ಮೈಸೂರು ಅರಮನೆ ಆವರಣದೊಳಗಿನ ದೇಗುಲಗಳ ದರ್ಶನಕ್ಕೆ ಅವಕಾಶ: ಇಲ್ಲಿದೆ ಸಂಪೂರ್ಣ ಮಾಹಿತಿ
ಮೈಸೂರಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣ ಅರಮನೆ ಆವರಣದಲ್ಲಿ ಅನೇಕ ದೇವಾಲಯಗಳಿದ್ದು, ಅನೇಕ ಪ್ರವಾಸಿಗರಿಗೆ ಈ ಬಗ್ಗೆ ಮಾಹಿತಿ ಇಲ್ಲ. ಇದೀಗ ಈ ದೇವಾಲಯಗಳಿಗೆ ಭಕ್ತರು ತೆರಳಲು ಅರಮನೆ ಮಂಡಳಿ ಭಕ್ತರಿಗೆ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಮೈಸೂರು, ಫೆಬ್ರವರಿ 9: ಮೈಸೂರಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾವಿಲಾಸ ಅರಮನೆ ಆವರಣದಲ್ಲಿ ಹಲವಾರು ದೇಗುಲಗಳಿದ್ದು ಈ ದೇಗುಲಗಳಿಗೆ ಬೆಳಿಗ್ಗೆ ಮತ್ತು ಸಂಜೆ ನಿಗದಿತ ಸಮಯದಲ್ಲಿ ತೆರಳಿ ದೇವರ ದರ್ಶನ ಪಡೆಯಲು ಅರಮನೆ ಮಂಡಳಿ ಭಕ್ತರಿಗೆ ಅವಕಾಶ ಮಾಡಿಕೊಟ್ಟಿದೆ.
ಪ್ರತಿದಿನವೂ ಸಾವಿರಾರು ಪ್ರವಾಸಿಗರು ಬರುತ್ತಿರುತ್ತಾರೆ. ಹೀಗೆ ಬರುವ ಪ್ರವಾಸಿಗರು ಅರಮನೆಯನ್ನು ನೋಡಿಕೊಂಡು ಹಿಂತಿರುಗುತ್ತಾರೆ. ಆದರೆ ಹೆಚ್ಚಿನವರಿಗೆ ಅರಮನೆ ಆವರಣದಲ್ಲಿರುವ ದೇಗುಲಗಳ ಬಗ್ಗೆ ಗೊತ್ತೇ ಆಗುವುದಿಲ್ಲ. ಜೊತೆಗೆ ಸ್ಥಳೀಯರಿಗೆ ಇಲ್ಲಿರುವ ದೇಗುಲಗಳಿಗೆ ತೆರಳಿ ದೇವರ ದರ್ಶನ ಮಾಡಲು ಅವಕಾಶವೇ ಸಿಗುತ್ತಿರಲಿಲ್ಲ. ಇದೀಗ ಇಲ್ಲಿರುವ ದೇಗುಲಗಳಿಗೆ ತೆರಳಿ ದರ್ಶನ ಪಡೆಯಲು ಅವಕಾಶ ಮಾಡಿಕೊಟ್ಟಿರುವುದರಿಂದ ಭಕ್ತರು ಖುಷಿಪಡುವಂತಾಗಿದೆ.
ಅರಮನೆ ಆವರಣದಲ್ಲಿ ಶ್ರೀ ಪ್ರಸನ್ನ ಕೃಷ್ಣಸ್ವಾಮಿ ದೇವಸ್ಥಾನ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನ, ಶ್ರೀ ಲಕ್ಷ್ಮಿರಮಣಸ್ವಾಮಿ ದೇವಸ್ಥಾನ, ಶ್ರೀ ಶ್ವೇತವರಾಹಸ್ವಾಮಿ ದೇವಸ್ಥಾನ, ಶ್ರೀ ಗಾಯತ್ರಿದೇವಿ ದೇವಸ್ಥಾನ, ಶ್ರೀ ತ್ರಿನಯನೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಕಾಲಭೈರವೇಶ್ವರ ದೇವಸ್ಥಾನ, ಶ್ರೀ ಭುವನೇಶ್ವರಿ ದೇವಸ್ಥಾನ, ಕೋಟೆ ಆಂಜನೇಯಸ್ವಾಮಿ ಮೊದಲಾದ ದೇಗುಲಗಳಿವೆ. ಇಲ್ಲಿರುವ ಪ್ರತಿಯೊಂದು ದೇಗುಲವೂ ತನ್ನದೇ ಆದ ಮಹಿಮೆ ಮತ್ತು ಇತಿಹಾಸವನ್ನು ಹೊಂದಿವೆ.

ಅರಮನೆ ದೇವಸ್ಥಾನಗಳ ಬಗ್ಗೆ ಆಡಳಿತ ಮಂಡಳಿಯಿಂದ ಮಾಹಿತಿ
ಈ ದೇಗುಲಗಳಿಗೆ ಭಕ್ತರು ಬೆಳಗ್ಗೆ 6.30 ರಿಂದ 10 ಗಂಟೆ ಹಾಗೂ ಸಂಜೆ 6 ರಿಂದ 8.30 ರವರೆಗೆ ತೆರಳಿ ದೇವರ ದರ್ಶನ ಪಡೆದುಕೊಂಡು ಬರಬಹುದಾಗಿದ್ದು, ಅರಮನೆ ಆವರಣದಲ್ಲಿರುವ ಯಾವ ದೇಗುಲಕ್ಕೆ ಯಾವ ದ್ವಾರದಿಂದ ಹೋಗಬೇಕು ಮತ್ತು ವಾಹನಗಳನ್ನು ಎಲ್ಲಿ ಪಾರ್ಕಿಂಗ್ ಮಾಡಬೇಕು ಎಂಬುದರ ಬಗ್ಗೆ ಅರಮನೆ ಮಂಡಳಿ ಮಾಹಿತಿ ನೀಡಿದೆ. ಅದರಂತೆ ಅರಮನೆ ಆವರಣದಲ್ಲಿರುವ ದೇವಸ್ಥಾನಗಳಿಗೆ ವಾಹನಗಳ ಮೂಲಕ ಬರುವ ಭಕ್ತಾಧಿಗಳು ಪ್ರವೇಶಿಸುವ ದ್ವಾರದ ಹತ್ತಿರವಿರುವ ವಾಹನ ನಿಲ್ದಾಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಪ್ರಮುಖ ದ್ವಾರದ ಮುಖಾಂತರ ದೇವಸ್ಥಾನಕ್ಕೆ ಭದ್ರತಾ ತಪಾಸಣೆಗೊಳಪಟ್ಟ ನಂತರ ತೆರಳ ಬಹುದಾಗಿದೆ. ಶ್ರೀ ಪ್ರಸನ್ನ ಕೃಷ್ಣಸ್ವಾಮಿ ದೇವಸ್ಥಾನ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನ, ಶ್ರೀ ಲಕ್ಷ್ಮಿರಮಣಸ್ವಾಮಿ ದೇವಸ್ಥಾನಗಳಿಗೆ ಅರಮನೆಯ ಕರಿಕಲ್ಲು ತೊಟ್ಟಿ ದ್ವಾರದ ಮೂಲಕ ಪ್ರವೇಶವನ್ನು ಕಲ್ಪಿಸಲಾಗಿದ್ದು, ಕರಿಕಲ್ಲು ತೊಟ್ಟಿ ದ್ವಾರದ ಎಡಭಾಗದಲ್ಲಿರುವ ವಾಹನ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪ್ರವಾಸಿಗರ ವಾಹನ ನಿಲುಗಡೆಗೆ ವ್ಯವಸ್ಥೆ ಎಲ್ಲೆಲ್ಲಿ..?
ಶ್ರೀ ಶ್ವೇತವರಾಹಸ್ವಾಮಿ ದೇವಸ್ಥಾನಕ್ಕೆ ವರಾಹ ದ್ವಾರದ ಮೂಲಕ ಪ್ರವೇಶವನ್ನು ಕಲ್ಪಿಸಲಾಗಿದ್ದು, ವರಾಹ ದ್ವಾರದ ವಾಹನ ನಿಲ್ದಾಣದಲ್ಲಿ ಪಾರ್ಕಿಂಗ್ ಕಲ್ಪಿಸಲಾಗಿದೆ. ಶ್ರೀ ಗಾಯತ್ರಿದೇವಿ ದೇವಸ್ಥಾನ, ಶ್ರೀ ತ್ರಿನಯನೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಕಾಲಭೈರವೇಶ್ವರ ದೇವಸ್ಥಾನಗಳಿಗೆ ಜಯ ಮಾರ್ತಾಂಡ ದ್ವಾರದ ಮೂಲಕ ಪ್ರವೇಶವನ್ನು ಕಲ್ಪಿಸಲಾಗಿದ್ದು, ದೊಡ್ಡಕೆರೆ ಮೈದಾನದಲ್ಲಿನ ವಾಹನ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪಾರ್ಕಿಂಗ್ ವ್ಯವಸ್ಥೆ ಎಲ್ಲೆಲ್ಲಿ..?
ಶ್ರೀಭುವನೇಶ್ವರಿ ದೇವಸ್ಥಾನಕ್ಕೆ ಜಯರಾಮ-ಬಲರಾಮ ದ್ವಾರದ ಮೂಲಕ ಪ್ರವೇಶವನ್ನು ಕಲ್ಪಿಸಿದ್ದು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರವಿರುವ ವಾಹನ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿರುತ್ತದೆ. ಹಿರಿಯ ನಾಗರೀಕರು, ವಿಶೇಷ ಚೇತನರು ಹಾಗೂ ಅನಾರೋಗ್ಯಪೀಡಿತ ವ್ಯಕ್ತಿಗಳು ತಪಾಸಣೆಗೊಳಪಟ್ಟು ಸೂಚಿಸಿರುವ ಪ್ರಮುಖ ದ್ವಾರಗಳ ಮೂಲಕ ದೇವಸ್ಥಾನಕ್ಕೆ ವಾಹನಗಳಲ್ಲಿ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ದೇಗುಲಗಳ ಪ್ರವೇಶದ ಬಗ್ಗೆ ಮಾಹಿತಿ
ಶ್ರೀ ಪ್ರಸನ್ನ ಕೃಷ್ಣಸ್ವಾಮಿ ದೇವಸ್ಥಾನ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನ, ಶ್ರೀ ಲಕ್ಷ್ಮೀರಮಣಸ್ವಾಮಿ ದೇವಸ್ಥಾನಗಳಿಗೆ ಕರಿಕಲ್ಲು ತೊಟ್ಟಿ ದ್ವಾರಗಳ ಮೂಲಕ, ಶ್ರೀ ಶ್ವೇತವರಾಹಸ್ವಾಮಿ ದೇವಸ್ಥಾನಕ್ಕೆ ವರಾಹ ದ್ವಾರದ ಮೂಲಕ ಹಾಗೂ ಶ್ರೀ ಗಾಯತ್ರಿದೇವಿ ದೇವಸ್ಥಾನ, ಶ್ರೀ ತ್ರಿನಯನೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಕಾಲಭೈರವೇಶ್ವರ ದೇವಸ್ಥಾನ ಹಾಗೂ ಶ್ರೀ ಭುವನೇಶ್ವರಿ ದೇವಸ್ಥಾನಗಳಿಗೆ ಕರಿಕಲ್ಲು ತೊಟ್ಟಿ ದ್ವಾರದ ಮೂಲಕ ಪ್ರವೇಶಿಸಿ ಲಕ್ಷ್ಮೀರಮಣಸ್ವಾಮಿ ದೇವಸ್ಥಾನದ ಎಡಭಾಗದಲ್ಲಿರುವ ಮಾರ್ಗದ ಮೂಲಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications