ವೀಕೆಂಡ್ ಟ್ರಿಪ್ ಪ್ಲಾನ್ ಮಾಡುವ ಮುನ್ನ ಗಮನಿಸಿ: ಉತ್ತರ ಕನ್ನಡದ ಈ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ
ಕಾರವಾರ, ಜುಲೈ 28: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಕೊಂಚ ಕಡಿಮೆಯಾಗಿದೆ. ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಜಲಪಾತಗಳತ್ತ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಆದರೆ ಇತ್ತೀಚೆಗೆ ಉಡುಪಿಯ ಬೈಂದೂರಿನಲ್ಲಿ ಜಲಪಾತದಲ್ಲಿ ಪ್ರವಾಸಿಗರೊಬ್ಬರು ಜಾರಿ ಬಿದ್ದು ಮೃತಪಟ್ಟ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿಯೂ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಭಂಧ ಹೇರಿದೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ನಿರಂತರವಾಗಿ ಸುರಿಯುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದೆ. ಇದರಿಂದ ಮೈದುಂಬಿ ಹರಿಯುತ್ತಿರುವ ಜಲಪಾತ, ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ ಹೀಗೆ ಬಂದ ಪ್ರವಾಸಿಗರು ಮೋಜು ಮಸ್ತಿಯಲ್ಲಿ ತೊಡಗುವ ಕಾರಣಕ್ಕೆ ಅಪಾಯಕ್ಕೆ ಸಿಲುಕುವ ಸಾಧ್ಯತೆಗಳು ಇರುವುದರಿಂದ ಉತ್ತರ ಕನ್ನಡ ಜಿಲ್ಲಾಡಳಿತ ಪ್ರಮುಖ ಕಡಲತೀರಗಳಿಗೆ ಸದ್ಯದ ಮಟ್ಟಿಗೆ ಪ್ರವಾಸಿಗರಿಗೆ ನಿರ್ಭಂಧ ಹೇರಿದೆ.

ಹೊನ್ನಾವರದ ಅಪ್ಸರಕೊಂಡ, ಗೋಕರ್ಣ ಸಮೀಪದ ವಿಭೂತಿ ಫಾಲ್ಸ್, ಮಾಗೋಡ್ ಫಾಲ್ಸ್, ಯಲ್ಲಾಪುರ ತಾಲೂಕು ವ್ಯಾಪ್ತಿಯ ಶಿರ್ಲೆ, ಕುಳಿಮಾಗೋಡು, ಕಾನೂರು ಸೇರಿದಂತೆ ಅನೇಕ ದಟ್ಟ ಅರಣ್ಯ ಪ್ರದೇಶದೊಳಗಿನ ಜಲಪಾತಗಳ ಭೇಟಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ತಿಳಿಸಿದ್ದಾರೆ.
ಆದರೆ ಸ್ಥಳೀಯರ ಗಮನಕ್ಕೆ ಬಾರದಂತೆ ಕೆಲವು ಪ್ರದೇಶಗಳಿಗೆ ತೆರಳಿ ಪ್ರವಾಸಿಗರು ಸಿಕ್ಕಿ ಹಾಕಿಕೊಳ್ಳುತ್ತಿದ್ದು, ಮಳೆಯ ರಕ್ಷಣಾ ಕಾರ್ಯ ಕೂಡ ಸಾಹಸಮಯವಾಗಲಿದೆ. ಹೀಗಾಗಿ ಇಂಥವರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಪ್ರವಾಸಗಳನ್ನು ಮುಂದೂಡಲು ಸಲಹೆ ನೀಡಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications