Vande Bharat Train: 19 ಹೊಸ ಮಾರ್ಗಗಳಲ್ಲಿ ವಂದೇ ಭಾರತ್ ರೈಲು ಸಂಚಾರ; ಎಲ್ಲೆಲ್ಲಿಗೆ?-ಮಾಹಿತಿ, ವಿವರ
Vande Bharat Train: ಈಗಾಗಲೇ ದೇಶಾದ್ಯಂತ ವಂದೇ ಭಾರತ್ ರೈಲು ಸಂಚಾರ ಆರಂಭಿಸಿದೆ. ಇನ್ನು ಆಗ್ನೇಯ ರೈಲ್ವೆ ವಲಯವು ನಾಲ್ಕು ರಾಜ್ಯಗಳ 19 ಹೊಸ ಮಾರ್ಗಗಳಲ್ಲಿ ಶೀಘ್ರದಲ್ಲೇ ವಂದೇ ಭಾರತ್ ರೈಲು ಓಡಿಸಲು ಮುಂದಾಗಿದೆ. ಹಾಗಾದರೆ ಯಾವ್ಯಾವ ಮಾರ್ಗಗಳಲ್ಲಿ, ಯಾವಾಗ ಸಂಚಾರ ಆರಂಭವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದ ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲು ಓಡಿಸಲು ರೈಲ್ವೆ ಇಲಾಖೆ ಈಗಾಗಲೇ ಸಮೀಕ್ಷೆ ನಡೆಸಿದೆ. ಟಾಟಾನಗರದಿಂದ ಗಯಾ, ಹೌರಾ, ಧನ್ಬಾದ್ ಮಾರ್ಗವಾಗಿ ವಂದೇ ಭಾರತ್ ರೈಲು ಓಡಿಸುವ ಯೋಜನೆ ಇದಾಗಿದೆ. ಇನ್ನು ಪ್ರಯಾಣಿಕರು ಆಧುನಿಕ ಸೌಲಭ್ಯಗಳೊಂದಿಗೆ ಈ ರೈಲುಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.

ಈ ಮಾರ್ಗಗಳಲ್ಲಿ ವಂದೇ ಭಾರತ್ ಸಂಚಾರ: ಪ್ರಸ್ತುತ ವಂದೇ ಭಾರತ್ ರೈಲು ರಾಂಚಿಯಿಂದ ಹೌರಾಕ್ಕೆ ಟಾಟಾನಗರ ನಿಲ್ದಾಣದ ಮೂಲಕ ಚಲಿಸುತ್ತದೆ. ಇದರಲ್ಲಿ ಹೆಚ್ಚಿನ ಆಸನಗಳು ಟಾಟಾನಗರದಿಂದ ಬುಕ್ ಆಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೊಸ ಯೋಜನೆಯಡಿ, ವಂದೇ ಭಾರತ್ ರೈಲು ರಾಂಚಿ, ಬೊಕಾರೊ, ರೂರ್ಕೆಲಾ, ಟೋರಿ, ಅಸನ್ಸೋಲ್ ಮತ್ತು ಖರಗ್ಪುರದಿಂದ ದಿಘಾ, ಬಾಲಸೋರ್ ಮತ್ತು ಇತರ ಮಾರ್ಗಗಳಲ್ಲಿ ಸಂಚಾರ ಮಾಡಲಿದೆ.
ಪ್ರವಾಸೋದ್ಯಮಕ್ಕೆ ಉತ್ತೇಜನ: ರೈಲ್ವೇ ಇಲಾಖೆ ಪ್ರಕಾರ, ಪ್ರಯಾಣಿಕರ ಬೇಡಿಕೆಯ ಮೇರೆಗೆ ಹೊಸ ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಿಸುವ ಯೋಜನೆ ಇದ್ದು, ಅಲ್ಲಿ ಶೀಘ್ರದಲ್ಲೇ ಪ್ರಯೋಗಗಳು ನಡೆಯಲಿವೆ. ವಂದೇ ಭಾರತ್ ರೈಲು ಓಡಾಟದಿಂದ ಜಾರ್ಖಂಡ್, ಬಂಗಾಳ ಮತ್ತು ಒಡಿಶಾ ವಲಯಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಉತ್ತೇಜಿಸಿದಂತಾಗುತ್ತದೆ. ಮತ್ತೊಂದೆಡೆ, ರೈಲ್ವೆಯು, ಹೇಳಿದ ಮಾರ್ಗದಲ್ಲಿ ಚಲಿಸುವ ರೈಲುಗಳಲ್ಲಿ ಟಿಕೆಟ್ ಬುಕಿಂಗ್ ಮತ್ತು ಪ್ರಯಾಣಿಕರ ಸಂಖ್ಯೆಯ ಮೇಲೆಯೂ ನಗಾ ಇರಿಸಲಿದೆ.
ಕಳೆದ ಕೆಲವು ವರ್ಷಗಳಲ್ಲಿ ವಂದೇ ಭಾರತ್ ರೈಲುಗಳು ಇಡೀ ದೇಶಾದ್ಯಂತ ಸಂಚಾರ ಆರಂಭಿಸಿದ್ದು, ಉತ್ತಮ ಪ್ರತಿಕ್ರಿಯೆಗಳು ಸಹ ಬಂದಿವೆ. ಇನ್ನು ಅತಿ ವೇಗವಾಗಿ ಓಡುವ ಈ ರೈಲುಗಳು ಜನರ ಪ್ರಯಾಣವನ್ನು ಸುಲಭಗೊಳಿಸುತ್ತಿವೆ. ಕೆಲವು ತಿಂಗಳ ಹಿಂದೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ದೇಶದಲ್ಲಿ 82ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳು ಓಡುತ್ತಿವೆ ಎಂದು ಹೇಳಿದ್ದರು. ಫೆಬ್ರವರಿಯಲ್ಲಿ ಈ ಅಂಕಿಅಂಶವನ್ನು ನೀಡಿದ್ದು, ವಂದೇ ಭಾರತ್ ರೈಲುಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿವೆ ಅಂತಾ ಹೇಳಿದ್ದರು.
-
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ











Click it and Unblock the Notifications