ರಾಮನಗರದ ಬಳಿ ಏಕಾಏಕಿ ಬೇರ್ಪಟ್ಟ ರೈಲು ಬೋಗಿ, ರೈಲ್ವೆ ಅಧಿಕಾರಿಗಳು ಹೇಳಿದ್ದೇನು?, ಇಲ್ಲಿದೆ ವಿವರ
ರಾಮನಗರ, ಏಪ್ರಿಲ್, 24: ಭಾನುವಾರ (ಏಪ್ರಿಲ್ 23) ಮೈಸೂರು-ತೂತುಕುಡಿ ಎಕ್ಸ್ಪ್ರೆಸ್ (16236) ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ರಾಮನಗರ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ವೇಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕೋಚ್ಗಳು ಬೇರ್ಪಟ್ಟ ಕಾರಣ ಆತಂಕಕ್ಕೆ ಒಳಗಾಗಿದ್ದು, ಸದ್ಯ ಪ್ರಯಾಣಿಕರಿಗೆ ಯಾವುದೆ ಸಮಸ್ಯೆಗಳು ಆಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
Emergency @RailMinIndia .
— Shrijith V (@shrijith_v) April 23, 2023
Train number 16236 Mysuru to TutiCorin train coaches are detached near Ramanagar station.
I don't see any officials here. Is it going to be repaired or pasngr should switch to other train.This is a Major incident & there is no one to tell anything. pic.twitter.com/pt9hpvzyfF
ಬೆಂಗಳೂರು ಕಡೆಗೆ ಹೊರಟಿದ್ದ ಈ ರೈಲು ರಾತ್ರಿ 8 ಗಂಟೆ ಸುಮಾರಿಗೆ ರಾಮನಗರ ನಿಲ್ದಾಣ ತಲುಪಿತು. ಆಗ ಕೋಚ್ಗಳು ಬೇರ್ಪಟ್ಟ ವಿಷಯ ಗಮನಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿ ಹಿಂದೂ ವರದಿ ಮಾಡಿದ ಪ್ರಕಾರ ಕಪ್ಲಿಂಗ್ ಮುರಿದ ನಂತರ, ಕೋಚ್ ಸಂಖ್ಯೆ 5 ಮತ್ತು 6 ಅನ್ನು ಪ್ರತ್ಯೇಕಿಸಲಾಗಿದೆ. ಘಟನೆಯ ನಂತರ ಬೆಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ಹಂಪಿ ಎಕ್ಸ್ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ಪ್ರೆಸ್ನಲ್ಲಿ ವಸತಿ ಕಲ್ಪಿಸಲಾಗಿದೆ. ತೂತುಕುಡಿಗೆ ಟಿಕೆಟ್ ಕಾಯ್ದಿರಿಸಿದವರನ್ನು ಅಗತ್ಯ ದುರಸ್ತಿ ಕಾರ್ಯದ ನಂತರ ಅದೇ ರೈಲಿನಲ್ಲಿ ಕಳುಹಿಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೆ ಈ ಘಟನೆಯು ಬೆಂಗಳೂರು-ಮೈಸೂರು ವಿಭಾಗದಲ್ಲಿ ರೈಲು ಸಂಚಾರದ ಮೇಲೆ ಪರಿಣಾಮ ಬೀರಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ, ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ರೈಲು ಮೈಸೂರಿನಿಂದ ಬೆಂಗಳೂರು ಕಡೆಗೆ ಬರುತ್ತಿತ್ತು.
ಆಗ ಅಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಕಂಡುಬಂದಿದ್ದು, ಅದನ್ನು ರಾಮನಗರದಲ್ಲಿ ಬೇರ್ಪಡಿಸಲಾಗಿದೆ. ನಿಗದಿತ ತಪಾಸಣೆಯ ಸಮಯದಲ್ಲಿ, ನಾವು ಕೋಚ್ನಲ್ಲಿ ಸಮಸ್ಯೆಯನ್ನು ಕಂಡುಕೊಂಡಿದ್ದೇವೆ. ಮತ್ತು ಸೈಟ್ನಲ್ಲಿನ ಎಂಜಿನಿಯರ್ಗಳು ಸಮಸ್ಯೆಯನ್ನು ಸರಿಪಡಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡರು. ಅಲ್ಲದೆ ನಿಗದಿತ ಸ್ಥಳಗಳಿಗೆ ಪ್ರಯಾಣಿಕರನ್ನು ಕಳುಹಿಸುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಕೋಚ್ನಲ್ಲಿನ ಸಮಸ್ಯೆಗಳನ್ನು ನಾವು ಪರಿಶೀಲಿಸಿದ್ದೇನೆ ಎಂದು ತಿಳಿಸಿದ್ದಾರೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications