ವಿಜಯಪುರ-ಮಂಗಳೂರು ರೈಲು ವೇಳಾಪಟ್ಟಿ; ಧರ್ಮಸ್ಥಳ ಭಕ್ತರಿಗೆ ಸಿಹಿಸುದ್ದಿ
ವಿಜಯಪುರ, ಮಾರ್ಚ್ 23: ಭಾರತೀಯ ರೈಲ್ವೆ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯದ ಭಕ್ತರಿಗೆ ಸಿಹಿಸುದ್ದಿ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕ ನಡುವೆ ಸಂಪರ್ಕ ಕಲ್ಪಿಸುವ ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ, ವೇಳಾಪಪಟ್ಟಿಯನ್ನು ಬದಲಾವಣೆ ಮಾಡಿದೆ.
ನೈಋತ್ಯ ರೈಲ್ವೆ ಈ ಕುರಿತು ಆದೇಶವನ್ನು ಹೊರಡಿಸಿದೆ. ರೈಲು ನಂಬರ್ 07377 ವಿಜಯಪುರ (ಬಿಜಾಪುರ)-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು 1/4/2024 ರಿಂದ 30/9/2024ರ ತನಕ ವಿಸ್ತರಣೆ ಮಾಡಲಾಗಿದೆ.

ರೈಲು ನಂಬರ್ 07378. ಮಂಗಳೂರು ಜಂಕ್ಷನ್-ವಿಜಯಪುರ (ಬಿಜಾಪುರ) ರೈಲನ್ನು 2/4/2024 ರಿಂದ 1/10/2024ರ ತನಕ ವಿಸ್ತರಣೆ ಮಾಡಲಾಗಿದೆ. ಈಗಿರುವ ನಿಲ್ದಾಣ, ಬೋಗಿಗಳ ಸಂಯೋಜನೆ, ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.
20223ರ ಡಿಸೆಂಬರ್ನಲ್ಲಿ ವಿಜಯಪುರ-ಮಂಗಳೂರು ಜಂಕ್ಷನ್ ರೈಲನ್ನು ವಿಸ್ತರಣೆ ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿತ್ತು. ರೈಲು ನಂಬರ್ 07377 1/1/2024 ರಿಂದ 31/3/2024ರ ತನಕ ಮತ್ತು ರೈಲು ನಂಬರ್ 07378 2/1/2024 ರಿಂದ 1/4/2024ರ ತನಕ ವಿಸ್ತರಣೆ ಮಾಡಲಾಗಿತ್ತು. ಈಗ ಪುನಃ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ.
ವೇಳಾಪಟ್ಟಿ ಬದಲು: ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್ಪ್ರೆಸ್ ರೈಲು ವೇಳಾಪಟ್ಟಿಯನ್ನು ವಿಜಯಪುರದಿಂದ ಹೊರಡುವಾಗ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.
ವಿಜಯಪುರಿಂದ ಹೊರಡುವ ರೈಲು ಮಂಗಳೂರಿಗೆ 9.30ಕ್ಕೆ ತಲುಪಲಿದೆ. ಇದರಿಂದಾಗಿ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವವರಿಗೆ, ಆರೋಗ್ಯ ಸೇವೆ ಪಡೆಯಲು ಬರುವವರಿಗೆ ಉಪಯೋಗವಾಗಲಿದೆ.
Train timings of Vijayapur-MANGALURU T no 07377/78 has been revised from 1st April 2024 onwards. Also the train has been extended to run till 30 sep. It will help ppl to reach mangalore by 9-30. Special thanks to our MP Sri Ramesh Jigajinagi sir.@KARailway @dkdistrictrail pic.twitter.com/M6yuB0d183
— Vijayapur Railway Horat Samiti (@horat_samiti) March 23, 2024
ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಕಾಯಂಗೊಳಿಸಬೇಕು ಎಂಬ ಪ್ರಯಾಣಿಕರು, ಜನಪ್ರತಿನಿಧಿಗಳ ಬೇಡಿಕೆಗೆ ಈ ಬಾರಿಯೂ ಸಹ ರೈಲ್ವೆ ಇಲಾಖೆ ಮನ್ನಣೆ ನೀಡದಿರುವುದು ಬೇಸರದ ಸಂಗತಿಯಾಗಿದೆ.
ಪ್ರತಿದಿನ ಸಂಚಾರ ನಡೆಸುವ ಈ ವಿಶೇಷ ಎಕ್ಸ್ಪ್ರೆಸ್ ರೈಲು ಕರಾವಳಿ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಈ ರೈಲು ಸೇವೆಯಿಂದ ದಕ್ಷಿಣ ಕನ್ನಡದ ದೇವಾಲಯಗಳು, ಆಸ್ಪತ್ರೆಗಳು, ಕಾಲೇಜುಗಳಿಗೆ ಬರುವ ಜನರಿಗೆ ಅನುಕೂಲವಾಗಿದೆ. ಆದ್ದರಿಂದ ಈ ರೈಲನ್ನು ಕಾಯಂಗೊಳಿಸಬೇಕು ಎಂಬ ಬೇಡಿಕೆ ಇತ್ತು. ಆದರೆ ಈಗ ಮತ್ತೆ ರೈಲು ಸೇವೆ ವಿಸ್ತರಣೆಯಾಗಿದ್ದು, ಕಾಯಂಗೊಳಿಸಿಲ್ಲ.
ವಿಜಯಪುರ-ಮಂಗಳೂರು ಜಂಕ್ಷನ್ ರೈಲು ಸದ್ಯ ತತ್ಕಾಲ್ ಮಾದರಿಯಲ್ಲಿ ಸಂಚಾರವನ್ನು ನಡೆಸುತ್ತಿದೆ. ಆದ್ದರಿಂದ ವಿಶೇಷ ಎಕ್ಸ್ಪ್ರೆಸ್ ರೈಲಿನ ದರವಿದೆ. ಈ ರೈಲು ಸೇವೆಯನ್ನು ಕಾಯಂಗೊಳಿಸಿದರೆ ಸಾಮಾನ್ಯ ರೈಲಿನ ದರವನ್ನು ನಿಗದಿ ಮಾಡಲಾಗುತ್ತದೆ. ಆಗ ಹೆಚ್ಚು ಜನರು ಸಂಚಾರ ನಡೆಸಲು ಸಹಾಯಕವಾಗುತ್ತದೆ. ಆದ್ದರಿಂದ ಕಾಯಂಗೊಳಿಸಬೇಕು ಎಂಬ ಬೇಡಿಕೆ ಇದೆ.
ಈ ಕುರಿತು ವಿಜಯಪುರದ ಸಂಸದ ರಮೇಶ್ ಜಿಗಜಿಣಗಿ, ರೈಲು ಪ್ರಯಾಣಿಕರ ವೇದಿಕೆಗಳು ನೈಋತ್ಯ ರೈಲ್ವೆಗೆ ಪತ್ರವನ್ನು ಬರೆದಿದ್ದರು. ಆದರೆ ಈಗ ರೈಲು ಸೇವೆ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. ಕಾಯಂಗೊಳಿಸುವ ಕುರಿತು ಯಾವುದೇ ಪ್ರಸ್ತಾಪವನ್ನು ಇಲಾಖೆ ಮಾಡಿಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications