ದೇವರಮನೆಯಲ್ಲಿ ಎಣ್ಣೆ, ಧಮ್, ಡ್ಯಾನ್ಸ್: ಪ್ರವಾಸಿಗರ ಹುಚ್ಚಾಟ, ಭಕ್ತರಿಗೆ ಮುಜುಗರ
ಚಿಕ್ಕಮಗಳೂರು, ಜುಲೈ 01: ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣವಾದ ದೇವರಮನೆ ಮೋಜು, ಮಸ್ತಿಯ ಅಡ್ಡವಾಗಿದೆ. ಇದರಿಂದಾಗಿ ಶ್ರೀ ಕ್ಷೇತ್ರ ಕಾಲಭೈರವೇಶ್ವರನ ಸನ್ನಿಧಿಗೆ ಆಗಮಿಸುವ ಭಕ್ತರಿಗೆ ಮುಜುಗರ ಉಂಟಾಗಿದೆ.
ದೇವರಮನೆಗೆ ಸದಾ ಪ್ರವಾಸಿಗರು ಆಗಮಿಸುತ್ತಾರೆ. ಈಗ ನೈಋತ್ಯ ಮುಂಗಾರು ಮಳೆ ಸುರಿಯುವ ಅವಧಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದರೆ ಪ್ರವಾಸಿಗರ ಹುಚ್ಚು ಕುಣಿತ ಮಲೆನಾಡ ಪ್ರಕೃತಿ ಮಡಿಲಿನ ಸೌಂದರ್ಯ ನೋಡಲು ಬರುವ ಪ್ರವಾಸಿಗರಿಗೆ ಮುಜುಗರ ತಂದಿದೆ.

ದೇವರಮನೆಯಲ್ಲಿ ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ದೇವಾಲಯವಿದೆ. ಈ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಮದ್ಯ ಕುಡಿದು, ಧಮ್ ಹೊಡೆದುಕೊಂಡು, ರಸ್ತೆ ಮಧ್ಯೆ ಮೋಜು, ಮಸ್ತಿ ಮಾಡುವ ಪ್ರವಾಸಿಗರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ, ಓಡಾಡಲು ಜಾಗವಿಲ್ಲದಂತೆ ಆಗಿದೆ.
ಕೆಲವು ಪ್ರವಾಸಿಗರು ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಡ್ಯಾನ್ಸ್ ಮಾಡುತ್ತಿದ್ದಾರೆ. ಜೋರಾಗಿ ಕಿರುಚಾಡಿ ಗದ್ದಲವನ್ನು ಎಬ್ಬಿಸುತ್ತಿದ್ದಾರೆ. ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಕುಣಿದ ಕುಪ್ಪಳಿಸುತ್ತಿರುವ ಪ್ರವಾಸಿಗರು ಯಾರ ಮಾತನ್ನೂ ಸಹ ಕೇಳುತ್ತಿಲ್ಲ.
ಯಾರಿಗೂ ಪೊಲೀಸರ ಭಯವಿಲ್ಲ. ಸ್ಥಳೀಯರ ಮಾತನ್ನು ಕೇಳುತ್ತಿಲ್ಲ. ದೇವರಮನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದೆ. ಆದರೆ ಬೆರಳೆಣಿಕೆಯಷ್ಟು ಪೊಲೀಸರು ದೇವರಮನೆಯಲ್ಲಿ ಭದ್ರತೆಗೆ ನಿಯೋಜನೆಗೊಂಡರೆ ಉಳಿದ ಕೆಲಸ ಯಾರು ಮಾಡಬೇಕು? ಎಂಬುದು ಪ್ರಶ್ನೆಯಾಗಿದೆ.
ಮುಂಗಾರು ಮಳೆ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ಸಂಖ್ಯೆ ಏರಿಕೆಯಾಗಿದೆ. ಅದರಲ್ಲೂ ಸರಣಿ ರಜೆ, ವಾರಾಂತ್ಯದಲ್ಲಿ ಪ್ರವಾಸಿಗರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಪ್ರವಾಸಕ್ಕೆ ಬರುವವರು ಪ್ರಕೃತಿ ಸೌಂದರ್ಯವನ್ನು ಸವಿದು ಮರಳಿದರೆ ಯಾವುದೇ ತೊಂದರೆ ಇಲ್ಲ. ಆದರೆ ಅವರು ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ತ್ಯಾಜ್ಯಗಳನ್ನು ಸುರಿಯುತ್ತಾರೆ. ಅಲ್ಲದೇ ಮದ್ಯ ಕುಡಿದು, ಧಮ್ ಹೊಡೆದುಕೊಂಡು, ರಸ್ತೆ ಮಧ್ಯೆ ಮೋಜು, ಮಸ್ತಿ ಮಾಡುತ್ತಾ ಉಳಿದ ಪ್ರವಾಸಿಗರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.
ದೇವರಮನೆ ಶ್ರೀ ಕ್ಷೇತ್ರ ಕಾಲಭೈರವೇಶ್ವರ ದೇವಾಲಯದ ಮುಂದೆ ಪಾರ್ಕಿಂಗ್ ನೋಡಿಕೊಳ್ಳುವ ಸಿಬ್ಬಂದಿ ಇದ್ದಾರೆ. ಆದರೆ ಇಲ್ಲಿಗೆ ಆಗಮಿಸುವ ಜಾಗ, ವ್ಯೂ ಪಾಯಿಂಟ್ ಮುಂತಾದ ಕಡೆಗಳಲ್ಲಿ ಹೆಚ್ಚಿನ ಸಿಬ್ಬಂದಿಗಳಿಲ್ಲ. ಸ್ಥಳೀಯರ ಮಾತುಗಳನ್ನು ಪ್ರವಾಸಿಗರು ಕೇಳುತ್ತಿಲ್ಲ.
ಕೆಲವು ಪ್ರವಾಸಿಗರ ಹುಚ್ಚಾಟದಿಂದಾಗಿ ಇಲ್ಲಿಗೆ ಆಗಮಿಸುವ ಇತರ ಪ್ರವಾಸಿಗರೂ ಕಿರಿಕಿರಿ ಅನುಭವಿಸುವಂತಾಗಿದೆ. ಕಡಿದಾದ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಡ್ಯಾನ್ಸ್ ಮಾಡುತ್ತಾ, ವಿಡಿಯೋ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.
ಚಿಕ್ಕ ಪೊಲೀಸ್ ಠಾಣೆಯಲ್ಲಿ ಇರುವ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಹುಚ್ಚಾಟಕ್ಕೆ ತಡೆ ಹಾಕುವುದು ಕಷ್ಟದ ಕೆಲಸ. ಪ್ರವಾಸ ಹೋಗುವವರು ತಾವು ಇತರರಿಗೆ ತೊಂದರೆ ಉಂಟು ಮಾಡಬಾರದು ಎಂಬ ಸಾಮಾನ್ಯ ಜ್ಞಾನವನ್ನು ಅರಿತು ನಡೆದುಕೊಂಡರೆ ಎಲ್ಲರಿಗೂ ಅನುಕೂಲವಾಗಲಿದೆ.
ಪ್ರವಾಸಿಗರ ವರ್ತನೆಗೆ ಕಡಿವಾಣ ಹಾಕಬೇಕಿದೆ. ಇದಕ್ಕಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications