Underwater metro tunnel: ದೇಶದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಉದ್ಘಾಟನೆಗೆ ಮುಹೂರ್ತ ನಿಗದಿ, ನಿರ್ಮಾಣದ ವೆಚ್ಚ ಎಷ್ಟು?
ಕೊಲ್ಕತ್ತಾ, ಮಾರ್ಚ್, 04: ದೇಶದಲ್ಲಿ ಸಾರಿಗೆ ವಿಭಾಗಗಳಾದ, ಮೆಟ್ರೋ, ರೈಲುಗಳ ವಿಭಾಗಗಳಲ್ಲಿ ದೊಡ್ಡ ದೊಡ್ಡ ಬದಲಾವಣೆಗಳು ಆಗುತ್ತಲಿವೆ. ಇನ್ನು ಕೋಲ್ಕತ್ತಾದಲ್ಲಿ ನಿರ್ಮಿಸಿರುವ ದೇಶದ ಮೊದಲ ನದಿಯೊಳಗಿನ ಮೆಟ್ರೋ ಸುರಂಗವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 6ರಂದು ಉದ್ಘಾಟನೆ ಮಾಡಲಿದ್ದಾರೆ. ಹಾಗಾದರೆ ಇದಕ್ಕೆ ತಗುಲಿವ ವೆಚ್ಚ ಹಾಗೂ ವಿಶೇಷತೆಗಳನ್ನು ಇಲ್ಲಿ ತಿಳಿಯಿರಿ.
ಹೋಗ್ಲಿ ನದಿಯಡಿಯಲ್ಲಿ ನಿರ್ಮಿಸಿರುವ ಸುರಂಗವು ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಮೊಟ್ರೋ ಕಾರಿಡಾರ್ನ ಭಾಗ ಆಗಿದೆ. ಇದು ಹೌರಾ ಮೈದಾನದಿಂದ ಎಸ್ಪ್ಲೇನೇಡ್ಗೆ ಸಂಪರ್ಕಿಸುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅದೇ ದಿನ ಕೋಲ್ಕತ್ತಾ ಮೆಟ್ರೋದ ಕವಿ ಸುಭಾಷ್-ಹೇಮಂತ ಉಖ್ಯೋಪಾಧ್ಯಾಯ ಮತ್ತು ತಾರಾತಲಾ-ಮಜೆರ್ಹತ್ ವಿಭಾಗಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ವಿಭಾಗಗಳನ್ನು ರಸ್ತೆ ದಟ್ಟಣೆಯನ್ನು ನಿವಾರಿಸಲು ಮತ್ತು ತಡೆರಹಿತ, ಸುಲಭ ಮತ್ತು ಆರಾಮದಾಯಕ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿವೆ.
ಹೌರಾ ಮೈದಾನ್-ಲಸ್ಪ್ಲಾನೇಡ್ ಮೆಟ್ರೋ ಮಾರ್ಗವು ಭಾರತದ ಯಾವುದೇ ಪ್ರಬಲ ನದಿಯ ಅಡಿಯಲ್ಲಿ ಮೊದಲ ಸಾರಿಗೆ ಸುರಂಗವನ್ನು ಹೊಂದಿದೆ. ಆದರೆ ಹೌರಾ ಮೆಟ್ರೋ ನಿಲ್ದಾಣವು ದೇಶದಲ್ಲೇ ಅತ್ಯಂತ ಆಳವಾದದ್ದು (33-ಮೀಟರ್ ಮೇಲ್ಮೈ ಕೆಳಗೆ) ಎಂದು ತಿಳಿದುಬಂದಿದ್ದು, ಮೆಟ್ರೋ 45 ಸೆಕೆಂಡುಗಳಲ್ಲಿ ಹೂಗ್ಲಿ ನದಿಯಡಿಯಲ್ಲಿ 520 ಮೀಟರ್ ವ್ಯಾಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಜೆರ್ಹತ್ ಮೆಟ್ರೋ ನಿಲ್ದಾಣವು ವಿಶಿಷ್ಟವಾಗಿ ಎತ್ತರಿಸಿದ ಮೆಟ್ರೋ ನಿಲ್ದಾಣ ಇದಾಗಿದೆ. ಇದು ಕಾಲುವೆಯನ್ನು ಸಹ ಒಳಗೊಂಡಿರುತ್ತದೆ. ಕೋಲ್ಕತ್ತಾ ಮೆಟ್ರೋ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೌಸಿಕ್ ಮಿತ್ರಾ ಮಾತಮಾಡಿ, "ಪ್ರಧಾನಿ ಮೋದಿ ಅವರು ಕೋಲ್ಕತ್ತಾದ ಜನರಿಗೆ ನೀಡಿದ ಉಡುಗೊರೆ ಇದು. ಈ ಉದ್ಘಾಟನೆಯೊಂದಿಗೆ ಬಹುಕಾಲದ ಕನಸು ನನಸಾಗಲಿದೆ," ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.
-
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ












Click it and Unblock the Notifications