ರಾಮನಗರದ ಬಳಿ ಏಕಾಏಕಿ ಬೇರ್ಪಟ್ಟ ರೈಲು ಬೋಗಿ, ರೈಲ್ವೆ ಅಧಿಕಾರಿಗಳು ಹೇಳಿದ್ದೇನು?, ಇಲ್ಲಿದೆ ವಿವರ
ರಾಮನಗರ, ಏಪ್ರಿಲ್, 24: ಭಾನುವಾರ (ಏಪ್ರಿಲ್ 23) ಮೈಸೂರು-ತೂತುಕುಡಿ ಎಕ್ಸ್ಪ್ರೆಸ್ (16236) ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ರಾಮನಗರ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ವೇಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕೋಚ್ಗಳು ಬೇರ್ಪಟ್ಟ ಕಾರಣ ಆತಂಕಕ್ಕೆ ಒಳಗಾಗಿದ್ದು, ಸದ್ಯ ಪ್ರಯಾಣಿಕರಿಗೆ ಯಾವುದೆ ಸಮಸ್ಯೆಗಳು ಆಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
Emergency @RailMinIndia .
— Shrijith V (@shrijith_v) April 23, 2023
Train number 16236 Mysuru to TutiCorin train coaches are detached near Ramanagar station.
I don't see any officials here. Is it going to be repaired or pasngr should switch to other train.This is a Major incident & there is no one to tell anything. pic.twitter.com/pt9hpvzyfF
ಬೆಂಗಳೂರು ಕಡೆಗೆ ಹೊರಟಿದ್ದ ಈ ರೈಲು ರಾತ್ರಿ 8 ಗಂಟೆ ಸುಮಾರಿಗೆ ರಾಮನಗರ ನಿಲ್ದಾಣ ತಲುಪಿತು. ಆಗ ಕೋಚ್ಗಳು ಬೇರ್ಪಟ್ಟ ವಿಷಯ ಗಮನಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿ ಹಿಂದೂ ವರದಿ ಮಾಡಿದ ಪ್ರಕಾರ ಕಪ್ಲಿಂಗ್ ಮುರಿದ ನಂತರ, ಕೋಚ್ ಸಂಖ್ಯೆ 5 ಮತ್ತು 6 ಅನ್ನು ಪ್ರತ್ಯೇಕಿಸಲಾಗಿದೆ. ಘಟನೆಯ ನಂತರ ಬೆಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ಹಂಪಿ ಎಕ್ಸ್ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ಪ್ರೆಸ್ನಲ್ಲಿ ವಸತಿ ಕಲ್ಪಿಸಲಾಗಿದೆ. ತೂತುಕುಡಿಗೆ ಟಿಕೆಟ್ ಕಾಯ್ದಿರಿಸಿದವರನ್ನು ಅಗತ್ಯ ದುರಸ್ತಿ ಕಾರ್ಯದ ನಂತರ ಅದೇ ರೈಲಿನಲ್ಲಿ ಕಳುಹಿಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೆ ಈ ಘಟನೆಯು ಬೆಂಗಳೂರು-ಮೈಸೂರು ವಿಭಾಗದಲ್ಲಿ ರೈಲು ಸಂಚಾರದ ಮೇಲೆ ಪರಿಣಾಮ ಬೀರಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ, ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ರೈಲು ಮೈಸೂರಿನಿಂದ ಬೆಂಗಳೂರು ಕಡೆಗೆ ಬರುತ್ತಿತ್ತು.
ಆಗ ಅಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಕಂಡುಬಂದಿದ್ದು, ಅದನ್ನು ರಾಮನಗರದಲ್ಲಿ ಬೇರ್ಪಡಿಸಲಾಗಿದೆ. ನಿಗದಿತ ತಪಾಸಣೆಯ ಸಮಯದಲ್ಲಿ, ನಾವು ಕೋಚ್ನಲ್ಲಿ ಸಮಸ್ಯೆಯನ್ನು ಕಂಡುಕೊಂಡಿದ್ದೇವೆ. ಮತ್ತು ಸೈಟ್ನಲ್ಲಿನ ಎಂಜಿನಿಯರ್ಗಳು ಸಮಸ್ಯೆಯನ್ನು ಸರಿಪಡಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡರು. ಅಲ್ಲದೆ ನಿಗದಿತ ಸ್ಥಳಗಳಿಗೆ ಪ್ರಯಾಣಿಕರನ್ನು ಕಳುಹಿಸುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಕೋಚ್ನಲ್ಲಿನ ಸಮಸ್ಯೆಗಳನ್ನು ನಾವು ಪರಿಶೀಲಿಸಿದ್ದೇನೆ ಎಂದು ತಿಳಿಸಿದ್ದಾರೆ.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications