Vande Bharat Express: ಚೈನ್ನೈ-ಮೈಸೂರು ಮಾರ್ಗದಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಅದ್ಭುತ ವಿಡಿಯೋ ವೈರಲ್
ಕರ್ನಾಟಕ, ಮಾರ್ಚ್, 26: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ದಿನದಂದ ದಿನಕ್ಕೆ ಪ್ರಸಿದ್ಧಿಯನ್ನು ಪಡೆಯುತ್ತಲೇ ಇದೆ. ಇದು ಹೈಸ್ಪೀಡ್ ರೈಲಾಗಿದ್ದು, ಭಾರಿ ಜನಮನ್ನಣೆಯನ್ನೂ ಪಡೆದಿದೆ. ವಿಶ್ವದರ್ಜೆಯ ಸೌಲಭ್ಯಗಳನ್ನು ಹೊಂದಿರುವ ಈ ರೈಲು ವೇಗವಾಗಿ ಚಲಿಸುವ ಮೂಲಕ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಇದರಿಂದ ಜನರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ವಂದೇ ಭಾರತ್ ರೈಲಿನಲ್ಲೇ ಪ್ರಯಾಣ ಮಾಡಲು ಇಷ್ಟಪಡುತ್ತಿದ್ದಾರೆ.
ಅಷ್ಟೇ ಅಲ್ಲದೆ ಇದು ಭಾರತೀಯ ರೈಲ್ವೇಯಿಂದ ಇದು ಪ್ರಾರಂಭವಾಗಿದೆ. ಆಗಿನಿಂದ ಈ ರೈಲು ಭಾರತದಲ್ಲಿ ಪ್ರಸಿದ್ಧಿ ಎನ್ನುವ ಸ್ಥಾನಮಾನವನ್ನು ಗಿಟ್ಟಿಸಿಕೊಂಡಿದೆ. ಅದೇ ರೀತಿ ಭಾರತೀಯ ಭೂದೃಶ್ಯದ ಉದ್ದ ಮತ್ತು ಅಗಲದಲ್ಲಿ ಹಾದುಹೋಗುವ ಬಿಳಿ ಬಣ್ಣದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ನೋಡಲು ಸಾಮಾನ್ಯ ಜನರು ಸಾಕಷ್ಟು ಕಾತರದಿಂದ ಕಾಯುತ್ತಿರುತ್ತಾರೆ.

ವಂದೇ ಭಾರತ್ ಎಕ್ಸ್ಪ್ರೆಸ್ನ ವಿಡಿಯೋ ವೈರಲ್
ಆದ್ದರಿಂದ ಭಾರತೀಯ ರೈಲ್ವೆಯ ವಿಭಾಗವಾದ ದಕ್ಷಿಣ ರೈಲ್ವೆಯು ಚೆನ್ನೈ-ಮೈಸೂರು ಮಾರ್ಗದ ನಡುವೆ ಚಲಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸುಂದರವಾದ ವೀಡಿಯೊವನ್ನು ಹಂಚಿಕೊಂಡಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಜನರು ಇದಕ್ಕೆ ಭಾರಿ ಮೆಚ್ಚುಗೆಯನ್ನು ಸಹ ವ್ಯಕ್ತಪಡಿಸುತ್ತಿದ್ದಾರೆ.
ಚೆನ್ನೈ-ಮೈಸೂರು ಮಾರ್ಗದಲ್ಲಿ ಸಂಚಾರ
ಚೆನ್ನೈ-ಮೈಸೂರು ಮಾರ್ಗದ ಮಧ್ಯೆ ಚಲಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ವಿಡಿಯೋವನ್ನು ದಕ್ಷಿಣ ರೈಲ್ವೆಯು ತನ್ನ ಟ್ವಿಟರ್ನಲ್ಲಿ ಹಂಚಿಕೊಂಡಿದೆ. ಇದು 130 kmph ವೇಗದಲ್ಲಿ ಕಾರ್ಯಾಚರಣೆ ಮಾಡುತ್ತದೆ. ಈ ವೇಗದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಂಚಾರ ಮಾಡುವ ದೃಶ್ಯವನ್ನು ನೋಡಲು ಹಲವಾರು ಜನರು ಕಾಯುತ್ತಿದ್ದರು. ಇದೀಗ ರೈಲ್ವೆ ಇಲಾಖೆ ಹಂಚಿಕೊಂಡ ವಿಡಿಯೋಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
#VandeBharatExpress - Redefining passenger experience with its state-of-the-art facilities, speed, striking design and enhanced safety features!
— Southern Railway (@GMSRailway) March 24, 2023
Take a look at the beautiful visuals of Chennai - Mysuru #Vande Bharat Express cruising past a picturesque stretch pic.twitter.com/JhgNu8pPF3
ವಂದೇ ಭಾರತ್ ಎಕ್ಸ್ಪ್ರೆಸ್ ಭಾರತೀಯ ರೈಲ್ವೆಯಿಂದ ಆರಂಭವಾದ ಎಲೆಕ್ಟ್ರಿಕ್ ಮಲ್ಟಿಪಲ್-ಯೂನಿಟ್, ಅರೆ-ಹೈ-ಸ್ಪೀಡ್ ಇಂಟರ್ಸಿಟಿ ರೈಲಾಗಿದೆ. ವಂದೇ ಭಾರತ್ ರೈಲುಗಳ ಸ್ಲೀಪರ್ ಆವೃತ್ತಿಯನ್ನು 220 kmph ವೇಗದಲ್ಲಿ ಭಾರತೀಯ ರೈಲ್ವೆ ಅಭಿವೃದ್ಧಿಪಡಿಸುತ್ತಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ Wi-Fi ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.
ಹಿಂದಿನ ಆವೃತ್ತಿಯಲ್ಲಿದ್ದ 24 ಇಂಚಿನ ಸ್ಕ್ರೀನ್ಗಳಿಗೆ ಹೋಲಿಸಿದರೆ, ಈಗಿನ ಪ್ರತಿ ಕೋಚ್ನಲ್ಲಿ 32-ಇಂಚಿನ ಸ್ಕ್ರೀನ್ಗಳು ಪ್ರಯಾಣಿಕರಿಗೆ ಸೂಕ್ತ ಮಾಹಿತಿಯನ್ನು ಒದಗಿಸುತ್ತದೆ. ಈ ಮೂಲಕ ವಂದೇ ಭಾರತ್ ಎಕ್ಸ್ಪ್ರೆಸ್ 2.0 ಪರಿಸರ ಸ್ನೇಹಿಯಾಗಿದೆ.

ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರದ ಮಾರ್ಗಗಳು
1: ನವದೆಹಲಿ - ವಾರಣಾಸಿ
2. ನವದೆಹಲಿ - ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ (ಜೆ&ಕೆ)
3. ಗಾಂಧಿನಗರ ಮತ್ತು ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್
4. ನವದೆಹಲಿ- ಹಿಮಾಚಲ ಪ್ರದೇಶ (ಅಂಬ್ ಅಂಡೌರಾ)
5. ಚೆನ್ನೈ-ಮೈಸೂರು
6. ನಾಗ್ಪುರ-ಬಿಲಾಸ್ಪುರ್
7. ಹೌರಾ - ಹೊಸ ಜಲ್ಪೈಗುರಿ
8: ಸಿಕಂದರಾಬಾದ್-ವಿಶಾಖಪಟ್ಟಣಂ
9. ಮುಂಬೈ-ಸಾಯಿನಗರ ಶಿರಡಿ
10: ಮುಂಬೈ-ಸೋಲಾಪುರ
ಮುಂಬೈ-ಗೋವಾ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚಾರ
ಇನ್ನು ಮುಂಬೈ-ಗೋವಾ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ರಾವ್ಸಾಹೇಬ್ ದಾನ್ವೆ ಮಹಾರಾಷ್ಟ್ರದ ಶಾಸಕರ ನಿಯೋಗಕ್ಕೆ ಇತ್ತೀಚೆಗಷ್ಟೇ ತಿಳಿಸಿದ್ದರು.
ಕೊಂಕಣ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುವ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯ ನಿರಂಜನ್ ದಾವ್ಖರೆ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದನ್ವೆ ಅವರನ್ನು ಇತ್ತೀಚೆಗಷ್ಟೇ ಶಾಸಕರ ನಿಯೋಗ ಭೇಟಿ ಮಾಡಿದ್ದು, ಬಳಿಕ ನಡೆದ ಸಭೆಯಲ್ಲಿ ಮುಂಬೈ ಮತ್ತು ಗೋವಾ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬಿಡಲಾಗುವುದು ಎಂದು ಕೇಂದ್ರ ಸಚಿವರು ಗುಂಪಿಗೆ ತಿಳಿಸಿದರು ಎಂದು ದಾವ್ಖರೆ ಪ್ರಕಟಣೆಯಲ್ಲಿ ತಿಳಿಸಿದ್ದರು.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮುಂಬೈ-ಶಿರಡಿ ಮತ್ತು ಮುಂಬೈ-ಸೋಲಾಪುರ ಮಾರ್ಗಗಳಲ್ಲಿ ಇತ್ತೀಚೆಗೆ ಪರಿಚಯಿಸಲಾಗಿದೆ. ಈಗ ಮುಂಬೈ ಮತ್ತು ಗೋವಾ ನಡುವೆ ಚಾಲನೆ ಮಾಡಲಾಗುವುದು ಎಂದು ದಾನ್ವೆ ಹೇಳಿದ್ದರು. ಮುಂಬೈ-ಗೋವಾ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಪೂರ್ಣಗೊಂಡಿದ್ದು, ಪರಿಶೀಲನೆಯ ನಂತರ ಹೊಸ ರೈಲು ಸೇವೆಯನ್ನು ಆರಂಭಿಸಲಾಗುವುದು ಎಂದು ಸಚಿವರು ನಿಯೋಗಕ್ಕೆ ತಿಳಿಸಿದ್ದರು.
-
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications