Malpe Beach: ಪ್ರವಾಸಿಗರೇ ಗಮನಿಸಿ... ಮಲ್ಪೆ ಬೀಚ್ ಪ್ರವೇಶ ನಿಷೇಧ
ಬೆಂಗಳೂರು, ಜೂನ್. 11: ರಾಜ್ಯದಲ್ಲಿ ಮಳೆ ಆರ್ಭಟ ಆರಂಭವಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ ಸೇರಿಸದಂತೆ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಇದೆ ವೇಳೆ ಉಡುಪಿಗೆ, ಬೀಚ್ಗಳಿಗೆ ಹೋಗುವವರಿಗೆ ಬೇಸರದ ಸಂಗತಿಯೊಂದಿದೆ. ಉಡುಪಿಯ ಮಲ್ಪೆ ಬೀಚ್ನಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಮಳೆಗಾಲದಲ್ಲಿ ಬೀಚ್ಗಳು, ಮಳೆಯ ಸಂಭ್ರಮವನ್ನು ಕಣ್ಣು ತುಂಬಿಕೊಳ್ಳಲು ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಮಲೆನಾಡು, ಕರಾವಳಿ ಭಾಗಗಳಿಗೆ ಭೇಟಿ ನೀಡುತ್ತಾರೆ. ಮಳೆಗಾಲದಲ್ಲಿ ಸಮುದ್ರಗಳ ಅಬ್ಬರ ಜೋರಾಗಿರುತ್ತದೆ. ಕಡಲ ತೀರಗಳಲ್ಲಿ ಪ್ರವಾಸಿಗರು ಹೋಗುವುದು ಸರಿಯಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಎಚ್ಚರಿಕೆ ನೀಡುತ್ತಿರುತ್ತಾರೆ. ಆದರೂ ಕೂಡ ಪ್ರವಾಸಿಗರು ಎಚ್ಚರ ವಹಿಸುವುದಿಲ್ಲ.

ಮಲ್ಪೆ ಬೀಚ್ಗೆ ಪ್ರವಾಸಿಗರಿಗೆ ನಿಷೇಧ
ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳವಾದ ಮಲ್ಪೆ ಬೀಚ್ನಲ್ಲಿ ಯಾವುದೇ ಅಪಾಯ ಸಂಭವಿಸದಂತೆ ತಡೆಯಲು ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ಸದ್ಯಕ್ಕೆ ತಡೆ ಬೇಲಿ ನಿರ್ಮಿಸಲಾಗಿದೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿವೆ.
ತಡೆ ಬೇಲಿ ಹಾಕುವ ಜೊತೆಗೆ ಅಲ್ಲಲ್ಲಿ ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ. ಜೊತೆಗೆ ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಹಾಗಿದ್ದು, ಏನಾದರೂ ಪ್ರವಾಸಿಗರು ಬೀಚ್ಗೆ ಕಾಲಿಟ್ಟರೆ ಅವರಿಗಾಗಿ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ನಲ್ಲಿ ಕಾವಲು ಕಾಯುತ್ತಿದ್ದಾರೆ.

ಮಲ್ಪೆ ಬೀಚ್ನಲ್ಲಿ ನಿಯಮ ಪಾಳಿಸದ ಪ್ರವಾಸಿಗರು
ಭಾನುವಾರ ಪೂರ್ತಿ ನಿರಂತರ ಮಳೆಯ ನಡುವೆಯೂ ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೀಡಿದ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ನಿರ್ಲಕ್ಷಿಸಿ ಗಣನೀಯ ಸಂಖ್ಯೆಯಲ್ಲಿ ಪ್ರವಾಸಿಗರು ಮಲ್ಪೆ ಬೀಚ್ಗೆ ಆಗಮಿಸಿದ್ದರು. ಹಲವಾರು ನಿರ್ಬಂಧಗಳು ಮತ್ತು ಸಲಹೆಗಳ ಹೊರತಾಗಿಯೂ, ಅನೇಕ ಪ್ರವಾಸಿಗರು ನೀರಿಗೆ ಇಳಿಯುತ್ತಿದ್ದರು.
ಜಿಲ್ಲಾಡಳಿತ ನೀಡಿದ ಸುರಕ್ಷತಾ ಮುನ್ನೆಚ್ಚರಿಕೆಗಳ ಹೊರತಾಗಿಯೂ, ಪ್ರವಾಸಿಗರು ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸಿ ಸೀ ವಾಕ್ ವೇ ಬಳಿ ನೀರಿಗೆ ಪ್ರವೇಶಿಸಿದ್ದಾರೆ. ಬೀಚ್ನಲ್ಲಿ ಇರುವ ಜೀವರಕ್ಷಕರು ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಪಾಯಕಾರಿ ಮಾನ್ಸೂನ್ ಅವಧಿಯಲ್ಲಿ ಪ್ರವಾಸಿಗರು ನೀರಿಗೆ ಪ್ರವೇಶಿಸುವುದನ್ನು ತಡೆಯಲು ಸ್ಥಳೀಯ ಪೊಲೀಸರ ಸಹಾಯವನ್ನು ಕೋರಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications