ಕರ್ನಾಟಕದ ಈ ವಂದೇ ಭಾರತ್ ರೈಲಿಗೆ 8 ಬೋಗಿ ಸೇರ್ಪಡೆ
ಮಂಗಳೂರು, ಮೇ 12: ಕರ್ನಾಟಕದ ಕರಾವಳಿಗೆ ಆಗಮಿಸುವ ವಂದೇ ಭಾರತ್ ರೈಲಿಗೆ ಇನ್ನೂ 8 ಬೋಗಿಯನ್ನು ಅಳವಡಿಕೆ ಮಾಡಲಾಗುತ್ತದೆ. ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮೇ 22ರಿಂದ 16 ಬೋಗಿಯ ರೈಲಾಗಿ ಸಂಚಾರವನ್ನು ನಡೆಸಲಿದೆ. ಭಾರತದಲ್ಲಿ ಅತಿ ಹೆಚ್ಚು ಪ್ರಯಾಣಿಕರ ಬೇಡಿಕೆ ಇರುವ ವಂದೇ ಭಾರತ್ ರೈಲುಗಳಲ್ಲಿ ಕರ್ನಾಟಕ ಮತ್ತು ಕೇರಳ ಸಂಪರ್ಕಿಸುವ ಈ ರೈಲು ಸಹ ಒಂದಾಗಿದೆ.
ದಕ್ಷಿಣ ರೈಲ್ವೆ ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ನಡುವೆ 20631/ 632 ಸಂಖ್ಯೆಯ ವಂದೇ ಭಾರತ್ ರೈಲನ್ನು ಓಡಿಸುತ್ತಿದೆ. ಸದ್ಯ ರೈಲು 8 ಬೋಗಿಯನ್ನು ಒಳಗೊಂಡಿದೆ. ಆದರೆ ಈ ರೈಲಿಗೆ ಭಾರೀ ಬೇಡಿಕೆ ಇದೆ. ಆದ್ದರಿಂದ ಪ್ರಯಾಣಿಕರ ಬೇಡಿಕೆಯಂತೆ ರೈಲಿಗೆ ಇನ್ನೂ 8 ಬೋಗಿ ಸೇರಿಸಲಾಗುತ್ತಿದೆ.

ಮೇ 22ರಿಂದ ಈ ರೈಲು 16 ಬೋಗಿಯ ರೈಲಾಗಿ ಸಂಚಾರವನ್ನು ನಡೆಸಲಿದೆ. ಈ ಮೂಲಕ ಕೇರಳ ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವ ಎರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು 16 ಬೋಗಿಯ ರೈಲು ಆದಂತೆ ಆಗಿದೆ. ಬೋಗಿಯ ಸಂಖ್ಯೆ ಹೆಚ್ಚಳ ಬಿಟ್ಟರೆ ನಿಲ್ದಾಣ, ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.
ಈ ರೈಲು ಮಂಗಳೂರು ಸೆಂಟ್ರಲ್ನಿಂದ ಬೆಳಗ್ಗೆ 6.25ಕ್ಕೆ ಹೊರಡಲಿದೆ ಮತ್ತು ತಿರುವನಂತಪುರಂಗೆ 3.05ಕ್ಕೆ ತಲುಪಲಿದೆ. 620 ಕಿ. ಮೀ. ದೂರವನ್ನು ರೈಲು 8.40 ಗಂಟೆಯಲ್ಲಿ ಕ್ರಮಿಸಲಿದೆ. ಈ ರೈಲಿನ ಸರಾಸರಿ ವೇಗ ಗಂಟೆಗೆ 72 ಕಿ. ಮೀ. ವೇಗದಲ್ಲಿ ಸಂಚಾರವನ್ನು ನಡೆಸಲಿದೆ.
ರೈಲು ತಿರುವನಂತಪುರಂನಿಂದ ರೈಲು ಸಂಖ್ಯೆ 20632 ಸಂಜೆ 4.05ಕ್ಕೆ ಹೊರಡಲಿದೆ. ಮಧ್ಯರಾತ್ರಿ 12.40ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ರೈಲು 8.35 ಗಂಟೆಗಳಲ್ಲಿ ಉಭಯ ನಗರವನ್ನು ಸಂಪರ್ಕಿಸಲಿದೆ. ಈ ರೈಲು ಬುಧವಾರ ಹೊರತುಪಡಿಸಿ ವಾರದ ಎಲ್ಲಾ ದಿನ ಸಂಚಾರವನ್ನು ನಡೆಸುತ್ತದೆ.
ಮಂಗಳೂರು ಸೆಂಟ್ರಲ್-ತಿರುವನಂತಪುರಂ ನಡುವೆ ಚೇರ್ ಕಾರ್ ದರ 1,615 ರೂ. ಆಗಿದೆ. ಎಕ್ಸಿಕ್ಯುಟಿವ್ ಕ್ಲಾಸ್ ದರ 2,945 ರೂ. ಆಗಿದೆ. ತಿರುವನಂತಪುರಂ-ಮಂಗಳೂರು ನಡುವಿನ ದರ ಚೇರ್ ಕಾರ್ 1,575 ರೂ. ಮತ್ತು ಎಕ್ಸಿಕ್ಯುಟಿವ್ ಕ್ಲಾಸ್ ದರ 2,910 ರೂ. ಆಗಿದೆ.
ಮಂಗಳೂರು-ತಿರುವನಂತಪುರಂ ನಡುವೆ ಎಕ್ಸ್ಪ್ರೆಸ್ ರೈಲುಗಳು ಸಂಚಾರ ನಡೆಸಲು 13 ಗಂಟೆ ತೆಗೆದುಕೊಳ್ಳುತ್ತದೆ. ಆದರೆ ವಂದೇ ಭಾರತ್ ಎಕ್ಸ್ಪ್ರೆಸ್ ಸುಮಾರು 9 ಗಂಟೆಯಲ್ಲಿ ಸಂಪರ್ಕ ಕಲ್ಪಿಸುತ್ತದೆ. ಆದ್ದರಿಂದ ಈ ರೈಲಿಗೆ ಬೇಡಿಕೆ ಹೆಚ್ಚಾಗಿದೆ.
ಮೊದಲು ಈ ರೈಲು ಕೇರಳದಲ್ಲಿ ಮಾತ್ರ ಸಂಚಾರವನ್ನು ನಡೆಸುತ್ತಿತ್ತು. ತಿರುವನಂತಪುರಂ-ಕಾಸರಗೋಡು-ತಿರುವನಂತಪುರಂ ನಡುವೆ ಓಡುತ್ತಿತ್ತು. ಈ ರೈಲನ್ನು ಮಂಗಳೂರು ತನಕ ವಿಸ್ತರಣೆ ಮಾಡಿ ಎಂದು ಇಲಾಖೆಗೆ ಬೇಡಿಕೆ ಸಲ್ಲಿಕೆ ಮಾಡಲಾಗಿತ್ತು. ಮಾರ್ಚ್ 13, 2024ರಂದು ಈ ರೈಲನ್ನು ಮಂಗಳೂರು ತನಕ ವಿಸ್ತರಣೆ ಮಾಡಲಾಗಿತ್ತು.
ಬೋಗಿಗಳ ವಿಚಾರಕ್ಕೆ ಬಂದರೆ ಈ ರೈಲು ಪ್ರಸ್ತುತ 8 ಬೋಗಿಯನ್ನು ಹೊಂದಿದೆ. ಅದರಲ್ಲಿ ಒಂದು ಎಕ್ಸಿಕ್ಯುಟಿವ್ ಕ್ಲಾಸ್, 7 ಚೇರ್ ಕಾರ್ಗಳನ್ನು ಹೊಂದಿದೆ. 16 ಬೋಗಿಯಾಗಿ ರೈಲು ಬದಲಾದ ಬಳಿಕ 14 ಚೇರ್ ಕಾರ್ ಮತ್ತು 2 ಎಕ್ಸಿಕ್ಯುಟಿವ್ ಕ್ಲಾಸ್ ಬೋಗಿಯನ್ನು ರೈಲು ಹೊಂದಲಿದೆ. ಸದ್ಯ ಚೇರ್ ಕಾರ್ಗಳಲ್ಲಿ 530 ಪ್ರಯಾಣಿಕರು ಸಂಚಾರ ನಡೆಸಬಹುದು. ಬೋಗಿ ಸಂಖ್ಯೆ ಅಧಿಕವಾದ ಬಳಿಕ 1,128 ಪ್ರಯಾಣಿಕರ ಸಂಚರಿಸಬಹುದು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications