ಮೇ 6, 7ಕ್ಕೆ ಬೆಂಗಳೂರು-ವಿಜಯನಗರ ವಿಶೇಷ ರೈಲು, ವೇಳಾಪಟ್ಟಿ
ಬೆಂಗಳೂರು, ಮೇ 02: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮತದಾನ ನಡೆಯಲಿದ್ದು, ಸಾವಿರಾರು ಜನರು ಬೆಂಗಳೂರು ನಗರದಿಂದ ಮತದಾನ ಮಾಡಲು ಊರುಗಳಿಗೆ ತೆರಳಲಿದ್ದಾರೆ.
ಮತದಾನ ಮಾಡಲು ತೆರಳು ಜನರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರಿನ ಯಶವಂತಪುರ ಮತ್ತು ವಿಜಯನಗರ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಿದೆ. ಈಗಾಗಲೇ ರೈಲಿನ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ.

ಯಶವಂತಪುರ ಮತ್ತು ವಿಜಯನಗರ ನಡುವೆ ರೈಲು ನಂಬರ್ 07319/ 07320 ರೈಲು ಒಂದು ಟ್ರಿಪ್ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ. ಈ ರೈಲು ಮೇ 6ರಂದು ಯಶವಂತಪುರದಿಂದ ಮತ್ತು ಮೇ 7ರಂದು ವಿಜಯನಗರದಿಂದ ಸಂಚಾರ ನಡೆಸಲಿದೆ.
ಒಂದು ಟ್ರಿಪ್ ವಿಶೇಷ ರೈಲು 1 ಎಸಿ 2 ಟೈರ್, 2 ಎಸಿ 2 ಟೈರ್, 8 ಸ್ಲೀಪರ್ ಕೋಚ್, 4 ಜನರಲ್ ಸೆಕೆಂಡ್ ಕ್ಲಾಸ್, 2 ಲಗೇಜ್ ಕಂ ಬ್ರೇಕ್ ವ್ಯಾನ್ ಒಳಗೊಂಡಿದೆ. ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡಬಹುದಾಗಿದೆ.
ರೈಲು ವೇಳಾಪಟ್ಟಿ: ರೈಲು ನಂಬರ್ 07319 ಯಶವಂತಪುರ-ವಿಜಯನಗರ ಮೇ 6ರ ಸೋಮವಾರ 21:55ಕ್ಕೆ ಯಶವಂತಪುರದಿಂದ ಹೊರಡಲಿದೆ. ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ ಜಂಕ್ಷನ್, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ಚಿಕ್ಕೋಡಿ ರೋಡ್, ರಾಯಭಾಗ, ಕುಡಚಿ, ಉಗಾರ ಖುರ್ದಾ ಮೂಲಕ ವಿಜಯನಗರಕ್ಕೆ 10.30ಕ್ಕೆ ತಲುಪಲಿದೆ.
ರೈಲು ನಂಬರ್ 07320 ವಿಜಯನಗರ-ಯಶವಂತಪುರ ರೈಲು ಮೇ 7ರ ಮಂಗಳವಾರ 16:30ಕ್ಕೆ ವಿಜಯನಗರದಿಂದ ಹೊರಡಲಿದೆ. ಉಗಾರ ಖುರ್ದಾ, ಕುಡಚಿ, ರಾಯಭಾಗ, ಚಿಕ್ಕೋಡಿ ರೋಡ್, ಘಟಪ್ರಭಾ, ಗೋಕಾಕ್ ರೋಡ್, ಬೆಳಗಾವಿ, ಲೋಂಡಾ ಜಂಕ್ಷನ್, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಸ್ಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು ಜಂಕ್ಷನ್, ಅರಸೀಕರೆ ಜಂಕ್ಷನ್, ತುಮಕೂರು ಮೂಲಕ ಯಶವಂತಪುರ ಜಂಕ್ಷನ್ಗೆ 5.25ಕ್ಕೆ ಆಗಮಿಸಲಿದೆ.
ಒಂದು ಟ್ರಿಪ್ ಮಾತ್ರ ಸಂಚಾರ ನಡೆಸು ವಿಶೇಷ ರೈಲು ಇದಾಗಿದೆ ಎಂದು ನೈಋತ್ಯ ರೈಲ್ವೆ ಸ್ಪಷ್ಟಪಡಿಸಿದೆ. ಮತದಾನದ ದಿನ ಊರುಗಳಿಗೆ ಬೆಂಗಳೂರು ನಗರದಿಂದ ಸಂಚಾರ ನಡೆಸುವ ಜನರು ಈ ರೈಲಿನ ಉಪಯೋಗ ಪಡೆದುಕೊಳ್ಳಬಹುದಾಗಿದೆ.
ಅಂದಹಾಗೆ ಮೇ 7ರ ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಉತ್ತರ ಕನ್ನಡ, ಧಾರವಾಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
-
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು












Click it and Unblock the Notifications