಅರಣ್ಯವೇ ಒತ್ತುವರಿಯಾಗಿದೆ. ಈಗಲೇ ಮುಳ್ಳಯ್ಯನಗಿರಿಯನ್ನ ಉಳಿಸದಿದ್ದರೆ ಮುಂದಿನ ದಿನಗಳಲ್ಲಿ ಒತ್ತುವರಿದಾರರಿಂದ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಉಳಿಗಾಲ ಇರುವುದಿಲ್ಲ ಎನ್ನುವ ಆತಂಕ ಸ್ಥಳಿಯರು ಹಾಗೂ ಪರಿಸರವಾದಿಗಳದ್ದಾಗಿದೆ.
ಹಾಗಾಗಿ, ಈಗಲೇ ಮುಳ್ಳಯ್ಯಗಿರಿಗೊಂದು ಭದ್ರತೆ ಮಾಡದಿದ್ದರೆ ಮುಂದಿನ ಎಂಟತ್ತು ವರ್ಷಗಳಲ್ಲಿ ಮುಳ್ಳಯ್ಯನಗಿರಿ ತಪ್ಪಲಿನ ಪ್ರದೇಶ ಒತ್ತುವರಿ ಹಾಗೂ ತೋಟಗಳಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಆತಂಕ ಪರಿಸರವಾದಿಗಳದ್ದಾಗಿದೆ.
ಒಟ್ಟಾರೆ, ಸರ್ಕಾರ ಮುಳ್ಳಯ್ಯನಗಿರಿ ತಪ್ಪಲಿನಲ್ಲಿನಲ್ಲಿ ಹಲವು ಗ್ರಾಮಗಳಿವೆ. ಆದರೆ ಅಲ್ಲಿನ ಜನರಿಗೆ ಯಾವುದೇ ತೊಂದರೆಯಾಗಂತೆ ಪರಿಸರ ಉಳಿಸಲು ಮುಂದಾಗಿದೆ. ಆದರೆ ಸರ್ಕಾರ ಮಾತ್ರ ಯಾವುದೋ ಮುಲಾಜು-ಒತ್ತಡಕ್ಕೆ ಸಿಲುಕಿ ಈ ರೀತಿ 18 ಸಾವಿರದಿಂದ 4 ಸಾವಿರಕ್ಕೆ ಬಂದಿದೆ ಎಂಬ ಅನುಮಾನ ಮೂಡಿದೆ.
ಇರೋ ಮುಳ್ಳಯ್ಯನಗಿರಿಯನ್ನು ಉಳಿಸಿಕೊಂಡರೇ ಮುಂದಿನ ಪೀಳಿಗೆಗೂ ಉಳಿಯಲಿದೆ. ಸರ್ಕಾರ ಮುಲಾಜಿಗೋ ಅಥವಾ ಒತ್ತಡಕ್ಕೋ ಒಳಗಾಗಿ ಮುಳ್ಳಯ್ಯನಗಿರಿಯನ್ನು ಕಳೆದುಕೊಂಡರೆ ಎಷ್ಟು ಸಾವಿರ ಕೋಟಿ ಹಾಕಿದರೂ ನೈಸರ್ಗಿಕ ಈ ತಾಣವನ್ನು ಮತ್ತೆ ಮರಳಿ ಪಡೆಯಲು ಸಾಧ್ಯವಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications