ಮೇ 6, 7ಕ್ಕೆ ಬೆಂಗಳೂರು-ವಿಜಯನಗರ ವಿಶೇಷ ರೈಲು, ವೇಳಾಪಟ್ಟಿ
ಬೆಂಗಳೂರು, ಮೇ 02: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮತದಾನ ನಡೆಯಲಿದ್ದು, ಸಾವಿರಾರು ಜನರು ಬೆಂಗಳೂರು ನಗರದಿಂದ ಮತದಾನ ಮಾಡಲು ಊರುಗಳಿಗೆ ತೆರಳಲಿದ್ದಾರೆ.
ಮತದಾನ ಮಾಡಲು ತೆರಳು ಜನರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರಿನ ಯಶವಂತಪುರ ಮತ್ತು ವಿಜಯನಗರ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಿದೆ. ಈಗಾಗಲೇ ರೈಲಿನ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ.

ಯಶವಂತಪುರ ಮತ್ತು ವಿಜಯನಗರ ನಡುವೆ ರೈಲು ನಂಬರ್ 07319/ 07320 ರೈಲು ಒಂದು ಟ್ರಿಪ್ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ. ಈ ರೈಲು ಮೇ 6ರಂದು ಯಶವಂತಪುರದಿಂದ ಮತ್ತು ಮೇ 7ರಂದು ವಿಜಯನಗರದಿಂದ ಸಂಚಾರ ನಡೆಸಲಿದೆ.
ಒಂದು ಟ್ರಿಪ್ ವಿಶೇಷ ರೈಲು 1 ಎಸಿ 2 ಟೈರ್, 2 ಎಸಿ 2 ಟೈರ್, 8 ಸ್ಲೀಪರ್ ಕೋಚ್, 4 ಜನರಲ್ ಸೆಕೆಂಡ್ ಕ್ಲಾಸ್, 2 ಲಗೇಜ್ ಕಂ ಬ್ರೇಕ್ ವ್ಯಾನ್ ಒಳಗೊಂಡಿದೆ. ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡಬಹುದಾಗಿದೆ.
ರೈಲು ವೇಳಾಪಟ್ಟಿ: ರೈಲು ನಂಬರ್ 07319 ಯಶವಂತಪುರ-ವಿಜಯನಗರ ಮೇ 6ರ ಸೋಮವಾರ 21:55ಕ್ಕೆ ಯಶವಂತಪುರದಿಂದ ಹೊರಡಲಿದೆ. ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ ಜಂಕ್ಷನ್, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ಚಿಕ್ಕೋಡಿ ರೋಡ್, ರಾಯಭಾಗ, ಕುಡಚಿ, ಉಗಾರ ಖುರ್ದಾ ಮೂಲಕ ವಿಜಯನಗರಕ್ಕೆ 10.30ಕ್ಕೆ ತಲುಪಲಿದೆ.
ರೈಲು ನಂಬರ್ 07320 ವಿಜಯನಗರ-ಯಶವಂತಪುರ ರೈಲು ಮೇ 7ರ ಮಂಗಳವಾರ 16:30ಕ್ಕೆ ವಿಜಯನಗರದಿಂದ ಹೊರಡಲಿದೆ. ಉಗಾರ ಖುರ್ದಾ, ಕುಡಚಿ, ರಾಯಭಾಗ, ಚಿಕ್ಕೋಡಿ ರೋಡ್, ಘಟಪ್ರಭಾ, ಗೋಕಾಕ್ ರೋಡ್, ಬೆಳಗಾವಿ, ಲೋಂಡಾ ಜಂಕ್ಷನ್, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಸ್ಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು ಜಂಕ್ಷನ್, ಅರಸೀಕರೆ ಜಂಕ್ಷನ್, ತುಮಕೂರು ಮೂಲಕ ಯಶವಂತಪುರ ಜಂಕ್ಷನ್ಗೆ 5.25ಕ್ಕೆ ಆಗಮಿಸಲಿದೆ.
ಒಂದು ಟ್ರಿಪ್ ಮಾತ್ರ ಸಂಚಾರ ನಡೆಸು ವಿಶೇಷ ರೈಲು ಇದಾಗಿದೆ ಎಂದು ನೈಋತ್ಯ ರೈಲ್ವೆ ಸ್ಪಷ್ಟಪಡಿಸಿದೆ. ಮತದಾನದ ದಿನ ಊರುಗಳಿಗೆ ಬೆಂಗಳೂರು ನಗರದಿಂದ ಸಂಚಾರ ನಡೆಸುವ ಜನರು ಈ ರೈಲಿನ ಉಪಯೋಗ ಪಡೆದುಕೊಳ್ಳಬಹುದಾಗಿದೆ.
ಅಂದಹಾಗೆ ಮೇ 7ರ ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಉತ್ತರ ಕನ್ನಡ, ಧಾರವಾಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications