Get Updates
Get notified of breaking news, exclusive insights, and must-see stories!

ಸೆಪ್ಟೆಂಬರ್ 17ರಿಂದ ಅಕ್ಟೋಬರ್ 16ರ ವರೆಗೆ ಈ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆ ರದ್ದು-ಮಾಹಿತಿ ಇಲ್ಲಿದೆ

ಬೆಂಗಳೂರು, ಸೆಪ್ಟೆಂಬರ್‌, 13: ಸಾಮಾನ್ಯವಾಗಿ ರೈಲುಗಳ ಹಳಿ ಅಳವಡಿಕೆ, ವಿದ್ಯುತ್‌ ಅಳವಡಿಕೆಯಂತಹ ಮಾರ್ಗಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರೈಲುಗಳ ಸೇವೆಯನ್ನು ರದ್ದುಪಡಿಸಲಾಗುತ್ತದೆ. ಹಾಗೆಯೇ ಇದೀಗ ಕಾಮಗಾರಿ ಹಿನ್ನೆಲೆ ಈ ನಿಲ್ದಾಣದಲ್ಲಿ ಸೆಪ್ಟೆಂಬರ್‌ 17ರಿಂದ ಅಕ್ಟೋಬರ್‌ 16ರ ವರೆಗೆ ರೈಲುಗಳ ನಿಲುಗಡೆಯನ್ನು ರದ್ದು ಮಾಡಲಾಗಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ರಾಜಾನಕುಂಟೆ ನಿಲ್ದಾಣದಲ್ಲಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ ಸೆಪ್ಟೆಂಬರ್‌ 17ರಿಂದ ಅಕ್ಟೋಬರ್‌ 16ರ ವರೆಗೆ ಈ ನಿಲ್ದಾಣದಲ್ಲಿ ರೈಲುಗಳ ನಿಲುಗಡೆಯನ್ನು ರದ್ದು ಮಾಡಲಾಗಿದೆ.

Trains Stop cancelled at this railway station from September 17 to October 16

ಹಿಂದೂಪುರ-ಕೆಎಸ್‌ಆರ್‌ ಬೆಂಗಳೂರು ಮೆಮು, ಶ್ರೀ ಸತ್ಯಬಾಯಿ ಪ್ರಶಾಂತಿ ನೀಲಯಂ-ಕೆಎಸ್‌ಆರ್‌ ಬೆಂಗಳೂರು ಮೆಮು, ಧರ್ಮಾವರಂ-ಕೆಎಸ್‌ಆರ್‌ ಬೆಂಗಳೂರು ಮೆಮು ರೈಲುಗಳು ಇಲ್ಲಿ ನಿಲುಗಡೆ ಹೊಂದಿದ್ದು, ಒಂದು ತಿಂಗಳ ಅವಧಿಯಲ್ಲಿ ನಿಲುಗಡೆ ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಳಗಾವಿಗೆ ವಂದೇ ಭಾರತ್‌ ಸೇವೆ ಯಾವಾಗ.?: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಐಷಾರಾಮಿ, ಹೈಸ್ಪೀಡ್‌ ರೈಲು ಆಗಿ ಗುರುತಿಸಿಕೊಂಡಿದೆ. ಇನ್ನೂ ಇದೀಗ ಬಹುದಿನಗಳ ಬೇಡಿಕೆಯಾಗಿದ್ದ ಪುಣೆ-ಹುಬ್ಬಳ್ಳಿ-ಬೆಳಗಾವಿ ಮಾರ್ಗದಲ್ಲಿ ವಂದೇ ಭಾರತ್‌ ರೈಲು ಸೇವೆಯ ಬೇಡಿಕೆ ಈಡೇರುವ ಸಮಯ ಹತ್ತಿರದಲ್ಲಿ. ಇನ್ನು ಬೆಂಗಳೂರಿನಿಂದ-ಬೆಳಗಾವಿಗೆ ಈ ಸೇವೆಯನ್ನು ಶೀಘ್ರದಲ್ಲೇ ವಿಸ್ತರಿಸಲಾಗುವುದು ಎಂದು ಸಂಸದ ಜಗದೀಶ್ ಶೆಟ್ಟರ್‌ ಹೇಳಿದ್ದಾರೆ.

ಬಹುನಿರೀಕ್ಷಿತ ಪುಣೆ-ಬೆಳಗಾವಿ ಮತ್ತು ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಸೇವೆಯ ಆರಂಭವು ಕೊನೆಗೂ ಕಾರ್ಯರೂಪಕ್ಕೆ ಬಂದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ಇನ್ನು ಸೆಪ್ಟೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ರೈಲಿಗೆ ಚಾಲನೆ ನೀಡಲಿದ್ದು, ಜಗದೀಶ್ ಶೆಟ್ಟರ್ ಅವರು ಬೆಳಗಾವಿ ರೈಲು ನಿಲ್ದಾಣದಲ್ಲಿ ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಗೆಷ್ಟೇ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅವರೊಂದಿಗೆ ಚರ್ಚೆ ನಡೆಸಿದ್ದರು. ಇನ್ನು ಜಗದೀಶ್‌ ಶೆಟ್ಟರ್ ಅವರು ಬೆಂಗಳೂರು-ಧಾರವಾಡದ ವಂದೇ ಭಾರತ್‌ ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಿಸಲು ಮನವಿ ಮಾಡಿದ್ದರು.

ಇದೀಗ ಪುಣೆ-ಹುಬ್ಬಳ್ಳಿ ಮಾರ್ಗಕ್ಕೆ ಅನುಮೋದನೆ ದೊರೆತಿದ್ದು, ಬೆಂಗಳೂರು-ಧಾರವಾಡದ ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಿಸುವ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಸೂಚನೆ ನೀಡಿದ್ದಾರೆ.

"ಈ ಹಿಂದೆ ಅರಣ್ಯ ಪ್ರದೇಶಗಳು, ಟ್ರ್ಯಾಕ್‌ ಸಮಸ್ಯೆ, ತಾಂತ್ರಿಕ ಸವಾಲುಗಳನ್ನು ಎದುರಿಸಲಾಗಿದ್ದು, ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗವನ್ನು ಸ್ಥಾಪನೆ ಮಾಡುವ ಪ್ರಕ್ರಿಯೆಯಲ್ಲಿದ್ದೇವೆ. ಇನ್ನು ಅಸ್ತಿತ್ವದಲ್ಲಿರುವ ಮಾರ್ಗದಲ್ಲಿ ರೈಲು ಕಾರ್ಯನಿರ್ವಹಿಸಲು ನಾವು ವಿನಂತಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲಾಗಿದೆ," ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+