ಪ್ರಯಾಣಿಕರೇ ಗಮನಿಸಿ: ತಿರುಪತಿ ಸೇರಿ ಹಲವು ರೈಲುಗಳ ಮಾರ್ಗ ಬದಲಾವಣೆ
ಬೆಂಗಳೂರು, ಏಪ್ರಿಲ್. 11: ನೈರುತ್ಯ ರೈಲ್ವೆ ಇಲಾಖೆಯು ಹಲವು ರೈಲುಗಳ ಮಾರ್ಗಗಳಲ್ಲಿ ಬದಲಾವಣೆ, ರೈಲುಗಳ ವಿಳಂಬ ಸೇರಿದಂತೆ ಕೆಲವು ವಿವರಗಳನ್ನು ಪ್ರಕಟಿಸಿದೆ. ತಿರುಪತಿ ನಿಲ್ದಾಣಕ್ಕೆ ತೆರಳುವ ರೈಲುಗಳ ಮಾರ್ಗ ಬದಲಾವಣೆಯಾಗಲಿದೆ. ಬಾಗಲಕೋಟೆ- ಮುಗಳೊಳ್ಳಿ ಮಾರ್ಗದಲ್ಲಿ ರೈಲು ವಿಳಂಬವಾಗಲಿದೆ.
ನೈರುತ್ಯ ರೈಲ್ವೆ: ತಡವಾಗಿ ಪ್ರಾರಂಭವಾಗುವ ರೈಲುಗಳು
ಬಾಗಲಕೋಟೆ-ಮುಗಳೊಳ್ಳಿ ಮತ್ತು ಆಲಮಟ್ಟಿ-ಜಡ್ರಾಮಕುಂಟಿ ನಿಲ್ದಾಣಗಳ ನಡುವೆ ಅಗತ್ಯ ಎಂಜಿನಿಯರಿಂಗ್ ಕಾಮಗಾರಿ ಇರುವುದರಿಂದ ಈ ಕೆಳಗಿನ ರೈಲುಗಳು ತಡವಾಗಿ ಪ್ರಾರಂಭವಾಗುತ್ತವೆ.

1. ಏಪ್ರಿಲ್ 12 ರಿಂದ 14 ರವರೆಗೆ ವಿಜಯಪುರದಿಂದ ಹೊರಡುವ ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು 45 ನಿಮಿಷ ತಡವಾಗಿ ಹೊರಡಲಿದೆ.
2. ಏಪ್ರಿಲ್ 12 ರಿಂದ 14 ರವರೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17330 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್ ಪ್ರೆಸ್ ರೈಲು 60 ನಿಮಿಷ ತಡವಾಗಿ ಹೊರಡಲಿದೆ.
ಈ ರೈಲುಗಳ ಮಾರ್ಗ ಬದಲಾವಣೆ
ತಿರುಪತಿ ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವುದರಿಂದ ಈ ಕೆಳಗಿನ ರೈಲುಗಳು ಬದಲಾದ ಮಾರ್ಗದ ಮೂಲಕ ಸಂಚರಿಸಲಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.

1. ಏಪ್ರಿಲ್ 22 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12890 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಟಾಟಾನಗರ ಎಕ್ಸ್ ಪ್ರೆಸ್ ರೈಲು ಕಟಪಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ತಿರುಪತಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.
2. ಏಪ್ರಿಲ್ 16, 18 ಮತ್ತು 23 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12836 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಹಟಿಯಾ ಎಕ್ಸ್ ಪ್ರೆಸ್ ರೈಲು ಕಟಪಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಚಿತ್ತೂರು ಮತ್ತು ತಿರುಪತಿ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ಮಾರ್ಗ ಮಧ್ಯೆ ಈ ರೈಲುಗಳು ನಿಯಂತ್ರಣ
ಏಪ್ರಿಲ್ 10 ರಿಂದ 16 ರವರೆಗೆ ಜಲಗಾಂವ್-ಮನ್ಮಾಡ್ ಭಾಗದ ನಡುವಿನ 3 ನೇ ಮಾರ್ಗಕ್ಕೆ ಸಂಬಂಧಿಸಿದಂತೆ ಚಾಲಿಸಗಾಂವ್ ಯಾರ್ಡ್ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತಿದೆ ಎಂದು ಮಧ್ಯ ರೈಲ್ವೆಯು ಸೂಚಿಸಿದೆ.
1. ಏಪ್ರಿಲ್ 15 ರಂದು ವಾಸ್ಕೋ ಡ ಗಾಮಾ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12779 ವಾಸ್ಕೋ ಡ ಗಾಮಾ-ಹಜರತ್ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
2. ಏಪ್ರಿಲ್ 15 ರಂದು ಹಜರತ್ ನಿಜಾಮುದ್ದೀನ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12780 ಹಜರತ್ ನಿಜಾಮುದ್ದೀನ್- ವಾಸ್ಕೋ ಡ ಗಾಮಾ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 145 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications