ದೇಹ, ಮನಸ್ಸುಗಳ ಉಲ್ಲಾಸಕ್ಕೆ ನಿಸರ್ಗಧಾಮಕ್ಕೆ ಭೇಟಿ...
ದಣಿದ ದೇಹ, ಮನಸ್ಸಿಗೆ ವಿರಾಮ ಬೇಕು. ಆಹ್ಲಾದಕಾರ ವಾತಾವರಣದಲ್ಲಿ ದಿನ ಕಳೆದು ಬರಬೇಕು. ಆ ಸ್ಥಳ ಬೆಂಗಳೂರಿಗೆ ಹತ್ತಿರವೂ ಇರಬೇಕು. ಹೋಗಿ-ಬರಲು ರಸ್ತೆ ಚೆನ್ನಾಗಿದ್ದು, ನಾವಿರಿಸಿಕೊಂಡ ಉದ್ದೇಶ ಹೋದ ಜಾಗದಲ್ಲಿ ಈಡೇರಬೇಕು ಅಂತೆಲ್ಲಾ ನಿಮಗನಿಸುತ್ತಿದ್ದರೆ ಇಲ್ಲೊಂದು ಸ್ಥಳವಿದೆ.
ಇದರ ಹೆಸರು ನಿಸರ್ಗಧಾಮ. ಮಡಿಕೇರಿಯ ಕುಶಾಲನಗರದಲ್ಲಿ ಇದೆ. ಮೈಸೂರಿಗೆ 95 ಕಿ.ಮೀ., ಕುಶಾಲನಗರಕ್ಕೆ 3 ಕಿ.ಮೀ ದೂರದಲ್ಲಿರುವ ನಿಸರ್ಗಧಾಮವನ್ನು ಅರಣ್ಯ ಇಲಾಖೆಯವರು ನೋಡಿಕೊಳ್ಳುತ್ತಿದ್ದಾರೆ. ಅಂದಹಾಗೆ ಇದು ಮಡಿಕೇರಿ ಹೆದ್ದಾರಿಯಲ್ಲೇ ಇದೆ. 1989ರಲ್ಲಿ ಆರಂಭವಾಗಿರುವ ಈ ನಿಸರ್ಗಧಾಮ 64 ಎಕರೆ ವ್ಯಾಪಿಸಿದೆ. ನಮಗಂತೂ ಈ ಸ್ಥಳ ತಲುಪಿದ ಕ್ಷಣದಲ್ಲಿ ಆದ ಸಂತೋಷ ಅಷ್ಟಿಷ್ಟಲ್ಲ.[ಮೈದುಂಬಿ ಧುಮ್ಮಿಕ್ಕುತಿಹ ಅಬ್ಬಿ ಫಾಲ್ಸ್ ನತ್ತ ಪ್ರವಾಸಿಗರ ದೌಡು]

ಕಾವೇರಿ ನದಿ, ಗಂಧದ ಘಮ
ಸೇತುವೆ ಮೇಲಿಂದ ನಡೆದು ಹೋಗುವಾಗ ಅದರ ಕೆಳಗೆ ಹರಿಯುವ ಕಾವೇರಿ ನದಿಯ ಶಬ್ದ ಕಿವಿಗೆ ತಾಕುತ್ತಿರುತ್ತದೆ. ಸುತ್ತಲೂ ಬಿದಿರ ಮರಗಳು. ಗಂಧದ ಘಮ, ಟೀಕ್ ಮರಗಳ ಮೇಲಿನ ಪ್ರಾಣಿಗಳ ಕೆತ್ತನೆಗೆ ಬಣ್ಣದ ಅಲಂಕಾರ...ಮನೆಯಿಂದ ಹೊರಗೆ ಇಂಥದ್ದೊಂದು ತಾಣಕ್ಕೆ ಬಂದರೆ ದೊರೆಯುವ ಉಲ್ಲಾಸಕ್ಕೆ ಬೆಲೆ ಕಟ್ಟುವುದಕ್ಕೆ ಸಾಧ್ಯವೇ?

ಬುತ್ತಿ ಕಟ್ಟಿಕೊಂಡು ಹೋಗಿ
ಬುತ್ತಿ ಕಟ್ಟಿಕೊಂಡು ಹೋಗಿದ್ದರೆ ಬಿದಿರು ಮನೆಯಲ್ಲಿ ಕೂರಲು ಆರಾಮವಾಗಿರುವ ಕುರ್ಚಿಗಳು, ಪಕ್ಕದಲ್ಲಿಯೇ ನಲ್ಲಿ, ವಾಶ್ ಬೇಸಿನ್, ಕಸ ಹಾಕಲು ತೊಟ್ಟಿ ಎಲ್ಲ ವ್ಯವಸ್ಥೆ ಅಚ್ಚುಕಟ್ಟಾಗಿದೆ. ಮಕ್ಕಳಿಗಾಗಿ ಉಯ್ಯಾಲೆ ಇದೆ. ನಮಗೆ ಕುತೂಹಲ ಅನಿಸಿದ್ದು ಅಲ್ಲಿನ ಕಾಟೇಜ್ ಗಳು. ಪಯಶ್ವಿನಿ, ವಿಜಯಶ್ರೀ ಹೆಸರಿನ ಕಾಟೇಜ್ ನಾವು ನೋಡಿದೆವು. ಅಲ್ಲಿಂದ ಮುಂದೆ ಜಿಂಕೆ ಮೈದಾನ, ಆನೆ ಸವಾರಿ, ವಾಟರ್ ರಾಫ್ಟಿಂಗ್, ದೋಣಿ ವಿಹಾರ ಎಲ್ಲ ಇದೆ.

ಆನೆ ಶಿಬಿರಕ್ಕೆ ಹೋಗಿದ್ವಿ
ಆದರೆ, ನಾವು ಹೋಗಿದ್ದ ದಿನ ಕಾವೇರಿ ನದಿ ಹರಿವು ಜಾಸ್ತಿ ಇದ್ದಿದ್ದರಿಂದ ವಾಟರ್ ರಾಫ್ಟಿಂಗ್, ದೋಣಿ ವಿಹಾರ ನಿಲ್ಲಿಸಿದ್ದರು. ನಿಸರ್ಗಧಾಮಕ್ಕೆ ಹತ್ತಿರದಲ್ಲೇ ಅಂದರೆ ಬರೀ 12 ಕಿ.ಮೀ. ದೂರ ಇದೆ. ಆನೆಗಳ ಶಿಬಿರ ಇಲ್ಲಿದ್ದು, ಅವುಗಳಿಗೆ ಸ್ನಾನ ಮಾಡಿಸುವುದನ್ನು, ಹಣೆಗೆ ಎಣ್ಣೆ ಹಚ್ಚೋದನ್ನ, ಆಹಾರ ತಯಾರು ಮಾಡುವುದನ್ನ ನೋಡಬಹುದು. ಜತೆಗೆ ಆನೆಗಳಿಂದ ಏರ್ಪಡಿಸುವ ಪ್ರದರ್ಶನ ಸಕತ್ತಾಗಿ ಇರುತ್ತೆ.

ಆನೆ ಸವಾರಿ
ದಸರಾ ಆನೆಗಳನ್ನೂ ಇಲ್ಲೇ ಪಳಗಿಸುತ್ತಾರೆ ಎಂದು ಕೇಳಿ ತಿಳಿದೆವು. ಆನೆಗಳ ಚಟುವಟಿಕೆ ನೋಡುವಾಗ ಅವು ಇಷ್ಟಪಡುವ ಪರಿಸರ, ವಿಜ್ಞಾನ, ಇತಿಹಾಸ, ಸಂರಕ್ಷಣೆ ಎಲ್ಲವನ್ನೂ ಪ್ರವಾಸಿಗರಿಗೆ ವಿವರಿಸಿದರು. ಕೊನೆಯಲ್ಲಿ 10-15 ನಿಮಿಷ ಆನೆ ಸವಾರಿಯೂ ಇತ್ತು. ಅದು ಮಕ್ಕಳಿಗೆ ಬಹಳ ಖುಷಿ ನೀಡಿತು.

ಅಬ್ಬಿ ಜಲಪಾತ
ಅರಣ್ಯ ಇಲಾಖೆ ನಡೆಸುವ ಅತಿಥಿ ಗೃಹವೂ ಇರುವುದರಿಂದ ನಿಸರ್ಗಧಾಮ ಹೆಚ್ಚು ಆಕರ್ಷಣೀಯ. ವಸತಿಗೆ ಯಾವುದೇ ಸಮಸ್ಯೆ ಇಲ್ಲ. 40 ಕಿ.ಮೀ. ದೂರದಲ್ಲಿ ತಲಕಾವೇರಿ ಇದೆ. ಅಕ್ಟೋಬರ್ 17ರಂದು ಸಂಕ್ರಮಣ ಇದೆ, ಕಾವೇರಿ ನೀರು ಚಿಮ್ಮುತ್ತದೆ ಎಂದು ತಿಳಿಯಿತು. ಇನ್ನು ಭಾಗಮಂಡಲದಲ್ಲಿ ಗಣಪತಿ, ಭಗಂಡೇಶ್ವರ ಮತ್ತು ಸುಬ್ರಹ್ಮಣ್ಯ ದೇವಸ್ಥಾನಗಳಿದ್ದು, ಮಧ್ಯಾಹ್ನ ಊಟದ ವ್ಯವಸ್ಥೆಯೂ ಇದೆ. ಅದರ ಹತ್ತಿರದಲ್ಲೇ ಅಬ್ಬಿ ಜಲಪಾತವಿದ್ದು, ಪ್ರವಾಸಿಗರಿಗೆ ಮನತಣಿಸುತ್ತದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications