Bengaluru to Kedarnath Train: ಬೆಂಗಳೂರಿನಿಂದ ಕೇದಾರನಾಥಕ್ಕೆ ಹೋಗಲು ವಿಶೇಷ ರೈಲು
ಬೆಂಗಳೂರಿನಿಂದ ಉತ್ತರಖಂಡದ ಚಾರ್ಧಾಮ್ಗಳಲ್ಲಿ ಒಂದಾದ ಕೇದಾರನಾಥ ದೇವಸ್ಥಾನಕ್ಕೆ ಹೋಗಲು ಬಯಸುವವರಿಗೆ ಒಂದು ಶುಭ ಸುದ್ದಿ. ಅದೇನೆಂದರೆ ಸಂಪರ್ಕ ಕ್ರಾಂತಿ ರೈಲು ಮೂಲಕ ಬೆಂಗಳೂರಿನಿಂದ ಕೇದಾರನಾಥಕ್ಕೆ ಹೋಗಬಹುದಾಗಿದೆ. ಹಾಗಾದರೆ ಬೆಂಗಳೂರಿನಿಂದ ರೈಲಿನ ಮೂಲಕ ಕೇದಾರನಾಥ ಧಾಮಕ್ಕೆ ತೆರಳುವುದು ಹೇಗೆ? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಮೇ 10ರಂದು ಕೇದಾರನಾಥ, ಯಮುನೋತ್ರಿ, ಗಂಗೋತ್ರಿ ಹಾಗೂ ಬದರಿನಾಥ ಧಾಮವನ್ನು ಮೇ 12ರಂದು ತೆರೆಯಲಾಗಿದೆ. ಕರ್ನಾಟಕದಿಂದ ಚಾರ್ಧಾಮ್ ಯಾತ್ರೆ ಕೈಗೊಳ್ಳುವವರಿಗೆ ವಿಶೇಷ ರೈಲುಗಳ ಸೌಲಭ್ಯವನ್ನು ಒದಗಿಸಲಾಗಿದೆ. ಹೌದು... ಉತ್ತರಖಂಡದ ಚಾರ್ಧಾಮ್ಗಳಲ್ಲಿ ಒಂದಾದ ಕೇದಾರನಾಥ ದೇವಸ್ಥಾನಕ್ಕೆ ಹೋಗಲು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ಯಶ್ವಂತಪುರದಿಂದ ಸಂಪರ್ಕ ಕ್ರಾಂತಿ ರೈಲು ಹೊರಡುತ್ತದೆ. ಈ ರೈಲಿನಲ್ಲಿ ದೆಹಲಿವರೆಗೆ ಪ್ರಯಾಣ ಮಾಡಬಹುದು. ಹಾಗಾದರೆ ಈ ರೈಲು ಯಾವ ದಿನ ಇರುತ್ತದೆ? ಹೊರಡುವ ಸಮಯ ಯಾವುದು? ಎಲ್ಲದರ ಬಗ್ಗೆ ತಿಳಿಯೋಣ. ಬೆಂಗಳೂರಿನಿಂದ ಕೇದಾರನಾಥಕ್ಕೆ ರೈಲಿನ ಮೂಲಕ ಹೋಗಲು ಬಯಸುವವರಿಗೆ ಟೂರ್ ಪ್ಲ್ಯಾನ್ ಇಲ್ಲಿದೆ. ಈ ಪ್ಲ್ಯಾನ್ ಮೂಲಕ ನೀವು ಸುಲಭವಾಗಿ ಕೇದಾರನಾಥಕ್ಕೆ ಭೇಟಿ ನೀಡಬಹುದು.
ಬೆಂಗಳೂರಿನಿಂದ ದೆಹಲಿ ರೈಲು ಪ್ರಯಾಣ
ಸಂಪರ್ಕ ಕ್ರಾಂತಿ ರೈಲು (12649) ಬುಧವಾರ ಮಧ್ಯಾಹ್ನ 13.50ಕ್ಕೆ ಯಶ್ವಂತಪುರದಿಂದ ಹೊರಡುತ್ತದೆ. ಈ ರೈಲು ರಾತ್ರಿ 9.15ಕ್ಕೆ ಹುಬ್ಬಳ್ಳಿಯನ್ನು ತಲುಪುತ್ತದೆ. ತುಮಕೂರು ಹರಸಿಕೇರೆ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಗದಗ, ಹೊಸಪೇಟೆ, ಬಳ್ಳಾರಿ ಮೂಲಕ ಈ ರೈಲು ಹಾದು ಹೋಗಲಿದೆ. ಈ ರೈಲು ಮುಂದೆ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೇ ಸ್ಟೇಷನ್ ತಲುಪುವಾಗ ಶುಕ್ರವಾರ ಬೆಳಿಗ್ಗೆ 8.10 ಗಂಟೆಯಾಗಿರುತ್ತದೆ. ಹಾಗಾದರೆ ಈ ರೈಲು ಪ್ರಯಾಣ ದರ ಹೇಗಿದೆ ಎಂದು ತಿಳಿಯೋಣ.

ಬೆಂಗಳೂರಿನಿಂದ ದೆಹಲಿ ರೈಲು ಪ್ರಯಾಣ ದರ:
SL-840
3A:3180
2A: 3165
1A:5405
ದೆಹಲಿಯಿಂದ ಹರಿದ್ವಾರಕ್ಕೆ ಪ್ರಯಾಣ
ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೇ ಸ್ಟೇಷನ್ ನಿಂದ 9.50ಕ್ಕೆ ಇನ್ನೊಂದು ಟ್ರೈನ್ ಮೂಲಕ ಹರಿದ್ವಾರಕ್ಕೆ ಹೋಗಬೇಕಾಗುತ್ತದೆ. ಇದು ಹರಿದ್ವಾರವನ್ನು ಸಂಜೆ 4.10ಕ್ಕೆ ತಲುಪುತ್ತದೆ. ಇದಕ್ಕೆ 190 ರೂಪಾಯಿ ಟಿಕೆಟ್ ದರ ಇರಲಿದೆ. ಶುಕ್ರವಾರವೇ ಹರಿದ್ವಾರವನ್ನು ತಲುಪಲಾಗುತ್ತದೆ.
ಶನಿವಾರ ಬೆಳಿಗ್ಗೆ ಹರಿದ್ವಾರದಿಂದ ಸೋನ್ಪ್ರಯಾಗ್ ಗೆ ಬಸ್ ಮೂಲಕ ಪ್ರಯಾಣ (1000 ಪ್ರಯಾಣ ದರ) ಮಾಡಿ ರಾತ್ರಿ ಸೋನ್ಪ್ರಯಾಗ್ ನಲ್ಲಿ ಉಳಿದುಕೊಂಡು ಭಾನುವಾರ ಬೆಳಗ್ಗೆ ಬೇಗ ಜೀಪ್ ಮೂಲಕ ಗೌರಿಕುಂಡಕ್ಕೆ ಪ್ರಯಾಣ ಆರಂಭವಾಗುತ್ತದೆ.
ಭಾನುವಾರ ಬೆಳಗ್ಗೆ ಸೋನ್ಪ್ರಯಾಗ್ ಮೂಲಕ ಗೌರಿಕುಂಡಕ್ಕೆ ಜೀಪ್ ಮೂಲಕ ಹೋಗಲಾಗುತ್ತದೆ. ಗೌರಿಕುಂಡದಿಂದ ಕೇದಾರನಾಥ್ ಟ್ರಕ್ಕಿಂಗ್ ಶುರುವಾಗುತ್ತದೆ. ಐದನೇ ದಿನವೇ ನೀವು ಕೇದಾರನಾಥ ಧಾಮವನ್ನು ತಲುಪುವ ಮೂಲಕ ದೇವರ ದರ್ಶನ ಮಾಡಬಹುದು.

ಚಾರ್ಧಾಮ್ ಯಾತ್ರೆಗೆ ರಿಜಿಸ್ಟ್ರೇಷನ್ ಮಾಡುವುದು ಹೇಗೆ?
ಉತ್ತರಖಂಡನ ಯಾವುದೇ ಯಾತ್ರೆಗೆ ಹೋಗಬೇಕಾದರು ನೀವು ಯಾತ್ರಾ ರಿಜಿಸ್ಟ್ರೇಷನ್ ಮಾಡಿಸಲೇಬೇಕು. ಆನ್ಲೈನ್ನಲ್ಲಿ ಯಾತ್ರಾ ರಿಜಿಸ್ಟ್ರೇಷನ್ ಮಾಡಿಸುವುದಾದರೆ https://registrationandtouristcare.uk.gov.in/signin.php ಮೂಲಕ ಮಾಡಬಹುದು.
ಇನ್ನೊಂದು tourist care uttarakhand ಮೊಬೈಲ್ ಆಪ್ ಕೂಡ ಇದೆ. ಇದನ್ನು ಡೌನ್ಲೋಡ್ ಮಾಡಿಕೊಂಡು ಕೂಡ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದು. ಇನ್ನೊಂದು ಯಾತ್ರಾ ರಿಜಿಸ್ಟ್ರೇಷನ್ ನಂಬರ್ 8394833833 ಇದೆ. ಇದನ್ನು ಸೇವ್ ಮಾಡಿಕೊಂಡು ಈ ನಂಬರ್ಗೆ ಯಾತ್ರಾ ಅಂತ ಮೆಸೇಜ್ ಮಾಡಿ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications