Vande Bharat Express: ರಾಂಚಿ-ಪಾಟ್ನಾ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ, ಇಲ್ಲಿದೆ ವಿವರ
ನವದೆಹಲಿ, ಏಪ್ರಿಲ್, 28: ರಾಂಚಿ ಮತ್ತು ಪಾಟ್ನಾ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರ ಆರಂಭಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಎಕ್ಸ್ಪ್ರೆಸ್ ರೈಲು ಪಾಟ್ನಾ ಮತ್ತು ರಾಂಚಿ ನಡುವಿನ ಪ್ರಯಾಣದ ಸಮಯವನ್ನು ಎರಡು ಗಂಟೆಗಳಷ್ಟು ಕಡಿಮೆ ಮಾಡುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ ಇಲ್ಲಿ ಕೆಲವು ತಾಂತ್ರಿಕ ಸವಾಲುಗಳಿಂದ ರೈಲಿನ ಸಂಚಾರವನ್ನು ಮುಂದೂಡಲಾಗಿತ್ತು. ಈ ರೈಲು ಸೇವೆಗೆ ಏಪ್ರಿಲ್ 25ರಂದು ಚಾಲನೆ ದೊರೆಯಲಿದೆ ಎಂದು ಊಹಿಸಲಾಗಿತ್ತು. ಆದರೆ ಇದೀಗ ಈ ಉದ್ಘಾಟನಾ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ದಿನಾಂಕವನ್ನು ಬಿಡುಗಡೆ ಮಾಡುವ ಸಾಧ್ಯೆತೆ ಇದೆ ಎನ್ನಲಾಗಿದೆ.

ಈ ಮಾರ್ಗದಲ್ಲಿನ ರೈಲು ಕಾರ್ಯಾಚರಣೆಯ ಜವಾಬ್ದಾರಿಯನ್ನು ದಕ್ಷಿಣ ಮಧ್ಯ ರೈಲ್ವೆಗೆ ವಹಿಸಲಾಗಿದೆ. ಲೊಕೊ ಪೈಲಟ್ಗಳು ಮತ್ತು ಸಿಬ್ಬಂದಿಗಳ ತರಬೇತಿ ಈಗಾಗಲೇ ನಡೆಯುತ್ತಿದೆ. ಹಾಗೆಯೆ ಪಾಟ್ನಾ-ಗಯಾ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಗಂಟೆಗೆ 100 ರಿಂದ 110 ಕಿಲೋಮೀಟರ್ ವೇಗದಲ್ಲಿ ಓಡುವ ನಿರೀಕ್ಷೆಯಿದೆ.
ಪಾಟ್ನಾ-ರಾಂಚಿ ವಂದೇ ಭಾರತ್ ಎಕ್ಸ್ಪ್ರೆಸ್ ವಿವರಗಳು
1. ಪ್ರಯಾಣಿಕರು ರಾಂಚಿ ಮತ್ತು ಪಾಟ್ನಾ ನಡುವೆ ಕೇವಲ ಗಂಟೆಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.
2. ಈ ಮಾರ್ಗದಲ್ಲಿ ರೈಲು ಗಂಟೆಗೆ 100 ರಿಂದ 110 ಕಿಲೋಮೀಟರ್ ವೇಗದಲ್ಲಿ ಸಂಚರಿಸಲಿದೆ.
3. ರೈಲು ಕಾರ್ಯಾಚರಣೆಯ ದಿನಾಂಕ ಮತ್ತು ದರದ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಬಂದಿಲ್ಲ.
5. ಪಾಟ್ನಾದಿಂದ ರಾಂಚಿಗೆ ಹೋಗುವ ವಂದೇ ಭಾರತ್ ರೈಲು, ಹಜಾರಿಬಾಗ್ ಟೌನ್, ತಟಿಸಿಲ್ವಾಯ್, ಬರ್ಕಾಕಾನಾ, ಕೊಡೆರ್ಮಾ, ಗಯಾ ಮತ್ತು ಜೆಹಾನಾಬಾದ್ನಲ್ಲಿ ನಿಲುಗಡೆ ಆಗಲಿದೆ.
ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್
ಇನ್ನು ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಿರುವನಂತಪುರ ಹಾಗೂ ಕಾಸರಗೋಡು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಇದು ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಾಗಿದೆ.
ವಂದೇ ಭಾರತ್, ತಿರುವನಂತಪುರಂನಿಂದ ಕಾಸರಗೋಡಿಗೆ ಸೆಮಿ ಹೈಸ್ಪೀಡ್ ರೈಲು ಎರಡು ಸ್ಥಳಗಳ ನಡುವಿನ ಅಂತರವನ್ನು ಕೇವಲ ಎಂಟು ಗಂಟೆಗಳಲ್ಲಿ ಕ್ರಮಿಸುತ್ತದೆ. ಇದು ರೈಲು ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳನ್ನು ಹಾದುಹೋಗಲಿದೆ.
ಮೋದಿ ಅವರು ತಿರುವನಂತಪುರ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಕಾರ್ಯಕ್ರಮದ ಭಾಗವಾಗಲು ಉತ್ಸುಕತೆಯನ್ನು ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು "ನಾನು 25ರಂದು ತಿರುವನಂತಪುರಂ ಜನರ ನಡುವೆ ಇರಲು ಉತ್ಸುಕನಾಗಿದ್ದೇನೆ. ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಾಗುವುದು.
ಇದು ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ಓಡಲಿದೆ. ಕೇರಳದ 11 ಜಿಲ್ಲೆಗಳು ವ್ಯಾಪ್ತಿಗೆ ಬರಲಿವೆ. ಇದು ಪ್ರವಾಸೋದ್ಯಮ ಮತ್ತು ವಾಣಿಜ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ಟ್ವೀಟ್ ಮಾಡಿದ್ದರು.
ಇದು ದೇಶದ 16ನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಾಗಿದೆ. ಕಾಸರಗೋಡು - ತಿರುವನಂತಪುರಂ ಸೆಂಟ್ರಲ್ ವಂದೇ ಭಾರತ್ ಎಕ್ಸ್ಪ್ರೆಸ್ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಕಾರ್ಯನಿರ್ವಹಿಸಲಿದ್ದು, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ ಟೌನ್, ತ್ರಿಶೂರ್, ಶೋರನೂರು, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ನಿಲುಗಡೆಯಾಗಲಿದೆ.
ರೈಲು ಸಂಖ್ಯೆ 20633 ಕಾಸರಗೋಡು - ತಿರುವನಂತಪುರಂ ಸೆಂಟ್ರಲ್ - ಕಾಸರಗೋಡು ವಂದೇ ಭಾರತ್ ಎಕ್ಸ್ಪ್ರೆಸ್ (ಗುರುವಾರ ಹೊರತುಪಡಿಸಿ) ಕಾಸರಗೋಡಿನಿಂದ 14.30 ಗಂಟೆಗೆ ಮತ್ತು ಏಪ್ರಿಲ್ 26, 2023 ರಿಂದ ಹೊರಡಲಿದ್ದು, ಅದೇ ದಿನ 22.35 ಗಂಟೆಗೆ ತಿರುವನಂತಪುರಂ ಸೆಂಟ್ರಲ್ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ ರೈಲು ಸಂಖ್ಯೆ 20634 ತಿರುವನಂತಪುರಂ ಸೆಂಟ್ರಲ್ - ಕಾಸರಗೋಡು ವಂದೇ ಭಾರತ್ ಎಕ್ಸ್ಪ್ರೆಸ್ (ಗುರುವಾರ ಹೊರತುಪಡಿಸಿ) ತಿರುವನಂತಪುರಂ ಸೆಂಟ್ರಲ್ನಿಂದ 28 ಏಪ್ರಿಲ್ 2023 ರಂದು ಮತ್ತು 05.20 ಗಂಟೆಗೆ ಹೊರಡಲಿದ್ದು, ಅದೇ ದಿನ 13.25 ಗಂಟೆಗೆ ಕಾಸರಗೋಡು ತಲುಪಲಿದೆ.
ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ಗಾಗಿ ರಚಿಸಲಾದ ವೇಳಾಪಟ್ಟಿಯ ಪ್ರಕಾರ, ಇದು ಕಾಸರಗೋಡು ಮತ್ತು ತಿರುವನಂತಪುರಂ ಸೆಂಟ್ರಲ್ ನಡುವಿನ ಅಂತರವನ್ನು 8 ಗಂಟೆ 05 ನಿಮಿಷಗಳಲ್ಲಿ ಕ್ರಮಿಸುತ್ತದೆ, ಇದು ರಾಜಧಾನಿ ಎಕ್ಸ್ಪ್ರೆಸ್ಗಿಂತ ವೇಗವಾಗಿರುತ್ತದೆ, ಇದು ಸುಮಾರು 10 ಗಂಟೆ 45 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು











Click it and Unblock the Notifications