ಇಂದೋರ್- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ, ದಿನಾಂಕ, ಮಾರ್ಗಗಳ ವಿವರ ತಿಳಿಯಿರಿ
ಮಂಗಳೂರು, ಮೇ, 10: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ವಿಶೇಷ ರೈಲುಗಳನ್ನು ಬಿಡುತ್ತಲೇ ಇದೆ. ಅದರಲ್ಲೂ ಹಬ್ಬಗಳು ಬಂದವೆಂದರೆ ಸಾಕು ಪ್ರಯಾಣಿಕರ ದಟ್ಟಣೆಯನ್ನು ತಡೆಯಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಬಂದಿದೆ. ಇದೀಗ ಇಂದೋರ್, ಮಂಗಳೂರು ನಡುವೆ ವಿಶೇಷ ರೈಲು ಸೌಲಭ್ಯವನ್ನು ಒದಗಿಸಲಾಗಿದೆ. ಹಾಗಾದರೆ ಈ ರೈಲು ಎಲ್ಲಿ ನಿಲುಗಡೆಯಾಗಲಿದೆ ಮತ್ತು ಯಾವಾಗ ಆರಂಭ ಆಗಲಿದೆ ಎನ್ನುವ ವಿವರವನ್ನು ಇಲ್ಲಿದೆ ತಿಳಿಯಿರಿ.
ಪಶ್ಚಿಮ ರೈಲ್ವೆಯ ಸಹಯೋಗದಲ್ಲಿ ಮೇ 11ರಂದು ಇಂದೋರ್, ಮಂಗಳೂರು ನಡುವೆ ವಿಶೇಷ ರೈಲು ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಭಾರತೀಯ ರೈಲ್ವೆ ಬುಧವಾರ (ಮೇ 10) ಮಾಹಿತಿ ನೀಡಿದೆ. ರೈಲು ಸಂಖ್ಯೆ 09302-ಗುರುವಾರ (ಮೇ 11) ಬೆಳಗ್ಗೆ 11:15ಕ್ಕೆ ಇಂದೋರ್ನಿಂದ ಬಿಡಲಿದ್ದು, ಮೇ 12ರ ಸಂಜೆ 4:15ಕ್ಕೆ ಮಂಗಳೂರಿಗೆ ತಲುಪಲಿದೆ.

ಈ ರೈಲು ದೀವಸ್, ಉಜ್ಜೈನ್ ಜಂಕ್ಷನ್, ನಗ್ಡಾ ಜಂಕ್ಷನ್, ಸೂರತ್, ವಲ್ಸದ್, ವಾಪಿ, ಪಾಲ್ಘರ್, ವಾಸವಿ ರಸ್ತೆ, ಪನ್ವೆಲ್, ರೋಹಾ, ರತ್ನಗಿರಿ, ರಾಜಪುರ ರಸ್ತೆ, ಕುಡಲ್, ತಿವಿಮ್, ಕರ್ಮಲಿ, ಮಡಗಾಂವ್ ಜಂಕ್ಷನ್, ಕಾರವಾರ ಹಾಗೂ ಉಡುಪಿ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಇನ್ನು ನೈಋತ್ಯ ರೈಲ್ವೆಯ ವಿಶೇಷ ಸಹಯೋಗದಲ್ಲಿ ಯಶವಂತಪುರದಿಂದ ಮುರುಡೇಶ್ವರ ಹಾಗೂ ಮುರುಡೇಶ್ವರ- ಯಶವಂತಪುರ ಮಧ್ಯೆ 06587/06588 ಸಂಖ್ಯೆಯ ವಿಶೇಷ ರೈಲು ಸಂಚರಿಸಲಿದೆ ಎಂದು ಭಾರತೀಯ ರೈಲ್ವೆ ಮಾಹಿತಿ ನೀಡಿದೆ. ಈ ರೈಲು ಮುರುಡೇಶ್ವರದಿಂದ ಬುಧವಾರ ಮಧ್ಯಾಹ್ನ 1:30ಕ್ಕೆ ಹೊರಡಲಿದ್ದು, ಗುರುವಾರ (ಮೇ 10) ಬೆಳಗ್ಗೆ 4 ಕ್ಕೆ ಯಶವಂತಪುರ ತಲುಪಲಿದೆ ಎಂದು ತಿಳಿಸಿದೆ.
ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೋಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರಸ್ತೆ, ಬೈಂದೂರು ಹಾಗೂ ಭಟ್ಕಳದಲ್ಲಿ ನಿಲುಗಡೆ ಆಗಲಿದೆ ಎಂದು ತಿಳಿಸಿದೆ.
ರಾಜ್ಯ ಚುನಾವಣೆ ಹಿನ್ನೆಲೆ ಭಾರತೀಯ ರೈಲ್ವೆಯು ವಿಶೇಷ ರೈಲುಗಳನ್ನು ಓಡಿಸಲು ನಿರ್ಧಾರ ಮಾಡಿತ್ತು ಅದರಂತೆಯೇ ಇದೀಗ ಇಂದೋರ್- ಮುರುಡೇಶ್ವರ, ಮಂಗಳೂರು ನಡುವೆ ವಿಶೇಷ ರೈಲುಗಳು ಸಂಚಾರ ಮಾಡಲಿವೆ.
-
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications