ಬೆಂಗಳೂರು ಇಂಟರ್ಸಿಟಿ ರೈಲು ಮಾರ್ಗ ಬದಲಾವಣೆ: ಕಾರಣ ಏನು?-ಮಾಹಿತಿ, ವಿವರ ಇಲ್ಲಿದೆ
South Western Railway zone: ಸಾಮಾನ್ಯವಾಗಳಿ ಹಳಿ ಅಳವಡಿಕೆ ಸೇರಿದಂತೆ ರೈಲ್ವೆಗೆ ಸಂಬಂಧಿಸಿದ ಇನ್ನಿತರೆ ಕಾಮಗಾರಿಗಳು ನಡೆಯುವ ಮಾರ್ಗಗಳಲ್ಲಿ ರೈಲು ಸಂಚಾರ ಕೆಲವು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ ಅಥವಾ ಮಾರ್ಗಗಳನ್ನು ಬದಲಾಯಿಸಲಾಗುತ್ತದೆ. ಹಾಗೆಯೇ ಇದೀಗ ರೈಲ್ವೆ ಕಾಮಗಾರಿ ಹಿನ್ನೆಲೆ ಎರ್ಕಾಕುಲಂ-ಬೆಂಗಳೂರು ನಡುವೆ ಸಂಚಾರ ನಡೆಸುವ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಮಾರ್ಗ ಬದಲಾವಣೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಪೂರ್ಣ ವಿವರ ಇಲ್ಲಿದೆ ತಿಳಿಯಿರಿ.
ಇನ್ನು ಈ ಕುರಿತುಮಾ ಹಿತಿ ನೀಡಿರುವ ನೈರುತ್ಯ ರೈಲ್ವೆ ವಲಯ, ಸೇಲಂ ವಿಭಾಗದಲ್ಲಿ ಸುರಕ್ಷತೆ ಸಂಬಂಧಿತ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆ ದಕ್ಷಿಣ ರೈಲ್ವೇ ಇಂಟರ್ಸಿಟಿ ಮಾರ್ಗ ಬದಲಾವಣೆ ಮಾಡಿ ಬದಲಿ ಮಾರ್ಗ ಹಾಗೂ ವೇಳಾಪಟ್ಟಿಯನ್ನು ನೀಡಿದೆ ಎಂದು ತಿಳಿಸಿದೆ.

ಎರ್ನಾಕುಲಂ-ಬೆಂಗಳೂರು ಇಂಟರ್ಸಿಟಿ: ರೈಲು ಸಂಖ್ಯೆ 12678 ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಇಂಟರ್ಸಿಟಿ ಎಕ್ಸ್ಪ್ರೆಸ್ ಜುಲೈ 4, 6, 7, 9, 10, 11, 13, 14, 15, 16, 17, 18, 20, 21, 22, 23, 24, 25, 27, 28 ಹಾಗೂ 30ರಂದು ಎರ್ನಾಕುಲಂನಿಂದ ಬಿಡಲಿದ್ದು, ಪೊದನೂರು ಜಂಕ್ಷನ್, ಇರುಗೂರ್ ಮತ್ತು ಸುರತ್ಕಲ್ ನಿಲ್ದಾಣಗಳ ಮೂಲಕ ಹೋಗುತ್ತದೆ. ಈ ಮಾರ್ಗದಲ್ಲಿ ಕೊಯಮತ್ತೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಪೋದನೂರು ಜಂಕ್ಷನ್ನಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ಇಂಟರ್ಸಿಟಿ ಎಕ್ಸ್ಪ್ರೆಸ್ ಜುಲೈ 7, 8, 10, 14, 15, 17, 21, 22, 24 ಹಾಗೂ 28ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡಲಿದ್ದು, ಇರುಗೂರ್, ಪೊದನೂರ್ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಕೊಯಮತ್ತೂರು ನಿಲ್ದಾಣಕ್ಕೆ ಹೋಗುವುದಿಲ್ಲ.
ರೈಲುಗಳ ಸಂಚಾರ ರದ್ದು: ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಇಳಿಕೆ ಹಿನ್ನೆಲೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ಓಡಲು ನಿಗದಿಪಡಿಸಲಾಗಿದ್ದ ವಿಶೇಷ ರೈಲುಗಳನ್ನು ರದ್ದುಪಡಿಸಲಾಗಿದೆ. ರೈಲು ಸಂಖ್ಯೆ 06295 ಬೆಂಗಳೂರು-ಪಂಢರಪುರ ವಿಶೇಷ ಎಕ್ಸ್ಪ್ರೆಸ್ ಅನ್ನು ಜುಲೈ 5 ಮತ್ತು 7ರಂದು ರದ್ದುಗೊಳಿಸಲಾಗಿದೆ.
ರೈಲು ಸಂಖ್ಯೆ 06296 ಪಂಢರಪುರ-ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಜುಲೈ 6 ಮತ್ತು 8ರಂದು ರದ್ದು ಮಾಡಲಾಗಿದೆ. ರೈಲು ಸಂಖ್ಯೆ 06297 ಬೆಂಗಳೂರು-ಪಂಢರಪುರ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಜುಲೈ 6ರಂದು ರದ್ದು ಮಾಡಲಾಗಿದೆ. ರೈಲು ಸಂಖ್ಯೆ 06298 ಪಂಢರಪುರ - ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಜುಲೈ 7ರಂದು ರದ್ದುಪಡಿಸಲಾಗಿದೆ.
ಗುಂಟೂರು ವಿಭಾಗದಲ್ಲಿ ನಡೆಯುತ್ತಿರುವ ಸುರಕ್ಷತಾ ಕುರಿತು ಕಾಮಗಾರಿ ಹಿನ್ನೆಲೆ ಹುಬ್ಬಳ್ಳಿ-ವಿಜಯವಾಡ ರೈಲು ಸಂಚಾರವನ್ನು ವಿಸ್ತರಣೆ ಮಾಡಲಾಗಿದೆ. ರೈಲು ಸಂಖ್ಯೆ 17329 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್ಪ್ರೆಸ್ ಜುಲೈ 31, 2024 ರವರೆಗೆ ರದ್ದುಪಡಿಸಲಾಗಿದ್ದು, ರೈಲು ಸಂಖ್ಯೆ 17330 ವಿಜಯವಾಡ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ಆಗಸ್ಟ್ 1, 2024ರವರೆಗೆ ರದ್ದು ಮಾಡಲಾಗಿದೆ ಎಂದು ತಿಳಿಸಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications