Get Updates
Get notified of breaking news, exclusive insights, and must-see stories!

ವಿಜಯಪುರ-ಮಂಗಳೂರು ರೈಲು ವೇಳಾಪಟ್ಟಿ; ಧರ್ಮಸ್ಥಳ ಭಕ್ತರಿಗೆ ಸಿಹಿಸುದ್ದಿ

ವಿಜಯಪುರ, ಮಾರ್ಚ್ 23: ಭಾರತೀಯ ರೈಲ್ವೆ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯದ ಭಕ್ತರಿಗೆ ಸಿಹಿಸುದ್ದಿ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕ ನಡುವೆ ಸಂಪರ್ಕ ಕಲ್ಪಿಸುವ ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ, ವೇಳಾಪಪಟ್ಟಿಯನ್ನು ಬದಲಾವಣೆ ಮಾಡಿದೆ.

ನೈಋತ್ಯ ರೈಲ್ವೆ ಈ ಕುರಿತು ಆದೇಶವನ್ನು ಹೊರಡಿಸಿದೆ. ರೈಲು ನಂಬರ್ 07377 ವಿಜಯಪುರ (ಬಿಜಾಪುರ)-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು 1/4/2024 ರಿಂದ 30/9/2024ರ ತನಕ ವಿಸ್ತರಣೆ ಮಾಡಲಾಗಿದೆ.

Vijayapura Mangaluru Junction Train Extended Schedule Change

ರೈಲು ನಂಬರ್ 07378. ಮಂಗಳೂರು ಜಂಕ್ಷನ್-ವಿಜಯಪುರ (ಬಿಜಾಪುರ) ರೈಲನ್ನು 2/4/2024 ರಿಂದ 1/10/2024ರ ತನಕ ವಿಸ್ತರಣೆ ಮಾಡಲಾಗಿದೆ. ಈಗಿರುವ ನಿಲ್ದಾಣ, ಬೋಗಿಗಳ ಸಂಯೋಜನೆ, ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.

20223ರ ಡಿಸೆಂಬರ್‌ನಲ್ಲಿ ವಿಜಯಪುರ-ಮಂಗಳೂರು ಜಂಕ್ಷನ್ ರೈಲನ್ನು ವಿಸ್ತರಣೆ ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿತ್ತು. ರೈಲು ನಂಬರ್ 07377 1/1/2024 ರಿಂದ 31/3/2024ರ ತನಕ ಮತ್ತು ರೈಲು ನಂಬರ್ 07378 2/1/2024 ರಿಂದ 1/4/2024ರ ತನಕ ವಿಸ್ತರಣೆ ಮಾಡಲಾಗಿತ್ತು. ಈಗ ಪುನಃ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ.

ವೇಳಾಪಟ್ಟಿ ಬದಲು: ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿಯನ್ನು ವಿಜಯಪುರದಿಂದ ಹೊರಡುವಾಗ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ವಿಜಯಪುರಿಂದ ಹೊರಡುವ ರೈಲು ಮಂಗಳೂರಿಗೆ 9.30ಕ್ಕೆ ತಲುಪಲಿದೆ. ಇದರಿಂದಾಗಿ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವವರಿಗೆ, ಆರೋಗ್ಯ ಸೇವೆ ಪಡೆಯಲು ಬರುವವರಿಗೆ ಉಪಯೋಗವಾಗಲಿದೆ.

ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಕಾಯಂಗೊಳಿಸಬೇಕು ಎಂಬ ಪ್ರಯಾಣಿಕರು, ಜನಪ್ರತಿನಿಧಿಗಳ ಬೇಡಿಕೆಗೆ ಈ ಬಾರಿಯೂ ಸಹ ರೈಲ್ವೆ ಇಲಾಖೆ ಮನ್ನಣೆ ನೀಡದಿರುವುದು ಬೇಸರದ ಸಂಗತಿಯಾಗಿದೆ.

ಪ್ರತಿದಿನ ಸಂಚಾರ ನಡೆಸುವ ಈ ವಿಶೇಷ ಎಕ್ಸ್‌ಪ್ರೆಸ್ ರೈಲು ಕರಾವಳಿ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಈ ರೈಲು ಸೇವೆಯಿಂದ ದಕ್ಷಿಣ ಕನ್ನಡದ ದೇವಾಲಯಗಳು, ಆಸ್ಪತ್ರೆಗಳು, ಕಾಲೇಜುಗಳಿಗೆ ಬರುವ ಜನರಿಗೆ ಅನುಕೂಲವಾಗಿದೆ. ಆದ್ದರಿಂದ ಈ ರೈಲನ್ನು ಕಾಯಂಗೊಳಿಸಬೇಕು ಎಂಬ ಬೇಡಿಕೆ ಇತ್ತು. ಆದರೆ ಈಗ ಮತ್ತೆ ರೈಲು ಸೇವೆ ವಿಸ್ತರಣೆಯಾಗಿದ್ದು, ಕಾಯಂಗೊಳಿಸಿಲ್ಲ.

ವಿಜಯಪುರ-ಮಂಗಳೂರು ಜಂಕ್ಷನ್ ರೈಲು ಸದ್ಯ ತತ್ಕಾಲ್ ಮಾದರಿಯಲ್ಲಿ ಸಂಚಾರವನ್ನು ನಡೆಸುತ್ತಿದೆ. ಆದ್ದರಿಂದ ವಿಶೇಷ ಎಕ್ಸ್‌ಪ್ರೆಸ್ ರೈಲಿನ ದರವಿದೆ. ಈ ರೈಲು ಸೇವೆಯನ್ನು ಕಾಯಂಗೊಳಿಸಿದರೆ ಸಾಮಾನ್ಯ ರೈಲಿನ ದರವನ್ನು ನಿಗದಿ ಮಾಡಲಾಗುತ್ತದೆ. ಆಗ ಹೆಚ್ಚು ಜನರು ಸಂಚಾರ ನಡೆಸಲು ಸಹಾಯಕವಾಗುತ್ತದೆ. ಆದ್ದರಿಂದ ಕಾಯಂಗೊಳಿಸಬೇಕು ಎಂಬ ಬೇಡಿಕೆ ಇದೆ.

ಈ ಕುರಿತು ವಿಜಯಪುರದ ಸಂಸದ ರಮೇಶ್‌ ಜಿಗಜಿಣಗಿ, ರೈಲು ಪ್ರಯಾಣಿಕರ ವೇದಿಕೆಗಳು ನೈಋತ್ಯ ರೈಲ್ವೆಗೆ ಪತ್ರವನ್ನು ಬರೆದಿದ್ದರು. ಆದರೆ ಈಗ ರೈಲು ಸೇವೆ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. ಕಾಯಂಗೊಳಿಸುವ ಕುರಿತು ಯಾವುದೇ ಪ್ರಸ್ತಾಪವನ್ನು ಇಲಾಖೆ ಮಾಡಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+