Vande Bharat: ತಿರುವನಂತಪುರಂ-ಮಂಗಳೂರು ರೈಲು ವೇಳಾಪಟ್ಟಿ ಬದಲು
ಮಂಗಳೂರು, ಮೇ 11: ತಿರುವನಂತಪುರಂ-ಮಂಗಳೂರು ನಡುವ ಸಂಚಾರ ನಡೆಸುವ ಜನರಿಗೆ ಪ್ರಮುಖ ಮಾಹಿತಿಯೊಂದಿದೆ. ಮೇ 13ರಿಂದ ಜಾರಿಗೆ ಬರುವಂತೆ ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ನಡುವಿನ ವಂದೇ ಭಾರತ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ.
ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ. ರೈಲು ನಂಬರ್ 20632 ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ರೈಲು ಮೇ 13ರಿಂದ ಬದಲಾದ ವೇಳಾಪಟ್ಟಿ ಅನ್ವಯ ಸಂಚಾರ ನಡೆಸಲಿದೆ. ಪ್ರಯಾಣಿಕರು ಪರಿಷ್ಕತ ಸಮಯ ತಿಳಿಯುವಂತೆ ಮನವಿ ಮಾಡಲಾಗಿದೆ.

ಬದಲಾದ ವೇಳಾಪಟ್ಟಿ: ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಎರ್ನಾಕುಲಂ ಜಂಕ್ಷನ್, ತ್ರಿಶೂರ್, ಶೋರ್ನೂರ್ ಜಂಕ್ಷನ್, ತಿರೂರ್, ಕೊಯಿಕ್ಕೋಡ್, ಕಣ್ಣೂರು, ಕಾಸರಗೋಡು ಮೂಲಕ ಸಂಚಾರ ನಡೆಸುತ್ತದೆ.
ಪರಿಷ್ಕೃತ ವೇಳಾಪಟ್ಟಿಯಂತೆ ತಿರುವನಂತಪುರಂ ಸೆಂಟ್ರಲ್ನಿಂದ ಹೊರಡುವ ವಂದೇ ಭಾರತ್ ರೈಲು 19.56/19.58 ಎರ್ನಾಕುಲಂ ಜಂಕ್ಷನ್, 19.56/ 19.58 ತ್ರಿಶೂರ್, 20.30/ 20.32 ಶೋರ್ನೂರ್ ಜಂಕ್ಷನ್, 21.02/21.04 ತಿರೂರ್, 21.32/ 21.34 ಕೊಯಿಕ್ಕೋಡ್, 22.36/ 22.38 ಕಣ್ಣೂರು, 23.46/ 23.48 ಕಾಸರಗೋಡು ಆಗಮನ/ ನಿರ್ಗಮನವಾಗಲಿದೆ.
ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಉಳಿದ ಯಾವುದೇ ಸಮಯ, ದರ, ಬೋಗಿಗಳ ಸಂಯೋಜನೆ, ನಿಲ್ದಾಣದಲ್ಲಿ ಬದಲಾವಣೆ ಇಲ್ಲ ಎಂದು ಪಾಲಕ್ಕಾಡ್ ರೈಲ್ವೆ ವಿಭಾಗ ಸ್ಪಷ್ಟಪಡಿಸಿದೆ.
ಮಾರ್ಚ್ನಲ್ಲಿ ಸಂಚಾರ ಆರಂಭ: ಮಂಗಳೂರು ಸೆಂಟ್ರಲ್-ಕಾಸರಗೋಡು-ತಿರುವನಂತಪುರಂ ನಡುವಿನ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12ರಂದು ಚಾಲನೆ ನೀಡಿದ್ದರು. ಕಾಸರಗೋಡು-ತಿರುವನಂತಪುರಂ ನಡುವೆ ಸಂಚಾರ ನಡೆಸುತ್ತಿದ್ದ ರೈಲನ್ನು ಕರ್ನಾಟಕ ಕರಾವಳಿಯ ಮಂಗಳೂರು ಸೆಂಟ್ರಲ್ ನಿಲ್ದಾಣದ ತನಕ ವಿಸ್ತರಣೆ ಮಾಡಲಾಗಿತ್ತು.
ಮಂಗಳೂರು ಸೆಂಟ್ರಲ್-ಕಾಸರಗೋಡು-ತಿರುವನಂತಪುರಂ ಸೆಂಟ್ರಲ್ ನಡುವೆ ರೈಲು ನಂಬರ್ 20362 ಮತ್ತು ತಿರುವನಂತಪುರಂ-ಕಾಸರಗೋಡು-ಮಂಗಳೂರು ಸೆಂಟ್ರಲ್ ನಡುವೆ 20632 ನಂಬರ್ ರೈಲು ಸಂಚಾರ ನಡೆಸುತ್ತಿದೆ.
ಮಂಗಳೂರಿನಿಂದ ಬೆಳಗ್ಗೆ 6.15ಕ್ಕೆ ಹೊರಡುವ ರೈಲು ಮ್ಯಧ್ಯಾಹ್ನ 3.05ಕ್ಕೆ ತಿರುವನಂತಪುರ ತಲುಪಲಿದೆ. ತಿರುವನಂತಪುರಂನಿಂದ ರೈಲು ಸಂಜೆ 4.05ಕ್ಕೆ ಹೊರಡು ರೈಲು 12.40ಕ್ಕೆ ಮಂಗಳೂರು ತಲುಪಲಿದೆ. ಬುಧವಾರ ಹೊರತುಪಡಿಸಿ ಎಲ್ಲಾ ದಿನ ರೈಲು ಸಂಚಾರ ನಡೆಸುತ್ತದೆ.
ಈಗ ರೈಲ್ವೆ ಇಲಾಖೆ ಮೇ 13ರಿಂದ ಜಾರಿಗೆ ಬರುವಂತೆ ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್ ನಡುವಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಿಲ್ಲ. ತಿರುವನಂತಪುರಂ-ಕಾಸರಗೋಡು-ಮಂಗಳೂರು ಸೆಂಟ್ರಲ್ ನಡುವಿನ ವೇಳಾಪಟ್ಟಿಯನ್ನು ಮಾತ್ರ ಪರಿಷ್ಕರಣೆ ಮಾಡಿದೆ.
ಮಂಗಳೂರು ನಗರಕ್ಕೆ ಎರಡು ವಂದೇ ಭಾರತ್ ರೈಲುಗಳ ಸಂಪರ್ಕವಿದೆ. ಮಂಗಳೂರು ಮತ್ತು ಮಡಗಾಂವ್ ನಡುವೆ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಪ್ರಯಾಣಿಕರ ಬೇಡಿಕೆಯಂತೆ ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್ ರೈಲು ಸೇವೆ ಆರಂಭಿಸಲಾಗಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications