Get Updates
Get notified of breaking news, exclusive insights, and must-see stories!

Weekend Travel: ಅರಣ್ಯದ ನಡುವಿನ ಬೇಲದಕುಪ್ಪೆಯಲ್ಲಿ ಜಾತ್ರೆ ಶುರು..ಏನಿದರ ವಿಶೇಷ?

ಮೈಸೂರು, ನವೆಂಬರ್‌ 22: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಡೆ ಕಾರ್ತಿಕ ಮಾಸದ ಹಿನ್ನಲೆಯಲ್ಲಿ ನ.23 ರಿಂದ 26ರವರೆಗೆ ನಾಲ್ಕು ದಿನಗಳ ಕಾಲ ವಿಶೇಷ ಪೂಜೆ, ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ಸಮಾರೋಪಾದಿಯಲ್ಲಿ ಸಾಗುತ್ತಿದ್ದು, ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇನ್ನೊಂದೆಡೆ ಭಕ್ತರು ದೇವರ ದರ್ಶನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ಪ್ರತಿವರ್ಷದಂತೆ ಶ್ರೀ ಕ್ಷೇತ್ರ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಕಾರ್ತಿಕ ಮಾಸದಲ್ಲಿ ನಡೆಯುತ್ತಿದ್ದ ಜಾತ್ರೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳ ತಯಾರಿ ಶುರುವಾಗಿದ್ದು, ಭಕ್ತರು, ಕಾಡು ಪ್ರಾಣಿಗಳು, ಅರಣ್ಯಕ್ಕೆ ಕಿಂಚಿತ್ತು ತೊಂದರೆಯಾಗದಂತೆ ಜಾತ್ರಾ ಮಹೋತ್ಸವವನ್ನು ನಡೆಸಲು ಕೆಲ ನಿರ್ಬಂಧಗಳೊಂದಿಗೆ ಜಿಲ್ಲಾಡಳಿತ ಸಿದ್ಧತೆಯನ್ನು ಕಳೆದೊಂದು ವಾರದಿಂದ ಮಾಡುತ್ತಾ ಬರುತ್ತಿದೆ.

Travel News The Fair Begins In Bandipur Beladakuppe Sri Mahadeshwara Swamy Temple

ಈಗಾಗಲೇ ದೇವಸ್ಥಾನ ಸಮಿತಿಯು ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಆವರಣ ಸ್ವಚ್ಛಗೊಳಿಸಿ ಸುಣ್ಣ-ಬಣ್ಣ ಬಳಿದು ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು, ಕೊಂಡೋತ್ಸವ ನಡೆಯುವ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ರಥೋತ್ಸವ ದಿನ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಅನ್ನಸಂತರ್ಪಣೆ ನಡೆಸಲು ಹಾಗೂ ಕೊಂಡೋತ್ಸವವನ್ನು ಭಕ್ತರು ಕಣ್ತುಂಬಿಕೊಳ್ಳಲು ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ, ಭಕ್ತರಿಗೆ ದೇವರ ದರ್ಶನಕ್ಕೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟಾರೆ ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.

ಜಾತ್ರಾ ಪ್ರಯುಕ್ತ ವಿವಿಧ ಕಾರ್ಯಕ್ರಮ

ಶ್ರೀಕ್ಷೇತ್ರ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ದೇವಾಲಯದ ವಿಮಾನ ಗೋಪುರ, ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ನ.23ರಂದು ಆಲಯ ಪ್ರವೇಶ, ಗಣಪತಿ ಪೂಜೆ, ಹೋಮ-ಹವನ, ರುದ್ರಾಭಿಷೇಕ ಪಾರಾಯಣ, ನೈವೇದ್ಯ ಮಹಾಮಂಗಳಾರತಿ ಇರಲಿದೆ. ನ.24ರಂದು ಬ್ರಾಹ್ಮಿ ಮುಹೂರ್ತದಲ್ಲಿ ನವರತ್ನನ್ಯಾಸ ವಿಮಾನಕಳಸಸ್ಥಾಪನೆ, ಪ್ರಾಣಪ್ರತಿಷ್ಠೆ, ಪೂರ್ಣಾಹುತಿ ನಂತರ ಮಕರ ಲಗ್ನದಲ್ಲಿ ಮಧ್ಯಾಹ್ನ 12ಕ್ಕೆ ಕುಂಭಾಭಿಷೇಕ, ಮಹಾಮಂಗಳಾರತಿ, ರಾಜೋಪಚಾರ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.

ನ.25ಕ್ಕೆ ಸ್ವಾಮಿ ಅವರಿಗೆ ದೇವಸ್ಥಾನ ಸಮೀಪವಿರುವ ಕೆರೆಯಿಂದ ವಿವಿಧ ಪೂಜೆಗಳನ್ನು ಸಲ್ಲಿಸಿ, ಹಾಲು ಹರವಿ ಸೇವೆ ತೆಗೆದುಕೊಂಡು ದೇವರನ್ನು ದೇವಾಲಯದವರೆಗೂ ಉದ್ಭವಸ್ಥಾನಕ್ಕೆ ಕರೆದೊಯ್ಯಲಾಗುವುದು. ರಾತ್ರಿ ಎಣ್ಣೆಮಜ್ಜನ ಮತ್ತು ಪ್ರಸಾದ ವಿನಯೋಗ ಇರಲಿದೆ. ವೀರಗಾಸೆ ನೃತ್ಯ, ಪೂಜಾ ಕುಣಿತ, ಕೋಲಾಟ, ಕಂಸಾಳೆ ರಸ್ತೆಯ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ. ನಂತರ ಕೊಂಡೋತ್ಸವ ಇರಲಿದೆ. 26ಕ್ಕೆ ರುದ್ರಾಕ್ಷಿ ಮಂಟಪ, ಹುಲಿ ವಾಹನ, ನಂದಿಧ್ವಜದೊಂದಿಗೆ ರಥೋತ್ಸವ ಇರಲಿದೆ. ಜಾತ್ರೆಯ ಆರಂಭದ ದಿನವಾದ ನ.23ರಂದು ಪಾನಕ ಪೂಜೆ ಹಾಗೂ ಸಂಜೆ 5ಕ್ಕೆ ವಿವಿಧ ಕಲಾತಂಡಗಳೊಂದಿಗೆ ದೇವರ ಮೆರವಣಿಗೆ ಜರುಗಲಿದೆ.

Travel News The Fair Begins In Bandipur Beladakuppe Sri Mahadeshwara Swamy Temple

ಬಿಗಿಪೊಲೀಸ್ ಬಂದೋಬಸ್ತ್ ವ್ಯವಸ್ಥೆ

ಜಾತ್ರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸರಗೂರು ಪೊಲೀಸ್ ವೃತ್ತ ನಿರೀಕ್ಷಕ ಎಂ.ಲಕ್ಷ್ಮಿಕಾಂತ್, ಉಪ ನಿರೀಕ್ಷಕ ನಂದೀಶ್ ಕುಮಾರ್ ನೇತೃತ್ವದಲ್ಲಿ ಭದ್ರತೆಯಿಂದಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದೆ. ನಂಜನಗೂಡು ತಾಲೂಕಿನ ಹೆಡಿಯಾಲದಿಂದ ಹಾದನೂರು ಮಾರ್ಗವಾಗಿ ದೇವಾಲಯದವರೆಗೆ ಹಾಗೂ ದೇವಸ್ಥಾನ ಆವರಣದ ಸುತ್ತ ಬ್ಯಾರಿಕೇಡ್ ಗಳನ್ನು ಇರಿಸಿ ವಾಹನ ಹಾಗೂ ಸಾರ್ವಜನಿಕರ ಸುಗಮ ಓಡಾಟಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಇದಲ್ಲದೆ ಭಕ್ತರು ದೇವಸ್ಥಾನಕ್ಕೆ ಹೋಗಿ ಬರಲು ಕೆಎಸ್ ಆರ್ ಟಿಸಿಯಿಂದ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿದೆ. ದ್ವಿಚಕ್ರ ವಾಹನಗಳು, ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ ಹಿನ್ನೆಲೆಯಲ್ಲಿ 80ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜಿಸಲಾಗಿದೆ. ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಗುಂಡ್ಲುಪೇಟೆ ತಾಲೂಕಿನಿಂದ ಭಕ್ತರು ಬಸ್ ನಲ್ಲಿ ಬರಬಹುದು. ಇದರೊಂದಿಗೆ ಅರಣ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಅರಳಹಳ್ಳಿ ಗ್ರಾಮದ ಜಮೀನಿನಲ್ಲಿ 8ಎಕರೆ ಜಾಗದಲ್ಲಿ ದ್ವಿಚಕ್ರ, ಖಾಸಗಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ತಿಂಡಿ ಅಂಗಡಿಗಳಿಗೂ ವ್ಯವಸ್ಥೆ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+